ಆ್ಯಪ್ನಗರ

17ರಂದು ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ

ವಿ ಸೆವೆನ್‌ ಯುವಕ ಸಂಘದ 21ನೇ ವಾರ್ಷಿಕೋತ್ಸವ ಅಂಗವಾಗಿ ಸಿದ್ದಾಪುರ ಚರ್ಚ್‌ ಮೈದಾನದಲ್ಲಿ ಹೊನಲು ಬೆಳಕಿನ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ಎಚ್‌ ಮೂಸ ತಿಳಿಸಿದ್ದಾರೆ.

Vijaya Karnataka 12 Mar 2019, 5:00 am
ಸಿದ್ದಾಪುರ: ವಿ ಸೆವೆನ್‌ ಯುವಕ ಸಂಘದ 21ನೇ ವಾರ್ಷಿಕೋತ್ಸವ ಅಂಗವಾಗಿ ಸಿದ್ದಾಪುರ ಚರ್ಚ್‌ ಮೈದಾನದಲ್ಲಿ ಹೊನಲು ಬೆಳಕಿನ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ಎಚ್‌ ಮೂಸ ತಿಳಿಸಿದ್ದಾರೆ.
Vijaya Karnataka Web district level kabaddi on 17th
17ರಂದು ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ


ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, '' ಜಿಲ್ಲಾ ಕಬಡ್ಡಿ ಅಸೋಸಿಯೇಷನ್‌ ಸಹಕಾರದೊಂದಿಗೆ ಪಂದ್ಯಾವಳಿ ಮಾ.17ರಂದು ನಡೆಯಲಿದೆ. ಹಲವು ವರ್ಷಗಳಿಂದಲೂ ಗ್ರಾಮೀಣ ಕ್ರೀಡೆಯಾದ ಕಬಡ್ಡಿ ಪಂದ್ಯಾವಳಿ ಆಯೋಜಿಸಿ ಜಿಲ್ಲೆಯ ಯುವ ಕ್ರೀಡಾಪಟುಗಳಿಗೆ ಅವಕಾಶ ನೀಡಲಾಗುತ್ತಿದ್ದು, ಜಿಲ್ಲೆಯ 25ಕ್ಕೂ ಹೆಚ್ಚು ತಂಡಗಳು ಹೆಸರು ನೋಂದಾಯಿಸಿಕೊಂಡು ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ. ಉದ್ಘಾಟನಾ ಕಾರ್ಯಕ್ರಮ ದಂದು ಸಾಧಕರಿಗೆ ಸನ್ಮಾನ ಮಾಡಲಾಗುತ್ತಿದೆ . ಜಿಲ್ಲೆಯ ಸಮಾಜ ಸೇವಕರು ಹಾಗೂ ದಾನಿಗಳು ಭಾಗವಹಿಸಲಿದ್ದಾರೆ,'' ಎಂದರು.

''ಪ್ರಥಮ ವಿಜೇತ ತಂಡಕ್ಕೆ 11,111ರೂ. ಮತ್ತು ಟ್ರೋಫಿ, ದ್ವಿತೀಯ ತಂಡಕ್ಕೆ 7,777 ರೂ. ಮತ್ತು ಟ್ರೋಫಿ ,ತೃತೀಯ ತಂಡಕ್ಕೆ 5,555 ರೂ ಮತ್ತು ಟ್ರೋಫಿ

ಹಾಗೂ ಚತುರ್ಥ ಬಹುಮಾನ 3,333 ರೂ. ಟ್ರೋಫಿ ನೀಡಲಾಗುವುದು.

ಇದರೊಂದಿಗೆ ಪಂದ್ಯ ಪುರುಷೋತ್ತಮ, ಉತ್ತಮ ದಾಳಿಗಾರ, ಉತ್ತಮ ಹಿಡಿತಗಾರ, ಉತ್ತಮ ತಂಡಗಳಿಗೆ ಬಹುಮಾನ ನೀಡಲಾಗುವುದು ,''ಎಂದರು.

ಉಪಾಧ್ಯಕ್ಷ ಅಯ್ಯ, ಪ್ರಧಾನ ಕಾರ್ಯದರ್ಶಿ ವಿ.ಕೆ.ಜಾಫರ್‌, ಸಹ ಕಾರ್ಯದರ್ಶಿ ಸಂತೋಷ , ಸಮಿತಿಯ ಪ್ರಮುಖರಾದ ಖಾದರ್‌, ಚಂದ್ರ , ವರ್ಗೀಸ್‌ , ನಾಸೀರ್‌, ಶೇಖರ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ