ಆ್ಯಪ್ನಗರ

ಕಾವೇರಿ ತೀರ್ಥೋದ್ಭವ ಜಾತ್ರೆ: ಸ್ವಯಂ ಸೇವಕರಿಗೆ ಕೊರೊನಾ ಟೆಸ್ಟ್!

ಕಾವೇರಿ ತೀರ್ಥೋದ್ಬವ ಜಾತ್ರಾ ಮಹೋತ್ಸವನ್ನು ಸರಳವಾಗಿ ಆಚರಿಸಲಾಗುವುದು.ಭಾಗವಹಿಸುವ ಸ್ವಯಂ ಸೇವಕರು ಕಡ್ಡಾಯವಾಗಿ ಕೋವಿಡ್-19 ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದು ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿದ್ದಾರೆ.

Vijaya Karnataka 13 Oct 2020, 2:15 pm
ಕೊಡಗು: ಕೋವಿಡ್‌ ಹಿನ್ನೆಲೆಯಲ್ಲಿ ಈ ಬಾರಿಯ ತಲಕಾವೇರಿ ತೀರ್ಥೋದ್ಭವ ಜಾತ್ರಾ ಮಹೋತ್ಸವವನ್ನೂ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ತಿಳಿಸಿದ್ದಾರೆ.
Vijaya Karnataka Web ಕಾವೇರಿ ಜಾತ್ರೆ
ಸಾಂದರ್ಭಿಕ ಚಿತ್ರ


ಅಕ್ಟೋಬರ್ 17 ರಂದು ಕಾವೇರಿ ತೀರ್ಥೋದ್ಭವ ಹಿನ್ನೆಲೆ ತೀರ್ಥೋದ್ಭವದಲ್ಲಿ ಭಾಗವಹಿಸುವ ಸ್ವಯಂ ಸೇವಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದ್ದು, ತೀರ್ಥೋದ್ಬವದ ಬಳಿಕ ದೇವಾಲಯ ಎಂದಿನಂತೆ ತೆರೆದಿರುತ್ತದೆ ಎಂದಿದ್ದಾರೆ.

ತಲಕಾವೇರಿಯಲ್ಲಿ ಅನ್ನದಾನಕ್ಕೆ ಅವಕಾಶ ಇಲ್ಲ. ಬೀದಿ ಅಂಗಡಿಗಳ ತೆರೆಯಲು ಅವಕಾಶ ಇಲ್ಲ. ಹೆಚ್ಚು ಜನರು ಬರುವ ಸಾಧ್ಯತೆ ಇದ್ದರೆ 144 ಸೆಕ್ಷನ್ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದರು.

ಕೊಡಗಿನಲ್ಲಿ 18 ಪರ್ಸೆಂಟಿಗೆ ಏರಿದ ಕೊರೊನಾ ಪೀಡಿತರ ಸಂಖ್ಯೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ ಕೊಡಗಿನಲ್ಲಿ ಹೆಚ್ಚಳವಾಗಿದ್ದು, ಶೇಕಡಾ 2%ಗೆ ಸಾವಿನ ಸಂಖ್ಯೆ ಏರಿದೆ. ಹೊರ ಜಿಲ್ಲೆ, ಹೊರರಾಜ್ಯಗಳಿಂದ ಜನರು ಜಿಲ್ಲೆಗೆ ಆಗಮಿಸುತ್ತಿದ್ದು, ಇದರಿಂದಾಗಿ ಕೋವಿಡ್ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ. ಹೀಗಾಗಿ ದಸರಾ ಮತ್ತು ಕಾವೇರಿ ತೀರ್ಥೋದ್ಬವ ಸಾಂಪ್ರದಾಯಿಕವಾಗಿ ಮಾಡಲು ನಿರ್ಧರಿಸಲಾಗಿದೆ ಎಂದರು.

ದಸರಾದಲ್ಲಿ ಭಾಗವಹಿಸುವ ಸಿಬ್ಬಂದಿ ಮತ್ತು ಕಾರ್ಯಕರ್ತರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿದ್ದು, ಕೋವಿಡ್ ಟೆಸ್ಟ್ ನೆಗೆಟಿವ್ ವರದಿ ಇದ್ದರೆ ಮಾತ್ರ ದಸರಾದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ.

ದಸರಾ ಕರಗ ವೀಕ್ಷಣೆಗೂ ಸಾರ್ವಜನಿಕರಿಗೆ ಅವಕಾಶ ಇಲ್ಲ ಹಾಗೂ ಮೆರವಣಿಗೆ ವೇಳೆ ರಸ್ತೆಯಲ್ಲಿ ನಿಂತು ನೋಡಲು ಸಹ ಅವಕಾಶವಿರುವುದಿಲ್ಲ. ಅ. 17 ಮತ್ತು 26ರಂದು ರಾತ್ರಿ 10 ಗಂಟೆ ಒಳಗೆ ಮೆರವಣಿಗೆ ಮುಗಿಸಲು ಸೂಚನೆ ನೀಡಲಾಗಿದೆ. ಈ ಎರಡು ದಿನ ಪ್ರವಾಸಿ ತಾಣಗಳು ಸಂಪೂರ್ಣ ಬಂದ್ ಮಾಡಲಾಗಿರುತ್ತದೆ. ದಸರಾ ಸಂದರ್ಭ ಯಾವುದೇ ಬೀದಿ ಬದಿ ಅಂಗಡಿ ತೆರೆಯುವಂತಿಲ್ಲ ಎಂದು ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ