ಆ್ಯಪ್ನಗರ

ಸಮನ್ವಯ ಸಮಿತಿ: ಸಿದ್ದುಗೆ ನಿರ್ಧರಿಸುವ ಹಕ್ಕಿಲ್ಲ

ಮಡಿಕೇರಿ: ಮೈತ್ರಿ ಸರಕಾರದ ಸಮನ್ವಯ ಸಮಿತಿಯಲ್ಲಿ ಯಾರು ಇರಬೇಕು, ಯಾರು ಇರಬಾರದು ಎಂದು ನಿರ್ಧರಿಸುವ ಹಕ್ಕು ಸಮಿತಿ ಅಧ್ಯಕ್ಷರಿಗಿಲ್ಲ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಅವರು ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆ.

Vijaya Karnataka 27 Aug 2018, 5:00 am
ಮಡಿಕೇರಿ: ಮೈತ್ರಿ ಸರಕಾರದ ಸಮನ್ವಯ ಸಮಿತಿಯಲ್ಲಿ ಯಾರು ಇರಬೇಕು, ಯಾರು ಇರಬಾರದು ಎಂದು ನಿರ್ಧರಿಸುವ ಹಕ್ಕು ಸಮಿತಿ ಅಧ್ಯಕ್ಷರಿಗಿಲ್ಲ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಅವರು ಸಿದ್ದರಾಮಯ್ಯ ಅವರನ್ನು ಕುಟುಕಿದ್ದಾರೆ.
Vijaya Karnataka Web coordination committee no right to decide siddu
ಸಮನ್ವಯ ಸಮಿತಿ: ಸಿದ್ದುಗೆ ನಿರ್ಧರಿಸುವ ಹಕ್ಕಿಲ್ಲ


ಮಡಿಕೇರಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ''ಎರಡು ರಾಜಕೀಯ ಪಕ್ಷಗಳ ಮೈತ್ರಿ ಸರಕಾರ ಇದೆ. ಈ ಪಕ್ಷಗಳನ್ನು ಒಂದಾಗಿ ತೆಗೆದುಕೊಂಡು ಹೋಗುವುದು ಸಮನ್ವಯ ಸಮಿತಿಯ ಕರ್ತವ್ಯ. ಹಿಂದೆ ಸೋನಿಯಾ ಗಾಂಧಿ ಅವರು ಕೇಂದ್ರದಲ್ಲಿ ಯುಪಿಎ ಸರಕಾರ ಇದ್ದಾಗ 22 ಪಕ್ಷಗಳನ್ನು ಸಮನ್ವಯ ಸಮಿತಿ ಮೂಲಕ ಒಟ್ಟಿಗೆ ತೆಗೆದುಕೊಂಡು ಹೋಗಿದ್ದರು. ಈಗ ಎನ್‌ಡಿಎ ಸರಕಾರ ಕೂಡ ಅದೇ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ರಚನೆಯಾಗಿರುವ ಸಮನ್ವಯ ಸಮಿತಿ ಕೂಡ ಈ ಕಾರ್ಯವನ್ನು ನಿರ್ವಹಿಸಬೇಕಿದೆ. ಅದು ಬಿಟ್ಟು ಸಮಿತಿಯಲ್ಲಿ ಯಾರು ಇರಬೇಕು, ಯಾರು ಇರಬಾರದು ಎನ್ನುವುದನ್ನು ನಿರ್ಧರಿಸುವ ಅಧಿಕಾರ ಅಧ್ಯಕ್ಷರಿಗಿಲ್ಲ. ಆಡಳಿತ ಪಕ್ಷಗಳ ಅಧ್ಯಕ್ಷರು ಸಮಿತಿಯಲ್ಲಿ ಇರಬೇಕಿದೆ,'' ಎಂದರು.

''ಸಿದ್ದರಾಮಯ್ಯ ಅವರಿಗೆ ವಿಧಾನ ಸೌಧದಲ್ಲಿ ಸ್ಥಳ ನೀಡಲಾಗಿದೆ. ಅವರು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದಾರೆ. ಒಳ್ಳೆಯ ಉದ್ದೇಶದಿಂದ ರಚನೆಯಾಗಿರುವ ಸಮನ್ವಯ ಸಮಿತಿಯಲ್ಲಿ ಅವರಿಗೆ ವಹಿಸಿರುವ ಜವಾಬ್ದಾರಿಯನ್ನು ನಿರ್ವಹಿಸಲಿ. ಸಮನ್ವಯ ಸಮಿತಿ ಸಭೆ ಕರೆಯಲಿ. ಸರಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಇನ್ನೂ ರಚನೆಯಾಗಿಲ್ಲ. ಅದರತ್ತ ಗಮನ ನೀಡಲಿ. ಅವರು ಪ್ರತಿಪಕ್ಷದ ನಾಯಕರಾಗಿ, ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದವರು. ಅವರ ಸಮ್ಮಿಶ್ರ ಸರಕಾರದ ಯಶಸ್ವಿಗೆ ತಮ್ಮ ಅನುಭವವನ್ನು ಮೀಸಲಿಡಲಿ,'' ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ