ಸೋಮವಾರಪೇಟೆ: ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಕ್ರೀಡಾಕೂಟಗಳು ಸಹಕಾರಿ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು.
ಸಮೀಪದ ತಾಕೇರಿ ಗ್ರಾಮದ ಉಮಾಮಹೇಶ್ವರಿ ಗ್ರಾಮಾಭಿವೃದ್ಧಿ ಮಂಡಳಿ ಹಾಗೂ ತಾಕೇರಿ ವಾಲಿಬಾಲ್ ಅಸೋಸಿಯೇಶನ್ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಸಮುದಾಯ ಭವನದ ಮೈದಾನದಲ್ಲಿ ಆಯೋಜಿಸಿದ್ದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.
ಕೊಡಗು ಜಿಲ್ಲೆ ಕ್ರೀಡೆಗಳ ತವರೂರು, ಕ್ರೀಡಾ ಕ್ಷೇತ್ರದಲ್ಲಿರುವ ಬಹುತೇಕ ಯುವಕ ಯುವತಿಯರು ಉತ್ತಮ ಹುದ್ದೆಗಳನ್ನು ಅಲಂಕರಿಸಿ, ಬದುಕು ಕಂಡುಕೊಂಡಿದ್ದಾರೆ ಎಂದರು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಗ್ರಾಮೀಣ ಕ್ರೀಡೆಗಳನ್ನು ಪ್ರೋತ್ಸಾಹಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಎಂ. ಮಹೇಶ್, ತಾಪಂ ಸದಸ್ಯ ತಾಕೇರಿ ಸತೀಶ್, ಎಪಿಎಂಸಿ ಸದಸ್ಯೆ ಸುಮಿತ್ರ ಪೊನ್ನಪ್ಪ, ಕಿರಗಂದೂರು ಗ್ರಾಪಂ ಉಪಾಧ್ಯಕ್ಷ ಎಸ್.ಬಿ.ಸುರೇಂದ್ರ, ಸದಸ್ಯೆ ಸುನು ಕಿಶೋರ್, ತಾಪಂ ಮಾಜಿ ಅಧ್ಯಕ್ಷ ಎಂ.ಪಿ.ಮುತ್ತಣ್ಣ, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ,
ಪುರುಷರ ವಾಲಿಬಾಲ್ನಲ್ಲಿ 14 ತಂಡಗಳು, ಮಹಿಳೆಯರ ಥ್ರೋಬಾಲ್ನಲ್ಲಿ 4 ತಂಡಗಳು ಭಾಗವಹಿಸಿದ್ದವು. ಹಗ್ಗ ಜಗ್ಗಾಟ, ಗುಡ್ಡಗಾಡು ಓಟದ ಸ್ಪರ್ಧೆಗಳು ನಡೆದವು.