ಆ್ಯಪ್ನಗರ

ಕರ್ತವ್ಯಲೋಪ: ಐವರ ಅಮಾನತು

ಕೊಡಗಿನಲ್ಲಿ ಸಂಭವಿಸಿರುವ ಜಲಪ್ರಳಯದ ಪರಿಹಾರ ಕಾರ‍್ಯಕ್ಕೆ ನಿಯೋಜಿಸಿದ್ದ ಐವರು ಅಧಿಕಾರಿಗಳನ್ನು ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Vijaya Karnataka 25 Aug 2018, 5:00 am
ಮಡಿಕೇರಿ: ಕೊಡಗಿನಲ್ಲಿ ಸಂಭವಿಸಿರುವ ಜಲಪ್ರಳಯದ ಪರಿಹಾರ ಕಾರ‍್ಯಕ್ಕೆ ನಿಯೋಜಿಸಿದ್ದ ಐವರು ಅಧಿಕಾರಿಗಳನ್ನು ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Vijaya Karnataka Web dismissal five officers suspended
ಕರ್ತವ್ಯಲೋಪ: ಐವರ ಅಮಾನತು


ಕೆಆರ್‌ಐಡಿಎಲ್‌ ಮಡಿಕೇರಿ(ಹುಣಸೂರು ವಿಭಾಗ) ಕಾರ‍್ಯಪಾಲಕ ಅಭಿಯಂತರ ಪಾಂಡುರಂಗ, ಸಹಾಯಕ ಕಾರ್ಯಪಾಲಕ ಅಭಿಯಂತರ ರಮೇಶ್‌, ಮತ್ತು ಸಹಾಯಕ ಎಂಜಿನಿಯರ್‌ ಪ್ರಮೋದ್‌ ಅವರು ಹಾನಿಗೀಡಾದ ಸಭೆಗಳಿಗೂ ಹಾಜರಾಗದೇ, ಹಾನಿಗೀಡಾದ ಪ್ರದೇಶಗಳಿಗೂ ತೆರಳದ್ದರಿಂದ ಅಮಾನತುಗೊಂಡಿದ್ದಾರೆ. ಮಡಿಕೇರಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮಿ ಬಾಯಿ, ನಿರಾಶ್ರಿತರ ಶಿಬಿರದ ಉಸ್ತುವಾರಿ ವಹಿಸಿದ್ದರೂ ಮದ್ಯಪಾನ ಮಾಡುವುದರೊಂದಿಗೆ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ಪಶುಪಾಲನ ಇಲಾಖೆಯ ಪ್ರಭಾರ ಉಪನಿರ್ದೇಶಕ ಡಾ.ವಿ.ಆರ್‌.ಸುರೇಶ್‌ ಅವರನ್ನು ಅಮಾನತ್ತುಗೊಳಿಸಿ ಜಿಲ್ಲಾಧಿಧಿಕಾರಿ ಆದೇಶ ಹೊರಡಿಸಿದ್ದಾರೆ.

ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನಲ್ಲಿರುವ ನಿರಾಶ್ರಿತರ ಶಿಬಿರದ ಮೇಲ್ವಿಚಾರಣೆ ಸುರೇಶ್‌ ಅವರನ್ನು ವಹಿಸಲಾಗಿತ್ತು. ಇವರು ಆ. 21ರಂದು ಕರ್ತವ್ಯದ ಸಮಯದಲ್ಲಿ ಮದ್ಯಪಾನ ಮಾಡಿದ್ದಾರೆ. ಇವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಮದ್ಯಪಾನ ಮಾಡಿರುವುದು ದೃಢಪಟ್ಟಿದೆ ಎಂದು ಡಿಸಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ