ಆ್ಯಪ್ನಗರ

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಗೆಲುವು

ಗ್ರಾಮ ಪಂಚಾಯಿತಿಯ 1ನೇ ವಿಭಾಗದಲ್ಲಿ ತೆರವಾಗಿದ್ದ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್.ಎ.ಆದಿತ್ಯ ಗೆಲುವು ಸಾಧಿಸಿದ್ದಾರೆ.

Vijaya Karnataka Web 1 Sep 2016, 5:15 am
ಶನಿವಾರಸಂತೆ: ಗ್ರಾಮ ಪಂಚಾಯಿತಿಯ 1ನೇ ವಿಭಾಗದಲ್ಲಿ ತೆರವಾಗಿದ್ದ ಒಂದು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್.ಎ.ಆದಿತ್ಯ ಗೆಲುವು ಸಾಧಿಸಿದ್ದಾರೆ.
Vijaya Karnataka Web congress backed candidate wins
ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಗೆಲುವು


ಸೋಮವಾರಪೇಟೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಮರು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಪುನಿತ್, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್.ಎ.ಆದಿತ್ಯ ಹಾಗೂ ಬಂಡಾಯ ಅಭ್ಯರ್ಥಿ ಕೆ.ಟಿ.ಹರೀಶ್ ಸ್ಪರ್ಧಿಸಿದ್ದರು.

ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್.ಅ.ಆದಿತ್ಯ 466 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂ.ವಿ.ಪುನಿತ್‌ಗೆ 372 ಮತ ಲಭ್ಯವಾಗಿದೆ. ಬಂಡಾಯ ಅಭ್ಯರ್ಥಿ ಕೆ.ಟಿ.ಹರೀಶ್ 38 ಮತ ಲಭ್ಯವಾಗಿದೆ.

ಶನಿವಾರಸಂತೆ ಗ್ರಾ.ಪಂ.ಆಡಳಿತ ಮಂಡಳಿಯಲ್ಲಿ 10 ಮಂದಿ ಸದಸ್ಯರನ್ನು ಒಳಗೊಂಡಿದೆ. ಬೆಜೆಪಿ ಬೆಂಬಲಿತ 5 ಮಂದಿ ಸದಸ್ಯರಿದ್ದು ಪ್ರಸ್ತುತ ಗ್ರಾ.ಪಂ.ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಮಹಮದ್‌ಗೌಸ್ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿದ್ದ ಅನಂತ್‌ಕುಮಾರ್ ಅವರು ತಾಪಂ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿದ ಮೇಲೆ ಇದೀಗ ತಾಪಂ ಸದಸ್ಯರಾಗಿ ಸೇವೆಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಈ ಸ್ಥಾನಕ್ಕೆ ಚುನಾವಣೆ ನಡೆದಿತು.

ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ಎ.ಆದಿತ್ಯ ಅವರು ಜಯಗಳಿಸಿದ ಮಾಹಿತಿ ತಿಳಿದಂತೆ ಶನಿವಾರಸಂತೆ ಪಟ್ಟಣದ ಕಾಂಗ್ರೆಸ್ ಕಾರ‌್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ