ಆ್ಯಪ್ನಗರ

ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆ

ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದೆ.

Vijaya Karnataka 15 Jun 2018, 5:00 am
ಕುಶಾಲನಗರ: ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದೆ.
Vijaya Karnataka Web cauvery river water level increase
ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆ


ಕಾವೇರಿ ನದಿಯಲ್ಲಿ ನೀರಿನ ಹರಿವು ಏರಿಕೆಯಾಗುವುದರೊಂದಿಗೆ ಗ್ರಾಮೀಣ ಪ್ರದೇಶಗಳ ಕೆಲವೆಡೆ ಹೊಲ ಗದ್ದೆಗಳು ಕೂಡ ಜಲಾವೃತವಾಗಿವೆ. ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರದಲ್ಲಿ ಕಾವೇರಿ ನದಿ ಸೇತುವೆ ಬಳಿ ತುಂಬಿ ಹರಿಯುತ್ತಿದೆ. 13 ದಿನಗಳಲ್ಲಿ ಕುಶಾಲನಗರ ಭಾಗದಲ್ಲಿ 125 ಮಿ.ಮೀ.ಗೂ ಅಧಿಕ ಪ್ರಮಾಣ ಮಳೆಯಾಗಿದ್ದು, ಕೊಪ್ಪ ಬಳಿ ಸೇತುವೆ ಕೆಳಭಾಗÜ ನೀರಿನ ಹರಿವಿನ ಮಟ್ಟ 7 ಮೀಟರ್‌ಗಳಷ್ಟು ಏರಿಕೆಯಾಗಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರಯಾಣಿಕರು ಸೇರಿದಂತೆ ಗ್ರಾಮಸ್ಥರು ಸೇತುವೆಯತ್ತ ಲಗ್ಗೆಯಿಡುತ್ತಿದ್ದಾರೆ. ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿರುವ ಕಾರಣ ಮೆಟ್ಟಿಲುಗಳು ಸಂಪೂರ್ಣ ಜಲಾವೃತವಾಗಿವೆ.

ಕುಶಾಲನಗರ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಕಳೆದ 3 ದಿನಗಳಿಂದ ಸಂಜೆ ತನಕ ಮೋಡ ಮಿಶ್ರಿತ ವಾತಾವರಣದೊಂದಿಗೆ ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುತ್ತಿದೆ. ಬುಧವಾರ ಮಧ್ಯರಾತ್ರಿಯಿಂದ ಆರಂಭಗೊಂಡ ಮಳೆ ಬೆಳಗಿನ ತನಕ ಸುರಿಯಿತು. ಈ ಒಂದು ರಾತ್ರಿಯಲ್ಲಿ 22 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯಕ್ಕೆ 3663 ಕ್ಯೂಸೆಕ್‌ ಪ್ರಮಾಣ ನೀರಿನ ಒಳಹರಿವಿದ್ದು , ಜಲಾಶಯದಲ್ಲಿ 2823.58 ಅಡಿಗಳಷ್ಟು ನೀರು ಸಂಗ್ರಹಗೊಂಡಿದೆ.

ಭಾನುವಾರ ಸುರಿದ ಮಳೆಗೆ ಸಮೀಪದ ಗೊಂದಿಬಸವನಹಳ್ಳಿ ಗ್ರಾಮದ ನಿವಾಸಿ ಯೋಗೇಶ್‌ ಎಂಬುವವರಿಗೆ ಸೇರಿದ ದನದ ಕೊಟ್ಟಿಗೆ ಗೋಡೆ ಕುಸಿದಿದ್ದು, ಸ್ಥಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಜಖಂ ಆಗಿರುವುದು ಹೊರತುಪಡಿಸಿ ಯಾವುದೇ ರೀತಿಯ ಆಸ್ತಿಪಾಸ್ತಿ ಹಾಗೂ ಜೀವಹಾನಿ ಸಂಭವಿಸಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ