ಆ್ಯಪ್ನಗರ

ಯಡಿಯೂರಪ್ಪ ರಾಜಾಹುಲಿ ಇದ್ದಂತೆ, ಸರಕಾರ ಸುಭದ್ರ- ಆರ್‌. ಅಶೋಕ್‌

ರಾಜ್ಯದಲ್ಲಿ ಪ್ರವಾಹ ಉಂಟಾದಾಗ ಹಾಗೂ ಇದೀಗ ಕೋವಿಡ್‌-19 ಸಂದರ್ಭವನ್ನು ಯಡಿಯೂರಪ್ಪ ಸಮರ್ಥವಾಗಿ ನಿಭಾಯಿಸಿದ್ದಾರೆ. ಹೀಗಾಗಿ ಮುಂದೆಯೂ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಅಶೋಕ್‌ ಹೇಳಿದರು.

Vijaya Karnataka 4 Jun 2020, 9:23 pm

ಮಡಿಕೇರಿ: ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ರಾಜಾಹುಲಿ ಇದ್ದಂತೆ. ಹೀಗಾಗಿ ಸರಕಾರಕ್ಕೆ ಯಾವುದೇ ಸಮಸ್ಯೆಯಿಲ್ಲ, ಸುಭದ್ರವಾಗಿದೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ಹೇಳಿದರು.
Vijaya Karnataka Web R Ashok V Somanna


ಮಡಿಕೇರಿಯಲ್ಲಿ ಮಾತನಾಡಿದ ಅವರು, "ಎಲ್ಲಾ ಶಾಸಕರು ಒಗ್ಗಟ್ಟಾಗಿದ್ದಾರೆ. ಮುಂದಿನ ಮೂರು ವರ್ಷ ಬಿಎಸ್‌ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಅವರು ರಾಜ್ಯದಲ್ಲಿ ಪ್ರವಾಹ ಉಂಟಾದಾಗ ಹಾಗೂ ಇದೀಗ ಕೋವಿಡ್‌-19 ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ. ಹೀಗಾಗಿ ಮುಂದೆಯೂ ಯಡಿಯೂರಪ್ಪನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ," ಎಂದು ತಿಳಿಸಿದರು.

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಅವರ ಮಗ ಕಡ್ಲೆಪುರಿ ತಿನ್ನುತ್ತಿದ್ದರಾ? - ಎಸ್‌ಟಿ ಸೋಮಶೇಖರ್‌ ಪ್ರಶ್ನೆ

ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟೀಕೆಗೆ ಪ್ರತಿಕ್ರಿಯಿಸಿದ ಸಚಿವರು, "ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಇಬ್ಬರು ಸಿಎಂಗಳಿದ್ದರು ಎನಿಸುತ್ತದೆ. ಅಥವಾ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಎರಡು ಆಡಳಿತಗಳು ಇದ್ದವು ಎನಿಸುತ್ತದೆ. ಆದರೆ ಬಿಎಸ್‌ ಯಡಿಯೂರಪ್ಪ ಅವರು ಸಮರ್ಥರಿದ್ದಾರೆ. ಅವರು ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾದವರು. ಅವರಿಗೆ ಯಾರ ಸಲಹೆಗಳೂ ಬೇಕಾಗಿಲ್ಲ," ಎಂದು ತಿರುಗೇಟು ನೀಡಿದರು.


ಇನ್ನು ಮಡಿಕೇರಿಗೆ ಗುರುವಾರ ಭೇಟಿ ನೀಡಿದ ಅವರು, 2018ರ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಕೊಡಗು ಜಿಲ್ಲೆಯ ಜಂಬೂರಿನಲ್ಲಿ ಜಿಲ್ಲಾ ಉಸ್ತುವಾರಿ ಮತ್ತು ವಸತಿ ಸಚಿವ ವಿ. ಸೋಮಣ್ಣರವರೊಂದಿಗೆ ಮನೆ ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ