ಕಾಂಗ್ರೆಸ್ ಹೈಕಮಾಂಡ್ ಏನು ಮಾಡುತ್ತಿದೆ: ಶೋಭಾ ಕರಂದ್ಲಾಜೆ ಪ್ರಶ್ನೆ
ಕುಶಾಲನಗರ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದಕ್ಷ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಾ, ಅಪರಾಧಿಗಳನ್ನು ರಕ್ಷಿಸುತ್ತಾ ಬರುತ್ತಿದೆ. ರಾಜ್ಯದ ಹಿತ ಕಾಪಾಡುವ ಮುಖ್ಯಮಂತ್ರಿಗೆ ಅಪರಾಧಿಗಳನ್ನು ರಕ್ಷಿಸುವುದೇ ಕೆಲಸವೇ...? ಇಷ್ಟೆಲ್ಲ ಸಾಕ್ಷ ್ಯಗಳಿದ್ದರೂ ಕಾಂಗ್ರೆಸ್ ಹೈಕಮಾಂಡ್ ಏನು ಮಾಡುತ್ತಿದೆ...? ಎಂದು ಸಂಸದೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು.
ಕುಶಾಲನಗರ ಸಮೀಪದ ರಂಗಸಮುದ್ರದಲ್ಲಿರುವ ಡಿವೈಎಸ್ಪಿ ಗಣಪತಿ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಡಿ.ಕೆ.ರವಿ ಸಾವಿನ ಸಾಕ್ಷ ್ಯಗಳನ್ನು ನಾಶಪಡಿಸಿ, ನಂತರ ಸಿಬಿಐಗೆ ಒಪ್ಪಿಸಿ ನೈಜ ವರದಿಯನ್ನು ಮುಚ್ಚಿ ಹಾಕಿದರು. ಅಂದಿನಿಂದ ಇಂದಿನವರೆಗೂ ದಕ್ಷ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿರುವ ಸರಕಾರಕ್ಕೆ ಜನರೇ ಪಾಠ ಕಲಿಸುತ್ತಾರೆ''ಎಂದು ಹೇಳಿದರು.
''ದುಃಖದಲ್ಲಿದ್ದ ಮೃತರ ತಂದೆಯಿಂದ ಸುಳ್ಳು ವರದಿಗೆ ಸಹಿ ಮಾಡಿಸಿಕೊಳ್ಳುವುದರೊಂದಿಗೆ ಕುಟುಂಬವೇ ನೀಡಿದ ಹೇಳಿಕೆಯೆನ್ನುತ್ತಾ ಹಾಗೂ ಡಿವೈಎಸ್ಪಿ ಗಣಪತಿ ನೇಣುಹಾಕಿದ ಸ್ಥಿತಿಯಲ್ಲಿದ್ದಾಗ ಕುಟುಂಬದವರು ಬರುವುದಕ್ಕೂ ಮುಂಚೆಯೇ ಸಾಕ್ಷ ್ಯಗಳನ್ನು ನಾಶಪಡಿಸಿ ನಾಟಕವಾಡುತ್ತಿರುವ ಸರಕಾರ ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಹಿಂಜರಿಯುತ್ತಿದೆ. ನ್ಯಾಯ ಸಿಗುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲುವುದಿಲ್ಲ''ಎಂದು ಎಚ್ಚರಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಮನುಮುತ್ತಪ್ಪ, ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಕೆಳಗಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ.ಹರೀಶ್, ಬಿಜೆಪಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿ ಜೋಕಿಂ ರಾಡ್ರಿಗರ್, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಸುಮೇಶ್, ಕೂಡುಮಂಗಳೂರು ಗ್ರಾ.ಪಂ. ಸದಸ್ಯ ಭಾಸ್ಕರ್ನಾಯಕ್, ಬಿಜೆಪಿ ಜಿಲ್ಲಾ ಪದಾಧಿಕಾರಿಗಳಾದ ಕಾಂತಿ ಬೆಳ್ಳಿಯ್ಯಪ್ಪ, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ರೀನಾ ಪ್ರಕಾಶ್ ಮತ್ತಿತರರು ಇದ್ದರು.