ಆ್ಯಪ್ನಗರ

ಭೂಕಂಪನ ವದಂತಿಗೆ ಕಿವಿಗೊಡಬೇಡಿ: ಕೊಡಗು ಜಿಲ್ಲಾಧಿಕಾರಿ ಮನವಿ

ಜಿಲ್ಲೆಯಲ್ಲಿ ಭೂ ಕಂಪನ ಸಂಭವಿಸಲಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆರೆಗೆ ಸಿಲುಕಿರುವ ಕೊಡಗಿನ ಜನತೆ ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ.

Vijaya Karnataka Web 18 Aug 2018, 6:04 pm
ಕೊಡಗು: ಜಿಲ್ಲೆಯಲ್ಲಿ ಭೂ ಕಂಪನ ಸಂಭವಿಸಲಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆರೆಗೆ ಸಿಲುಕಿರುವ ಕೊಡಗಿನ ಜನತೆ ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ.
Vijaya Karnataka Web earth q


ವದಂತಿ ಸಂಬಂಧ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಅಥವಾ ಭೂ ವಿಜ್ಞಾನ ಇಲಾಖೆ ಯಾವುದೇ ಮುನ್ಸೂಚನೆ ನೀಡಿಲ್ಲ. ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಕೊಡಗಿನ ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಶನಿವಾರ ಮುಂಜಾನೆಯಿಂದಲೇ ಈ ರೀತಿಯ ವದಂತಿ ಹಬ್ಬಿದೆ. ಈಗಾಗಲೇ ಪ್ರವಾಹ ಸ್ಥಿತಿಯಿಂದ ತತ್ತರಿಸಿರುವ ಕೊಡಗಿನ ಜನತೆ, ಈಗ ಭೂಕಂಪನ ವಂದತಿಯಿಂದ ಆತಂಕ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ