ಆ್ಯಪ್ನಗರ

ಕಾರು-ಲಾರಿ ಡಿಕ್ಕಿ: ಬಿಎಸ್‌ವೈ, ಡಿವಿಎಸ್‌ ಅವರ ಮಾಜಿ ಆಪ್ತ ಸಹಾಯಕ ಮೃತ್ಯು

ಬೆಂಗಳೂರಿನಲ್ಲಿ ನೆಲೆಸಿರುವ ಮೂಲತಃ ಕೊಡಗಿನ ಮೂರ್ನಾಡು ಸಮೀಪದ ಕುಂಬಳದಾಳು ಗ್ರಾಮದ ಡಾ. ಕರ್ಣಯನ ಅಪ್ಪಯ್ಯ (50) ಎಂಬವರೇ ಮೃತಪಟ್ಟ ವ್ಯಕ್ತಿ. ತಮ್ಮ ಸಂಬಂಧಿಯೊಬ್ಬರ ವಿವಾಹ ಜೂ.5 ಮತ್ತು 6ರಂದು ಮಡಿಕೇರಿಯಲ್ಲಿ ನಡೆಯಲಿದ್ದು, ಇದರಲ್ಲಿ ಪಾಲ್ಗೊಳ್ಳುವ ಸಲುವಾಗಿ ತಮ್ಮ ಸ್ವಿಫ್ಟ್ ಡಿಸೈರ್ ಕಾರನ್ನು ಸ್ವತಃ ಚಲಾಯಿಸಿಕೊಂಡು ಚೆನ್ನರಾಯಪಟ್ಟಣ ಮಾರ್ಗವಾಗಿ ಮೂರ್ನಾಡಿನತ್ತ ಬರುತ್ತಿದ್ದರು.

Vijaya Karnataka Web 4 Jun 2019, 4:08 pm
ಮಡಿಕೇರಿ: ಲಾರಿ ಹಾಗೂ ಕಾರು ನಡುವೆ ಡಿಕ್ಕಿಯಾಗಿ ನಿವೃತ್ತ ಕೆ.ಎ.ಎಸ್. ಅಧಿಕಾರಿಯೊಬ್ಬರು ದುರ್ಮರಣವನ್ನಪ್ಪಿ ಪತ್ನಿ ಚಿಂತಾಜನಕರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನಲ್ಲಿದ್ದ ಸಾಕುನಾಯಿ ಪ್ರಾಣಾಪಾಯದಿಂದ ಪಾರಾಗಿದೆ.
Vijaya Karnataka Web Appayya


ಬೆಂಗಳೂರಿನಲ್ಲಿ ನೆಲೆಸಿರುವ ಮೂಲತಃ ಕೊಡಗಿನ ಮೂರ್ನಾಡು ಸಮೀಪದ ಕುಂಬಳದಾಳು ಗ್ರಾಮದ ಡಾ. ಕರ್ಣಯನ ಅಪ್ಪಯ್ಯ (50) ಎಂಬವರೇ ಮೃತಪಟ್ಟ ವ್ಯಕ್ತಿ. ತಮ್ಮ ಸಂಬಂಧಿಯೊಬ್ಬರ ವಿವಾಹ ಜೂ.5 ಮತ್ತು 6ರಂದು ಮಡಿಕೇರಿಯಲ್ಲಿ ನಡೆಯಲಿದ್ದು, ಇದರಲ್ಲಿ ಪಾಲ್ಗೊಳ್ಳುವ ಸಲುವಾಗಿ ತಮ್ಮ ಸ್ವಿಫ್ಟ್ ಡಿಸೈರ್ ಕಾರನ್ನು ಸ್ವತಃ ಚಲಾಯಿಸಿಕೊಂಡು ಚೆನ್ನರಾಯಪಟ್ಟಣ ಮಾರ್ಗವಾಗಿ ಮೂರ್ನಾಡಿನತ್ತ ಬರುತ್ತಿದ್ದರು.

ಬೆಳಗ್ಗೆ 11:30ರ ಸಮಯದಲ್ಲಿ ಕುಶಾಲನಗರ ಸಮೀಪದ ತೊರೆನೂರಿನ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಅಪ್ಪಳಿಸಿದೆ. ಇದರಿಂದ ತೀವ್ರ ಗಾಯಗೊಂಡ ಅಪ್ಪಯ್ಯ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪ್ಪಯ್ಯ ಅವರ ಪತ್ನಿಗೆ ಗಂಭೀರ ಗಾಯವಾಗಿದ್ದು ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಅಪ್ಪಯ್ಯ ಅವರು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಡಿ.ವಿ. ಸದಾನಂದಗೌಡರಿಗೆ ಆಪ್ತ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಬ್ ಇನ್ಸ್ ಪೆಕ್ಟರ್ ಸೋಮೇಗೌಡ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ