ಆ್ಯಪ್ನಗರ

ಮಾನಭಂಗಕ್ಕೆ ಯತ್ನಿಸಿದ ಯುವಕ ಸೆರೆ

ಉಪ್ಪುತ್ತೋಡು ಗ್ರಾಮದ ಮಹಿಳೆಯೊಬ್ಬರನ್ನು ಮಾನಭಂಗಕ್ಕೆ ಯತ್ನಿಸಿದ ಯುವಕನನ್ನು ಸುಂಟಿಕೊಪ್ಪ ಪೊಲೀಸರು ಬಂಧಿಸಿದ್ದಾರೆ.

Vijaya Karnataka 9 Jul 2019, 5:00 am
ಸುಂಟಿಕೊಪ್ಪ: ಉಪ್ಪುತ್ತೋಡು ಗ್ರಾಮದ ಮಹಿಳೆಯೊಬ್ಬರನ್ನು ಮಾನಭಂಗಕ್ಕೆ ಯತ್ನಿಸಿದ ಯುವಕನನ್ನು ಸುಂಟಿಕೊಪ್ಪ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web capture a young man who tried to rape
ಮಾನಭಂಗಕ್ಕೆ ಯತ್ನಿಸಿದ ಯುವಕ ಸೆರೆ


ತೊಂಡೂರುವಿನ ನಿವಾಸಿ ಕಬೀರ್‌(28) ಬಂಧಿತ ಆರೋಪಿ. ಮಹಿಳೆಯೊಬ್ಬರು ಭಾನುವಾರ ಕೆಲಸದ ನಿಮಿತ್ತ ರಸ್ತೆಯಲ್ಲಿ ನಡೆದುಕೊಂಡು ತೆರಳುತ್ತಿದ್ದ ಸಂದರ್ಭ ಕಬೀರ್‌ ತನ್ನ ಮೇಲೆ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ಸುಂಟಿಕೊಪ್ಪ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದರು. ತಕ್ಷಣ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆಗೆ ಇಳಿದ ಪೊಲೀಸರು ಸೋಮವಾರ ಸಂಜೆ ವೇಳೆ ತೊಂಡುರೂವಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡರು.

ಹಿಂದೆ ಕೂಡ ಈತ 7ನೇ ಹೊಸಕೋಟೆಯ ಮಹಿಳೆಯೊಬ್ಬರ ಮೇಲೆ ಮಾನಭಂಗಕ್ಕೆ ಯತ್ನಿಸಿ 6 ತಿಂಗಳ ಸಜೆ ಅನುಭವಿಸಿ ಜೈಲಿನಿಂದ ಬಿಡುಗಡೆಯಾಗಿದ್ದ. ಇದೀಗ ಮತ್ತೆ ಅದೇ ಚಾಳಿಗೆ ತೊಡಗಿಸಿಕೊಂಡಿರುವುದು ಗ್ರಾಮದ ಮಹಿಳೆಯರಲ್ಲಿ ಅತಂಕ ಉಂಟು ಮಾಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ