ಆ್ಯಪ್ನಗರ

ಗಮನ ಸೆಳೆದ ಮಕ್ಕಳ ಛದ್ಮವೇಷ

ಮೂರ್ನಾಡು: ಮೂರ್ನಾಡು ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆ ಅಂಗವಾಗಿ ಛದ್ಮವೇಷ ಸ್ಪರ್ಧೆ ನಡೆಯಿತು.

ವಿಕ ಸುದ್ದಿಲೋಕ 15 Nov 2016, 4:04 am
ಮೂರ್ನಾಡು: ಮೂರ್ನಾಡು ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆ ಅಂಗವಾಗಿ ಛದ್ಮವೇಷ ಸ್ಪರ್ಧೆ ನಡೆಯಿತು.
Vijaya Karnataka Web drew attention to the childrens disguise
ಗಮನ ಸೆಳೆದ ಮಕ್ಕಳ ಛದ್ಮವೇಷ


ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ವಿದ್ಯಾಸಂಸ್ಥೆ ಹಾಗೂ ಮಡಿಕೇರಿ ವ್ಯಾಂಡಮ್ ಎಂಟರ್‌ಪ್ರೆಸಸ್ ವತಿಯಿಂದ ಆಯೋಜಿಸಲಾದ ಕಾರ್ಯಕ್ರಮವನ್ನು ವ್ಯಾಂಡಮ್ ಎಂಟರ್ ಪ್ರೆಸಸ್ ಮಾಲೀಕ ದಾಮೋದರ್ ಉದ್ಘಾಟನೆ ಮಾಡಿದರು.

ವಿದ್ಯಾಸಂಸ್ಥೆ ಕಾರ್ಯದರ್ಶಿ ಚೌರೀರ ಎಂ. ಪೆಮ್ಮಯ್ಯ ಮಾತನಾಡಿ, ವಿದ್ಯಾಸಂಸ್ಥೆ ಮಧ್ಯಮ ವರ್ಗದ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣವನ್ನು ಒದಗಿಸುವ ಗುರಿ ಹೊಂದಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ವಿದ್ಯಾಸಂಸ್ಥೆ ನಿರಂತರ ಶ್ರಮಿಸುತ್ತಿದೆ ಎಂದರು.

ಪ್ರಾಥಮಿಕ ಶಾಲಾ ನಾಯಕ ಕವನ್ ಕಾಳಯ್ಯ, ಶಾಲಾ ಉಪ ನಾಯಕಿ ದಿಯ ದೇವಯ್ಯ, ಕ್ರೀಡಾನಾಯಕ ಚಿಂತನ್ ನಾಣಯ್ಯ, ವಿದ್ಯಾಸಂಸ್ಥೆ ಉಪಾಧ್ಯಕ್ಷ ಪಳಂಗಂಡ ಎಸ್. ಮುದ್ದಪ್ಪ, ನಿರ್ದೇಶಕ ಪೆಮ್ಮುಡಿಯಂಡ ವೇಣು ಅಪ್ಪಣ್ಣ, ಈರಮಂಡ ಸೋಮಣ್ಣ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಎಸ್.ಡಿ. ಪ್ರಶಾಂತ್ ಉಪಸ್ಥಿತರಿದ್ದರು.

ಎಲ್‌ಕೆಜಿ ಯಿಂದ ನಾಲ್ಕನೇ ತರಗತಿವರೆಗಿನ ವಿದ್ಯಾರ್ಥಿಗಳು ನಾನಾ ರೀತಿಯ ವೇಷಭೂಷಣ ಧರಿಸಿ ಗಮನ ಸೆಳೆದರು. ಸ್ವಾಮಿ ವಿವೇಕಾನಂದ, ನರೇಂದ್ರ ಮೋದಿ, ಈಶ್ವರ, ಛತ್ರಪತಿ ಶಿವಾಜಿ, ಮಹಾತ್ಮ ಗಾಂಧಿ, ಸಾನಿಯಾ ಮಿರ್ಜಾ, ಜವಾಹರಲಾಲ್ ನೆಹರು, ಹೀಗೆ ಹತ್ತು ಹಲವು ವೇಷಗಳನ್ನು ಧರಿಸಿದ ಪುಣಾಣಿ ಮಕ್ಕಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಖುಷಿ ಪಟ್ಟರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ