ಆ್ಯಪ್ನಗರ

ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ವೃದ್ಧೆಗೆ ಗಾಯ

ಕಾವೇರಿ ನಿಸರ್ಗಧಾಮದ ಬಳಿ ಶನಿವಾರ ಬೆಳಗ್ಗೆ ಚಲಿಸುತ್ತಿದ್ದ ಸಾರಿಗೆ ಬಸ್‌ನಿಂದ ವೃದ್ಧ ಮಹಿಳೆಯೊಬ್ಬರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.

Vijaya Karnataka 16 Jun 2019, 5:00 am
ಕುಶಾಲನಗರ
Vijaya Karnataka Web elderly woman injured
ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ವೃದ್ಧೆಗೆ ಗಾಯ


ಕಾವೇರಿ ನಿಸರ್ಗಧಾಮದ ಬಳಿ ಶನಿವಾರ ಬೆಳಗ್ಗೆ ಚಲಿಸುತ್ತಿದ್ದ ಸಾರಿಗೆ ಬಸ್‌ನಿಂದ ವೃದ್ಧ ಮಹಿಳೆಯೊಬ್ಬರು ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ.

ಬೈಲುಕುಪ್ಪೆಯ ಬಾಳಕಟ್ಟೆ ನಿವಾಸಿ ಕಾಳಮ್ಮ (60) ಗಾಯಾಳು.

ಕುಶಾಲನಗರದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಸಾರಿಗೆ ಬಸ್‌ನಲ್ಲಿ ಸಂಚರಿಸುತ್ತಿದ್ದ ಕಾಳಮ್ಮ ನಿಸರ್ಗಧಾಮದ ಬಳಿ ಇಳಿಯಲು ಮುಂದಾಗುತ್ತಿದ್ದಂತೆ ಏಕಾಏಕಿ ಬಸ್‌ ಬಾಗಿಲು ತೆರೆದುಕೊಂಡಿದೆ. ಘಟನೆಯಲ್ಲಿ ತಲೆಗೆ ಪೆಟ್ಟಾದ ಕಾರಣ ಪ್ರಜ್ಞೆ ಕಳೆದುಕೊಂಡ ಕಾಳಮ್ಮ ಅವರನ್ನು ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಸಾಗಿಸಲಾಗಿದೆ.

ಮಹಿಳೆಯ ಹೆಚ್ಚಿನ ಚಿಕಿತ್ಸೆಗೆ ಸಾರಿಗೆ ಇಲಾಖೆ 15 ಸಾವಿರ ರೂ. ಪರಿಹಾರ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ಸಂಚಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ