ಆ್ಯಪ್ನಗರ

ಕೊಡಗಿನ ಗ್ರಾಮ ಪಂಚಾಯಿತಿಗಳಲ್ಲಿ ಕೊರೊನಾ ಕೇರ್ ಸೆಂಟರ್

Coronavirus Quarantine Centre in Kodagu: ಕೊಡಗಿನ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಕೋವಿಡ್ -19 ಕೇರ್ ಸೆಂಟರ್ ಅನ್ನು ತೆರೆಯಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ​​ಪ್ರತೀ ಹೋಬಳಿ ಕೇಂದ್ರಕ್ಕೆ ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ನೋಡಲ್‌ ಅಧಿಕಾರಿಗಳು ತಮ್ಮ ಹಂತದಲ್ಲಿ ಕೊರೊನಾ ವೈರಸ್‌ ನಿಯಂತ್ರಣ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

Vijaya Karnataka Web 24 Mar 2020, 8:15 am
ಮಡಿಕೇರಿ: ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಕೋವಿಡ್‌- 19 ಕೇರ್‌ ಸೆಂಟರ್‌ ಅನ್ನು ತೆರೆಯಲು ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಮನ್‌ ಡಿ ಪೆನ್ನೇಕರ್‌ ಉಪಸ್ಥಿತಿಯಲ್ಲಿ ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊರೊನಾ ವೈರಸ್‌ ಮುಂದಿನ ಹಂತದಲ್ಲಿಅನುಸರಿಸಬೇಕಾದ ಕ್ರಮಗಳ ಬಗ್ಗೆ ನಡೆದ ಅಧಿಕಾರಿಗಳ ಸಭೆಯಲ್ಲಿಈ ತೀರ್ಮಾನ ಕೈಗೊಳ್ಳಲಾಯಿತು.
Vijaya Karnataka Web coronavirus


ಪ್ರತೀ ಹೋಬಳಿ ಕೇಂದ್ರಕ್ಕೆ ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ನೋಡಲ್‌ ಅಧಿಕಾರಿಗಳು ತಮ್ಮ ಹಂತದಲ್ಲಿ ಕೊರೊನಾ ವೈರಸ್‌ ನಿಯಂತ್ರಣ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ''ಮನೆ ಬಾಗಿಲಿಗೆ ಎರಡು ತಿಂಗಳ ಪಡಿತರ ಬರಲಿದ್ದು, ಬಯೋಮೆಟ್ರಿಕ್‌ ಇರುವುದಿಲ್ಲ ಎಂದು ಹೇಳಿದರು. ಯಾವುದೇ ಕಾರಣಕ್ಕೂ ಗೊಂದಲಕ್ಕೆ ಒಳಗಾಗದೆ ಜನರು ಗುಂಪು ಸೇರಬಾರದು'' ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ''ತರಕಾರಿ, ದಿನಸಿ ಪದಾರ್ಥಗಳ ಅಂಗಡಿಗಳಿಗೆ ಯಾವುದೇ ರೀತಿಯ ತೊಂದರೆಯಿಲ್ಲ. ಉಳಿದಂತೆ ಸರಕಾರದ ನಿರ್ದೇಶನದಂತೆ ಲಾಕ್‌ಡೌನ್‌ ಮಾಡಬೇಕು. ಯಾವುದೇ ಕಾರಣಕ್ಕೂ ಇದರಲ್ಲಿ ವಿನಾಯಿತಿ ಇಲ್ಲ'' ಎಂದು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು. 'ಮನೆ ಸಂಪರ್ಕ ತಡೆಯಲ್ಲಿ 248 ಮಂದಿ ಇದ್ದು, ಇವರು ಎಲ್ಲಿಯೂ ತಿರುಗಾಡದಂತೆ ಕ್ರಮವಹಿಸಬೇಕು. ಮುಂದಿನ ಹಂತದಲ್ಲಿ ಸವಾಲುಗಳನ್ನು ಎದುರಿಸಲು ಇನ್ನಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ' ಎಂದರು.

ಎಸಿ ಟಿ.ಜವರೇಗೌಡ, ಡಿಎಚ್‌ಒ ಡಾ.ಕೆ.ಮೋಹನ್‌, ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಕಾರ್ಯಪ್ಪ ಇತರರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ