ಆ್ಯಪ್ನಗರ

ಕೂಡಿಗೆಯಲ್ಲಿ ಆರೋಗ್ಯ ಕೇಂದ್ರ ಸ್ವಚ್ಛತೆಗೆ ಶ್ರಮದಾನ

ಸಮೀಪದ ಕೂಡಿಗೆಯ ಕ್ರೀಡಾ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು.

Vijaya Karnataka Web 12 Jul 2019, 5:00 am
ಕುಶಾಲನಗರ
Vijaya Karnataka Web cleanliness drive in koodige
ಕೂಡಿಗೆಯಲ್ಲಿ ಆರೋಗ್ಯ ಕೇಂದ್ರ ಸ್ವಚ್ಛತೆಗೆ ಶ್ರಮದಾನ


ಸಮೀಪದ ಕೂಡಿಗೆಯ ಕ್ರೀಡಾ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು.

ಆರೋಗ್ಯ ಕೇಂದ್ರದ ಹಿಂಭಾಗ ಮತ್ತು ಆವರಣದಲ್ಲಿ ಬೆಳೆದು ನಿಂತಿದ್ದ ಪಾರ್ಥೇನಿಯಂ ಗಿಡ ಹಾಗೂ ಕುರುಚಲು ಗಿಡಗಳನ್ನು ಕಿತ್ತು ಸ್ವಚ್ಛ ಮಾಡಲಾಯಿತು. ಕೇಂದ್ರದ ಆವರಣದಲ್ಲಿದ್ದ ಪ್ಲಾಸ್ಟಿಕ್‌ ಹಾಗೂ ಇನ್ನಿತರ ಕಸಕಡ್ಡಿಗಳನ್ನು ತೆಗೆದುಹಾಕಲಾಯಿತು.

ಈ ಸಂದರ್ಭ ಮಾತನಾಡಿದ ಕ್ರೀಡಾ ಶಾಲೆಯ ಅಥ್ಲೇಟಿಕ್‌ ತರಬೇತುದಾರ ಅಂಥೋಣಿ ಡಿ'ಸೋಜ, ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ವಿಷಯಗಳಲ್ಲಿಯೂ ತೊಡಗಿಕೊಳ್ಳಬೇಕು. ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರ ಜತೆಗೆ ಸಾಮಾಜಿಕ ಸೇವೆಗಳಲ್ಲಿಯೂ ಸೇವಾ ಮನೋಭಾವನೆಯಿಂದ ತೊಡಗಿಸಿಕೊಳ್ಳುವುದೂ ಮುಖ್ಯ ಎಂದರು.

ಈ ಸಂದರ್ಭ ಹಾಕಿ ತರಬೇತುದಾರರ ವೆಂಕಟೇಶ್‌, ಜಿಮ್ನಾಸ್ಟಿಕ್‌ ತರಬೇತುದಾರ ಕೆ.ವಿ.ಜಗದೀಶ್‌ ಸೇರಿದಂತೆ 150ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ