ಆ್ಯಪ್ನಗರ

ವೈಚಾರಿಕ ಚಿಂತನೆ ಬೆಳೆಸಿಕೊಳ್ಳಿ

ಮಹಿಳೆಯರು ವೈಚಾರಿಕ ಚಿಂತನೆ ಬೆಳೆಸಿಕೊಳ್ಳುವ ಮೂಲಕ ಕಂದಾಚಾರ, ಮೌಢ್ಯಗಳಂತಹ ಸಾಮಾಜಿಕ ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ಹೋರಾಟ ನಡೆಸುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಸರಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷ ಕ, ಇಕೊ ಕ್ಲಬ್‌ ಸಂಚಾಲಕ ಟಿ.ಜಿ.ಪ್ರೇಮಕುಮಾರ್‌ ಅಭಿಪ್ರಾಯಪಟ್ಟರು.

Vijaya Karnataka 16 Jul 2018, 5:00 am
ಸುಂಟಿಕೊಪ್ಪ: ಮಹಿಳೆಯರು ವೈಚಾರಿಕ ಚಿಂತನೆ ಬೆಳೆಸಿಕೊಳ್ಳುವ ಮೂಲಕ ಕಂದಾಚಾರ, ಮೌಢ್ಯಗಳಂತಹ ಸಾಮಾಜಿಕ ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿ ಹೋರಾಟ ನಡೆಸುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಸರಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷ ಕ, ಇಕೊ ಕ್ಲಬ್‌ ಸಂಚಾಲಕ ಟಿ.ಜಿ.ಪ್ರೇಮಕುಮಾರ್‌ ಅಭಿಪ್ರಾಯಪಟ್ಟರು.
Vijaya Karnataka Web cultivate thinking
ವೈಚಾರಿಕ ಚಿಂತನೆ ಬೆಳೆಸಿಕೊಳ್ಳಿ


ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯದ ಗದ್ದೆಹಳ್ಳ ಒಕ್ಕೂಟದಿಂದ ಆಯೋಜಿಸಿದ್ದ ಮಹಿಳಾ ಸಂಘಟನೆಗಳ ವಾರ್ಷಿಕ ಸಭೆಯಲ್ಲಿ 'ಮಹಿಳೆ ಮತ್ತು ಪರಿಸರ' ಕುರಿತು ಉಪನ್ಯಾಸ ನೀಡಿದರು. ಮಹಿಳೆಯರು ಮನೆಯಿಂದಲೇ ತಮ್ಮ ಮಕ್ಕಳಲ್ಲಿ ಪರಿಸರ ಸ್ವಚ್ಛತೆ, ಆರೋಗ್ಯ ಮತ್ತು ನೈರ್ಮಲ್ಯ ಸಂರಕ್ಷ ಣೆ, ತ್ಯಾಜ್ಯ ನಿರ್ವಹಣೆ, ನೀರಿನ ಮಿತ ಬಳಕೆ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‌ ಬಳಕೆ ಬದಲು ಸಂಘಟನೆ ಮೂಲಕ ಪರ್ಯಾಯವಾಗಿ ಬಟ್ಟೆ, ಸೆಣಬಿನಂತಹ ಪರಿಸರ ಸ್ನೇಹಿ ಬ್ಯಾಗ್‌ಗಳ ಉತ್ಪಾದಿಸಲು ಮಹಿಳೆಯರು ಮುಂದಾಗಬೇಕು. ಆ ಮೂಲಕ ಪರಿಸರ ಸ್ನೇಹಿ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಗ್ರಾಮಾಭಿವೃದ್ಧಿ ಸಂಘದ ಚಟುವಟಿಕೆಗಳು ಮಹಿಳೆಯರಲ್ಲಿ ಆರ್ಥಿಕ ಸಬಲೀಕರಣದೊಂದಿಗೆ ಅವರಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಸಹಕಾರಿಯಾಗಿವೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಯೋಜನೆಯ ಮೇಲ್ವಿಚಾರಕಿ ಕಾಂತಿಕಾಮಣಿ, ಗ್ರಾಮಾಭಿವೃದ್ಧಿ ಯೋಜನೆಯಿಂದ ಗಿಡ ನೆಡುವುದು ಸೇರಿದಂತೆ ಪರಿಸರ ಸ್ವಚ್ಛತಾ ಕಾರ್ಯಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಯೋಜನೆಯ ಸೇವಾ ಪ್ರತಿನಿಧಿ ಜ್ಯೋತಿಲಕ್ಷ್ಮೇ ಅಧ್ಯಕ್ಷ ತೆ ವಹಿಸಿದ್ದರು. ಪದಾಧಿಕಾರಿಗಳಾದ ಸಬೀನಾ, ಲೀಲಾವತಿ, ದಿವ್ಯಾ, ಗೀತಾ ವಿಶ್ವನಾಥ್‌, ಲೀಲಾ ಹಾಜರಿದ್ದರು.

ಯೋಜನೆಯಿಂದ ಕೈಗೊಳ್ಳಬೇಕಾದ ಕಾರ್ಯಯೋಜನೆಗಳ ಕುರಿತು ಸಮಾಲೋಚನೆ ನಡೆಯಿತು.

ಮಹಿಳೆಯರು ಪರಿಸರ ಸಂರಕ್ಷ ಣೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಶಿಕ್ಷ ಕ ಟಿ.ಜಿ.ಪ್ರೇಮಕುಮಾರ್‌ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ