ಆ್ಯಪ್ನಗರ

ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ

ಜಿಲ್ಲೆಯು ದೇಶಕ್ಕೆ ಸೈನಿಕರು, ಕ್ರೀಡಾಪಟುಗಳನ್ನು ಅಧಿಕ ಸಂಖ್ಯೆಯಲ್ಲಿ ಕೊಡುಗೆಯಾಗಿ ನೀಡಿದ್ದು, ಇನ್ನಷ್ಟು ಕ್ರೀಡಾ ಪ್ರತಿಭೆಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆಗೆ ಮುಂದಾಗಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

Vijaya Karnataka 14 Oct 2017, 5:15 am
ಸುಂಟಿಕೊಪ್ಪ: ಜಿಲ್ಲೆಯು ದೇಶಕ್ಕೆ ಸೈನಿಕರು, ಕ್ರೀಡಾಪಟುಗಳನ್ನು ಅಧಿಕ ಸಂಖ್ಯೆಯಲ್ಲಿ ಕೊಡುಗೆಯಾಗಿ ನೀಡಿದ್ದು, ಇನ್ನಷ್ಟು ಕ್ರೀಡಾ ಪ್ರತಿಭೆಗಳು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಾಧನೆಗೆ ಮುಂದಾಗಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.
Vijaya Karnataka Web encourage and recognize the talent of children
ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ


ಮಾದಾಪುರ ಡಿ. ಚೆನ್ನಮ್ಮ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಜಿಪಂ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಮಾದಾಪುರ ಚೆನ್ನಮ್ಮ ಕಾಲೇಜು ಆಡಳಿತ ಮಂಡಳಿ ಸಹಯೋಗದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.

125 ಕೋಟಿ ಜನಸಂಖ್ಯೆಯಿರುವ ಭಾರತ ದೇಶ ಒಲಂಪಿಕ್ ಕ್ರೀಡೆಯಲ್ಲಿ ಪದಕ ಪಟ್ಟಿಯಲ್ಲಿ ಗಣನೀಯ ಸಾಧನೆ ಮಾಡುತ್ತಿಲ್ಲ. ಆದರೆ, ರಷ್ಯಾ, ಆಮೇರಿಕಾ ಜತೆಗೆ ಚಿಕ್ಕ ದೇಶವಾದ ಉತ್ತರಕೋರಿ ಕ್ರೀಡಾಕೂಟದಲ್ಲಿ ಪದಕಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುತ್ತಿದ್ದಾರೆ. ನಮ್ಮ ದೇಶದಲ್ಲಿ ಪೋಷಕರು ಮಕ್ಕಳಿಗೆ ಕ್ರೀಡಾಕೂಟದಲ್ಲಿ ಹೆಚ್ಚು ಪ್ರೋತ್ಸಾಹ ನೀಡಿದಾಗ ಮಾತ್ರ ಒಲಂಪಿಕ್ ನಂತ ಕ್ರೀಡಾಕೂಟದಲ್ಲಿ ಪದಕ ಗಳಿಸಲು ಸಾಧ್ಯ ಎಂದರು.

ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ದಾನೋಜಿ ಮಾತನಾಡಿ, ಪ್ರಾಥಮಿಕ ಶಾಲಾ ಮಟ್ಟದಿಂದ ಲೇ ದೈಹಿಕ ಶಿಕ್ಷಕರು ಮಕ್ಕಳಿಗೆ ಯಾವ ಕ್ರೀಡೆಯಲ್ಲಿ ಆಸಕ್ತಿ ಇದೆ ಎಂಬುದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು. ಜತೆಗೆ ಮಕ್ಕಳಿಗೆ ಕ್ರೀಡೆಯ ಬಗ್ಗೆ ಅಗತ್ಯ ತರಬೇತಿ ನೀಡಿದಾಗ ಕ್ರೀಡಾ ಕ್ಷೇತ್ರದಲ್ಲಿ ಭಾರತ ದೇಶ ಇನ್ನಷ್ಟು ಸಾಧನೆ ಮಾಡುವಲ್ಲಿ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಮಾದಾಪುರ ಡಿ.ಚೆನ್ನಮ್ಮ ಎಜುಕೇಷನ್ ಸೊಸೈಟಿ ಅಧ್ಯಕ್ಷ ಕರ್ನಲ್ ಬಿಜಿವಿ ಕುಮಾರ್ ಮಾತನಾಡಿ, ಜಿಲ್ಲಾ ಮಟ್ಟದ ಕ್ರೀಡಾಕೂಟ ನಮ್ಮ ಸಂಸ್ಥೆಯ ಮ್ಯದಾನದಲ್ಲಿ ನಡೆಯುತ್ತಿ ರುವುದು ಸಂಸ್ಥೆಗೆ ಈ ಊರಿಗೆ ಹೆಮ್ಮೆಯ ವಿಚಾರವಾಗಿದೆ. ಕ್ರೀಡಾಪಟುಗಳು ತಮ್ಮ ಪ್ರತಿಭೆಯನ್ನು ಹೊರ ಹೊಮ್ಮಿಸುವಂತಾಗಲಿ ಎಂದರು.
ತಾಪಂ ಉಪಾಧ್ಯಕ್ಷ ಅಭಿಮನ್ಯು ಕುಮಾರ್ ಮಾತನಾಡಿದರು.

ಗ್ರಾ.ಪಂ.ಅಧ್ಯಕ್ಷೆ ಶೈಲಾಜಾ, ಚೆನ್ನಮ್ಮ ಎಜುಕೇಷನ್ ಸೊಸೈಟಿ ಉಪಾಧ್ಯಕ್ಷ ಎಂ.ಜಿ.ಬೋಪಣ್ಣ, ಕಾರ್ಯ ದರ್ಶಿ ಎಂ.ಬಿ. ಬೋಪಣ್ಣ, ನಿರ್ದೇಶಕರಾದ ಅನಿಲ್ ಪೊನ್ನಪ್ಪ, ಕೋದಂಡ ಮುದ್ದಪ್ಪ, ಎಂ.ಸಿ. ಬೋಜಮ್ಮ, ಸೀತಾ ಚೆಟ್ಟಿಯಪ್ಪ, ಜಾನಕ್ಕಿ ಕೆ.ಎಸ್.ಪ್ರಕಾಶ್, ಸೊಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜು, ಸೋಮವಾರಪೇಟೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ವೆಂಕಟೇಶ,ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್, ಸೋಮವಾರಪೇಟೆ ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಚೇತನ, ವಿವಿಧ ಶಾಲೆಗಳ ಶಿಕ್ಷಕರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ