ಮಡಿಕೇರಿ
ಸಾಕಷ್ಟು ಗೊಂದಲಗಳಿಗೆ ಈಡಾಗಿದ್ದ ಮಡಿಕೇರಿ ದಸರಾ ಇದೀಗ ಒಂದು ದಿನದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೀಮಿತವಾಗಿದೆ.
ಅನುದಾನ ಘೋಷಣೆ ವಿಳಂಬ, ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ದಸರಾ ಹೇಗೆ ಆಚರಿಸಬೇಕೆಂಬ ಗೊಂದಲ ಮೂಡಿತ್ತು. ಈ ಹಿಂದೆ ಎರಡು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಲಾಗಿತ್ತು. ಇದೀಗ ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ.
ದಸರಾ ಸಮಿತಿ ಕಾರ್ಯಾಧ್ಯಕ್ಷ ಮಹೇಶ್ ಜೈನಿ ಅವರು ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು. ''ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳನ್ನು ಅ.19 ರಂದು ರಾತ್ರಿ 1.30ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಬೆಳಗ್ಗೆ ನಡೆಯಬೇಕಿದ್ದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಈಗಾಗಲೇ ಕರಗ ಪೂಜೆಯೊಂದಿಗೆ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ,'' ಎಂದು ಹೇಳಿದರು.
''ಜಿಲ್ಲಾ ಉಸ್ತುವಾರಿ ಸಚಿವರು ಸಂಪ್ರದಾಯ ಬದ್ಧವಾಗಿ ನಡೆಯಬೇಕು ಎನ್ನುವ ಆಶಯ ಹೊಂದಿರುವ ಹಿನ್ನೆಲೆಯಲ್ಲಿ ಹಾಗೂ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಎಲ್ಲ ಉಪಸಮಿತಿ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದೆ,'' ಎಂದರು.
'' ಸರಕಾರದಿಂದ ಇನ್ನೂ ಹಣ ಬಂದಿಲ್ಲ. ಈ ಕುರಿತು ಮನವಿ ಸಲ್ಲಿಸಲಾಗಿದೆ. ಸರಳವಾಗಿ ಒಂದು ದಿನದ ಸಾಂಸ್ಕೃತಿಕ ಕಾರ್ಯಕ್ರಮದ ಪಟ್ಟಿಯನ್ನು ಮಾಡಲಾಗಿದೆ. ಕೊಡವ, ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮ್ಯಾಜಿಕ್ ಶೋ, ಸುಗಮ ಸಂಗೀತ, ಚಂಡೆ ವಾದನ ಸೇರಿದಂತೆ ವಿಭಿನ್ನವಾಗಿ ಕಾರ್ಯಕ್ರಮ ನಡೆಯಲಿದೆ,'' ಎಂದು ಹೇಳಿದರು.
ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ''ಅ. 19ರಂದು ಗಾಂಧಿ ಮೈದಾನದಲ್ಲಿ ಸಂಜೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸುತ್ತಾರೆ. ನಂತರ 10.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ನಗರದ ಎಲ್ಲೆಡೆ ಟ್ಯೂಬ್ ಲೈಟ್ಗಳಿಂದ ಬೆಳಕಿನ ವ್ಯವಸ್ಥೆ ಮಾಡಲಾಗುತ್ತಿದೆ. ಕಾವೇರಿ ಕಲಾಕ್ಷೇತ್ರವನ್ನು ನಗರಸಭೆ ವತಿಯಿಂದ ಅಲಂಕರಿಸಲಾಗುವುದು,'' ಎಂದರು.
ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಚುಮ್ಮಿ ದೇವಯ್ಯ ಮಾತನಾಡಿ, ''ದಸರಾವನ್ನು ಸುಗಮವಾಗಿ ನಡೆಸಲು ಸಹಕಾರ ಹಾಗೂ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸಮಿತಿ ಯಿಂದ ಮನವಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಗಾಗಲೇ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ,'' ಎಂದು ಹೇಳಿದರು.
ಗೋಷ್ಠಿಯಲ್ಲಿ ಖಜಾಂಚಿ ಸಂಗೀತಾ ಪ್ರಸನ್ನ ಹಾಜರಿದ್ದರು.
ಹೆಸರಿಗೆ ಮಾತ್ರ ಪದಾಧಿಕಾರಿಗಳು
ದಸರಾ ಸಮಿತಿ ಆಯ್ಕೆಯಲ್ಲಿ ಸಾಕಷ್ಟು ಬದಲಾವಣೆಯಾಗಬೇಕಿದ್ದು, ಹಲವು ಪದಾಧಿಕಾರಿಗಳು ಕೇವಲ ಹೆಸರಿಗೆ ಮಾತ್ರ ಇದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಚುಮ್ಮಿ ದೇವಯ್ಯ ಆಕ್ಷೇಪ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಈ ಬಾರಿ ನಾವು ಸಾಕಷ್ಟು ಸಂದಿಗ್ಧ ಸ್ಥಿತಿಯಲ್ಲಿದ್ದೇವೆ. ಆದರೆ, ಸಮಿತಿಯಲ್ಲಿ ಯಾವುದೇ ಗೊಂದಲ ಇಲ್ಲ. ಸಮಯದ ಅಭಾವದಿಂದ ಕೆಲವೊಂದು ನ್ಯೂನತೆ ಆಗಿರಬಹುದು. ಅವೆಲ್ಲವನ್ನೂ ಮರೆತು ಒಗ್ಗಟ್ಟಿನಲ್ಲಿ ಒಂದು ದಿನದ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದೇವೆ,'' ಎಂದು ಹೇಳಿದರು.
''ದಸರಾ ಸಮಿತಿಯಲ್ಲಿ ಸಾಕಷ್ಟು ಮಂದಿ ಗೌರವ ಅಧ್ಯಕ್ಷರು, ಉಪಾಧ್ಯಕ್ಷರಿದ್ದಾರೆ. ಆದರೆ, ಹಲವರು ಯಾವುದೇ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ. ವೇದಿಕೆ ನಿರ್ಮಾಣಕ್ಕೆ ಅವರಿಂದ ಯಾವುದೇ ಸಹಕಾರ ಸಿಗುತ್ತಿಲ್ಲ. ವೇದಿಕೆ ಕಾರ್ಯಕ್ರಮದಲ್ಲಿ ಮಾತ್ರ ಇವರು ಇರುತ್ತಾರೆ,'' ಎಂದು ಅಸಮಾಧಾನ ವ್ಯಕ್ತಪಡಿಸಿದರು.
''ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಗಾಂಧಿ ಮೈದಾನದಲ್ಲಿ ಹಾಕಲಾಗಿರುವ ವೇದಿಕೆಯನ್ನೇ ದಸರಾಕ್ಕೆ ಮುಂದುವರಿಸಲಾಗುತ್ತಿದೆ. ಇದಕ್ಕೆ ಸುಮಾರು 2 ಲಕ್ಷ ರೂ.ಗಳನ್ನು ಪಾವತಿಸುತ್ತಿದ್ದೇವೆ. ಅದೇ ರೀತಿ 5.5 ಲಕ್ಷ ರೂ. ವೆಚ್ಚದಲ್ಲಿ ನಗರದಲ್ಲಿ ಲೈಟಿಂಗ್ಸ್ ವ್ಯವಸ್ಥೆ ಮಾಡಲಾಗುವುದು. 50 ಸಾವಿರ ರೂ. ವೆಚ್ಚದಲ್ಲಿ ಸಿಸಿಟಿವಿ ಅಳವಡಿಸಲಾಗುವುದು. ಧ್ವನಿವರ್ಧಕ ಸೇರಿದಂತೆ ಎಲ್ಲ ವೆಚ್ಚಗಳಿಗೆ ಸುಮಾರು 8.5 ಲಕ್ಷ ರೂ. ವೆಚ್ಚವಾಗಲಿದೆ ಎಂದು ಹೇಳಿದರು.
ಸಾಕಷ್ಟು ಗೊಂದಲಗಳಿಗೆ ಈಡಾಗಿದ್ದ ಮಡಿಕೇರಿ ದಸರಾ ಇದೀಗ ಒಂದು ದಿನದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೀಮಿತವಾಗಿದೆ.
ಅನುದಾನ ಘೋಷಣೆ ವಿಳಂಬ, ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ದಸರಾ ಹೇಗೆ ಆಚರಿಸಬೇಕೆಂಬ ಗೊಂದಲ ಮೂಡಿತ್ತು. ಈ ಹಿಂದೆ ಎರಡು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಲಾಗಿತ್ತು. ಇದೀಗ ಒಂದು ದಿನಕ್ಕೆ ಸೀಮಿತಗೊಳಿಸಲಾಗಿದೆ.
ದಸರಾ ಸಮಿತಿ ಕಾರ್ಯಾಧ್ಯಕ್ಷ ಮಹೇಶ್ ಜೈನಿ ಅವರು ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು. ''ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಹಾಗೂ ಸ್ಥಳೀಯ ಜನಪ್ರತಿನಿಧಿಗಳನ್ನು ಅ.19 ರಂದು ರಾತ್ರಿ 1.30ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಬೆಳಗ್ಗೆ ನಡೆಯಬೇಕಿದ್ದ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಈಗಾಗಲೇ ಕರಗ ಪೂಜೆಯೊಂದಿಗೆ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ,'' ಎಂದು ಹೇಳಿದರು.
''ಜಿಲ್ಲಾ ಉಸ್ತುವಾರಿ ಸಚಿವರು ಸಂಪ್ರದಾಯ ಬದ್ಧವಾಗಿ ನಡೆಯಬೇಕು ಎನ್ನುವ ಆಶಯ ಹೊಂದಿರುವ ಹಿನ್ನೆಲೆಯಲ್ಲಿ ಹಾಗೂ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಎಲ್ಲ ಉಪಸಮಿತಿ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದೆ,'' ಎಂದರು.
'' ಸರಕಾರದಿಂದ ಇನ್ನೂ ಹಣ ಬಂದಿಲ್ಲ. ಈ ಕುರಿತು ಮನವಿ ಸಲ್ಲಿಸಲಾಗಿದೆ. ಸರಳವಾಗಿ ಒಂದು ದಿನದ ಸಾಂಸ್ಕೃತಿಕ ಕಾರ್ಯಕ್ರಮದ ಪಟ್ಟಿಯನ್ನು ಮಾಡಲಾಗಿದೆ. ಕೊಡವ, ಅರೆಭಾಷೆ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮ್ಯಾಜಿಕ್ ಶೋ, ಸುಗಮ ಸಂಗೀತ, ಚಂಡೆ ವಾದನ ಸೇರಿದಂತೆ ವಿಭಿನ್ನವಾಗಿ ಕಾರ್ಯಕ್ರಮ ನಡೆಯಲಿದೆ,'' ಎಂದು ಹೇಳಿದರು.
ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ''ಅ. 19ರಂದು ಗಾಂಧಿ ಮೈದಾನದಲ್ಲಿ ಸಂಜೆ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸುತ್ತಾರೆ. ನಂತರ 10.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ನಗರದ ಎಲ್ಲೆಡೆ ಟ್ಯೂಬ್ ಲೈಟ್ಗಳಿಂದ ಬೆಳಕಿನ ವ್ಯವಸ್ಥೆ ಮಾಡಲಾಗುತ್ತಿದೆ. ಕಾವೇರಿ ಕಲಾಕ್ಷೇತ್ರವನ್ನು ನಗರಸಭೆ ವತಿಯಿಂದ ಅಲಂಕರಿಸಲಾಗುವುದು,'' ಎಂದರು.
ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಚುಮ್ಮಿ ದೇವಯ್ಯ ಮಾತನಾಡಿ, ''ದಸರಾವನ್ನು ಸುಗಮವಾಗಿ ನಡೆಸಲು ಸಹಕಾರ ಹಾಗೂ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸಮಿತಿ ಯಿಂದ ಮನವಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈಗಾಗಲೇ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ,'' ಎಂದು ಹೇಳಿದರು.
ಗೋಷ್ಠಿಯಲ್ಲಿ ಖಜಾಂಚಿ ಸಂಗೀತಾ ಪ್ರಸನ್ನ ಹಾಜರಿದ್ದರು.
ಹೆಸರಿಗೆ ಮಾತ್ರ ಪದಾಧಿಕಾರಿಗಳು
ದಸರಾ ಸಮಿತಿ ಆಯ್ಕೆಯಲ್ಲಿ ಸಾಕಷ್ಟು ಬದಲಾವಣೆಯಾಗಬೇಕಿದ್ದು, ಹಲವು ಪದಾಧಿಕಾರಿಗಳು ಕೇವಲ ಹೆಸರಿಗೆ ಮಾತ್ರ ಇದ್ದಾರೆ ಎಂದು ಪ್ರಧಾನ ಕಾರ್ಯದರ್ಶಿ ಚುಮ್ಮಿ ದೇವಯ್ಯ ಆಕ್ಷೇಪ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಈ ಬಾರಿ ನಾವು ಸಾಕಷ್ಟು ಸಂದಿಗ್ಧ ಸ್ಥಿತಿಯಲ್ಲಿದ್ದೇವೆ. ಆದರೆ, ಸಮಿತಿಯಲ್ಲಿ ಯಾವುದೇ ಗೊಂದಲ ಇಲ್ಲ. ಸಮಯದ ಅಭಾವದಿಂದ ಕೆಲವೊಂದು ನ್ಯೂನತೆ ಆಗಿರಬಹುದು. ಅವೆಲ್ಲವನ್ನೂ ಮರೆತು ಒಗ್ಗಟ್ಟಿನಲ್ಲಿ ಒಂದು ದಿನದ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದೇವೆ,'' ಎಂದು ಹೇಳಿದರು.
''ದಸರಾ ಸಮಿತಿಯಲ್ಲಿ ಸಾಕಷ್ಟು ಮಂದಿ ಗೌರವ ಅಧ್ಯಕ್ಷರು, ಉಪಾಧ್ಯಕ್ಷರಿದ್ದಾರೆ. ಆದರೆ, ಹಲವರು ಯಾವುದೇ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ. ವೇದಿಕೆ ನಿರ್ಮಾಣಕ್ಕೆ ಅವರಿಂದ ಯಾವುದೇ ಸಹಕಾರ ಸಿಗುತ್ತಿಲ್ಲ. ವೇದಿಕೆ ಕಾರ್ಯಕ್ರಮದಲ್ಲಿ ಮಾತ್ರ ಇವರು ಇರುತ್ತಾರೆ,'' ಎಂದು ಅಸಮಾಧಾನ ವ್ಯಕ್ತಪಡಿಸಿದರು.
''ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಗಾಂಧಿ ಮೈದಾನದಲ್ಲಿ ಹಾಕಲಾಗಿರುವ ವೇದಿಕೆಯನ್ನೇ ದಸರಾಕ್ಕೆ ಮುಂದುವರಿಸಲಾಗುತ್ತಿದೆ. ಇದಕ್ಕೆ ಸುಮಾರು 2 ಲಕ್ಷ ರೂ.ಗಳನ್ನು ಪಾವತಿಸುತ್ತಿದ್ದೇವೆ. ಅದೇ ರೀತಿ 5.5 ಲಕ್ಷ ರೂ. ವೆಚ್ಚದಲ್ಲಿ ನಗರದಲ್ಲಿ ಲೈಟಿಂಗ್ಸ್ ವ್ಯವಸ್ಥೆ ಮಾಡಲಾಗುವುದು. 50 ಸಾವಿರ ರೂ. ವೆಚ್ಚದಲ್ಲಿ ಸಿಸಿಟಿವಿ ಅಳವಡಿಸಲಾಗುವುದು. ಧ್ವನಿವರ್ಧಕ ಸೇರಿದಂತೆ ಎಲ್ಲ ವೆಚ್ಚಗಳಿಗೆ ಸುಮಾರು 8.5 ಲಕ್ಷ ರೂ. ವೆಚ್ಚವಾಗಲಿದೆ ಎಂದು ಹೇಳಿದರು.