ಆ್ಯಪ್ನಗರ

ಜಿಲ್ಲೆಯಲ್ಲಿ ಮೋಡ ಬಿತ್ತನೆ ಬೀಡ: ಅಪ್ಪಚ್ಚು

ಕೊಡಗು ಜಿಲ್ಲೆಗೆ ಸೀಮಿತವಾಗುವಂತೆ ಮೋಡ ಬಿತ್ತನೆ ಕಾರ್ಯವನ್ನು ಕೈ ಬೀಡುವಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್‌ ಕೋರಿದ್ದಾರೆ.

Vijaya Karnataka 8 Jun 2019, 5:00 am
ಮಡಿಕೇರಿ: ಕೊಡಗು ಜಿಲ್ಲೆಗೆ ಸೀಮಿತವಾಗುವಂತೆ ಮೋಡ ಬಿತ್ತನೆ ಕಾರ್ಯವನ್ನು ಕೈ ಬೀಡುವಂತೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್‌ ಕೋರಿದ್ದಾರೆ.
Vijaya Karnataka Web do not sow the cloud
ಜಿಲ್ಲೆಯಲ್ಲಿ ಮೋಡ ಬಿತ್ತನೆ ಬೀಡ: ಅಪ್ಪಚ್ಚು


ಕೊಡಗು ಜಿಲ್ಲೆಯಲ್ಲಿ 2018ರ ಆಗಸ್ಟ್‌ ತಿಂಗಳಿನಿಂದ ಸುರಿದ ಭಾರಿ ಮಳೆಯಿಂದ ಜಲ ಪ್ರಳಯ ಉಂಟಾಗಿ ಇಲ್ಲಿ ಅತೀ ಹೆಚ್ಚು ಅನಾಹುತ ಆಗಿರುವುದು ಎಲ್ಲರಿಗೂ ತಿಳಿದ ವಿಷಯವಾಗಿದೆ. ಆದರೆ, ಈಗ ಸರಕಾರದಿಂದ ಮೋಡ ಬಿತ್ತನೆಗೆ ಮುಂದಾಗಿರುವುದು ತಿಳಿದು ಬಂದಿದೆ. ಒಂದೆಡೆ ಹವಾಮಾನ ಇಲಾಖೆ 2019ರ ಮಳೆಗಾಲದಲ್ಲಿ ಅತೀ ಹೆಚ್ಚು ಮಳೆ ಬೀಳಬಹುದೆಂದು ಹಾಗೂ ಈ ಹಿಂದಿನಂತೆಯೇ ಜಲ ಪ್ರಳಯ ಉಂಟಾಗಬಹುದೆಂದು ಮುನ್ಸೂಚನೆ ನೀಡಿದ್ದು, ಈ ಸಮಯದಲ್ಲಿ ಮೋಡ ಬಿತ್ತನೆ ಮಾಡಿದರೆ ಇನ್ನೂ ಹೆಚ್ಚಾಗಿ ಮಳೆ ಬೀಳುವುದರಿಂದ ಕಳೆದ ಸಾಲಿಗಿಂತ ಈ ಸಾಲಿಗೆ ಅತೀ ಹೆಚ್ಚು ಮಳೆ ಬಿದ್ದು, ಅನಾಹುತ ಹೆಚ್ಚಾಗುತ್ತದೆ. ಅಲ್ಲದೇ, ಮೋಡ ಬಿತ್ತನೆಗೆ ಉಪಯೋಗಿಸುವ ರಾಸಾಯನಿಕವು ಸಸ್ಯ ಸಂಕುಲ, ಪ್ರಾಣಿ ಸಂಕುಲ ಮಾನವ ಹಾಗೂ ಮಣ್ಣಿನ ಮೇಲೆ ದುಷ್ಪರಿಣಾಮ ಬೀರುವುದರಿಂದ ಮೋಡ ಬಿತ್ತನೆ ಕೈ ಬಿಡಬೇಕು ಎಂದು ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ