ಆ್ಯಪ್ನಗರ

ನಿವೃತ್ತ ಶಿಕ್ಷಕಿಗೆ ಬೀಳ್ಕೊಡುಗೆ

ಸಮೀಪದ ಗದ್ದೆಹಳ್ಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 6 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ತಾರಾಮಣಿ ಅವರನ್ನು ಎಸ್‌ಡಿಎಂಸಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.

Vijaya Karnataka 3 Jul 2018, 5:00 am
ಸುಂಟಿಕೊಪ್ಪ: ಸಮೀಪದ ಗದ್ದೆಹಳ್ಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 6 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕಿ ತಾರಾಮಣಿ ಅವರನ್ನು ಎಸ್‌ಡಿಎಂಸಿಯಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.
Vijaya Karnataka Web farewell to retired teacher
ನಿವೃತ್ತ ಶಿಕ್ಷಕಿಗೆ ಬೀಳ್ಕೊಡುಗೆ


ತಾರಾಮಣಿಯವರು ತಮ್ಮ 28 ವರ್ಷದ ಶಿಕ್ಷಕ ವೃತ್ತಿಯಲ್ಲಿ ಹಿಂದೆ ಕಟ್ಟೇಪುರ ಮತ್ತು ಬಳಗುಂದ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ, ಗದ್ದೆಹಳ್ಳ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಸೋಮವಾರಪೇಟೆ ತಾಲೂಕು ಕ್ಷೇತ್ರ ಸಮನ್ವಯಾಧಿಕಾರಿ ಮಾಲತಿ, ಬಿಅರ್‌ಪಿ ಲೋಕೇಶ ಅವರು ತಾರಾಮಣಿ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಬೀಳ್ಕೊಟ್ಟರು.

ಸೋಮವಾರಪೇಟೆ ತಾಲೂಕು ಶಿಕ್ಷ ಕರ ಸಂಘದ ಉಪಾಧ್ಯಕ್ಷೆ ಸೌಭಾಗ್ಯಾ, ಸಿಅರ್‌ಪಿ ಪುರುಷೋತ್ತಮ, ಎಸ್‌ಡಿಎಂಸಿ ಉಪಾಧ್ಯಕ್ಷೆ ಸರೋಜಾ, ಗದ್ದೆಹಳ್ಳ ಶಾಲೆಯ ಮುಖ್ಯ ಶಿಕ್ಷ ಕಿ ಪುಷ್ಪಾವತಿ, ಸಹ ಶಿಕ್ಷಕಿ ಶೈಲಾ ಜಾಯ್‌, ಹೇಮಕುಮಾರಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಬಿಲ್ಕಿಸ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ