ಮಡಿಕೇರಿ: ಮುಂಗಾರು ಮಳೆ ಸಂದರ್ಭದಲ್ಲಿ ಪ್ರವಾಹ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ನಿರ್ದೇಶನ ನೀಡಿದ್ದಾರೆ.
ಪ್ರಸಕ್ತ ಮುಂಗಾರು ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಕೈಗೊಳ್ಳುವ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆ ನಿಟ್ಟಿನಲ್ಲಿ ಜೂನ್ ಮೊದಲ ವಾರದಲ್ಲಿ ಜಿಲ್ಲೆಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲ ಹಂತದ ಅಧಿಕಾರಿಗಳು ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಕಾರ್ಯ ಪ್ರವೃತ್ತರಾಗಬೇಕಿದೆ ಎಂದರು.
ವರ್ಷಧಾರೆ ಹೆಚ್ಚಾದ ಸಂದರ್ಭದಲ್ಲಿ ಪ್ರವಾಹ, ಬರೆ ಕುಸಿತ, ಜನ, ಜಾನುವಾರು ಪ್ರಾಣಹಾನಿ, ವಾಸದ ಮನೆ ಹಾನಿ ಹಾಗೂ ಸಾರ್ವಜನಿಕ ಆಸ್ತಿ ಹಾನಿಯಾಗುವ ಸಾಧ್ಯತೆಗಳಿದ್ದು, ಅಂತಹ ಸಂದರ್ಭದಲ್ಲಿ ತಕ್ಷ ಣವೇ ಸಂಬಂಧಪಟ್ಟ ಎಲ್ಲಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ತುರ್ತು ಕ್ರಮ ಕೈಗೊಳ್ಳಬೇಕು. ಮಡಿಕೇರಿ ತಾಲೂಕಿನ ಭಾಗಮಂಡಲ, ಅಯ್ಯಂಗೇರಿ, ನಾಪೋಕ್ಲು, ಬಲಮುರಿ, ವಿರಾಜಪೇಟೆ ತಾಲೂಕಿನ ಕರಡಿಗೋಡು, ದುಬಾರೆ ಮತ್ತು ಲಕ್ಷ ್ಮಣತೀರ್ಥ ಹಾಗೂ ಸೋಮವಾರಪೇಟೆ ತಾಲೂಕಿನ ಗುಹ್ಯ, ಕಣಿವೆ, ನೆಲ್ಯಹುದಿಕೇರಿ ಇನ್ನು ಹಲವು ಕಡೆ ರಸ್ತೆ, ಭೂ ಪ್ರದೇಶ ಪ್ರವಾಹ ಸಂದರ್ಭದಲ್ಲಿ ಜಲಾವೃತವಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಅನಾಹುತಗಳಾಗದಂತೆ ಕ್ರಮಕೈಗೊಳ್ಳಬೇಕು. ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಶಾಲೆ ಹಾಗೂ ಸಮುದಾಯ ಭವನಗಳಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ತೆರೆಯುವ ಬಗ್ಗೆ ತಹಸೀಲ್ದಾರರು ಮತ್ತು ಸ್ಥಳೀಯ ಗ್ರಾ.ಪಂ.ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಭೂ ಕುಸಿತ ಹಾಗೂ ರಸ್ತೆಯ ಮೇಲೆ ಮರ ಬಿದ್ದು, ಸಾರಿಗೆ ಸಂಪರ್ಕ ಕಡಿದು ಹೋಗುವ ಸಂದರ್ಭದಲ್ಲಿ ಲೋಕೋಪಯೋಗಿ, ಅರಣ್ಯ, ಗ್ರಾಮೀಣ ಅಭಿವೃದ್ಧಿ ಎಂಜಿನಿಯರಿಂಗ್ ವಿಭಾಗ, ಸೆಸ್ಕ್ ಇಲಾಖೆಗಳು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಸಾಧಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಬೇಕು. ವಿದ್ಯುತ್ ಕಂಬಗಳು, ಮರಗಳು ರಸ್ತೆಗೆ ಬಿದ್ದು, ಓಡಾಟಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಜನ ಸಂಚಾರಕ್ಕೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಗ್ನಿಶಾಮಕ ಇಲಾಖಾ ಅಧಿಕಾರಿಗಳು ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಯಾವುದೇ ರೀತಿಯ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹೋಂ ಗಾರ್ಡ್ಗಳನ್ನು ನಿಯೋಜಿಸುವುದು, ನುರಿತ ತಜ್ಞ ಈಜುಗಾರರನ್ನು ಕಾಯ್ದಿರಿಸಿಕೊಳ್ಳುವುದು ಮತ್ತಿತರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಅವರು ಸಲಹೆ ನೀಡಿದರು.
ನಗರಸಭೆ ವ್ಯಾಪ್ತಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಬರೆ ಕೆಳಗೆ ವಾಸಮಾಡುತ್ತಿರುವ ಜನರಿಗೆ ಮುನ್ನೆಚ್ಚರಿಕೆ ನೀಡಿ ತಾತ್ಕಾಲಿಕ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವಂತೆ ಪೌರಾಯುಕ್ತರಿಗೆ ಸೂಚಿಸಿದರು. ಮಳೆಗಾಲದಲ್ಲಿ ಉಂಟಾಗುವ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಲು ಹಾಗೂ ಆ ಸಂದರ್ಭದಲ್ಲಿ ಹರಡುವ ಕಾಯಿಲೆಗಳಿಗೆ ಔಷಧಗಳನ್ನು ಮೊದಲೇ ದಾಸ್ತಾನು ಇರಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸಲಹೆ ಮಾಡಿದರು.
ಹಾಗೆಯೇ ನಗರ, ಪಟ್ಟಣ ಹಾಗೂ ಗ್ರಾ.ಪಂ.ಮಟ್ಟದಲ್ಲಿ ಶುಚಿತ್ವ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಅಪಾಯ ಸಂಭವಿಸಬಹುದಾದ ಮೂನ್ಸೂಚನೆಯನ್ನು ಪ್ರತಿ ದಿನ ದೂರವಾಣಿ ಮೂಲಕ ಮಾಹಿತಿ ನೀಡಬೇಕು. ಜಲಾವೃತಗೊಳ್ಳುವ ಭಾಗಮಂಡಲ ಹಾಗೂ ದುಬಾರೆಯಲ್ಲಿ ಯಂತ್ರಚಾಲಿತ ದೋಣಿಗಳನ್ನು ನುರಿತ ಚಾಲಕರ ನೇಮಕದೊಂದಿಗೆ ಬಳಸಲು ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದರು.
ಮಳೆಗಾಲದ ಅವಧಿಯಲ್ಲಿ ಎಲ್ಲ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ರಜೆ ಬೇಕಿದ್ದಲ್ಲಿ ತಮ್ಮ ಗಮನಕ್ಕೆ ತರಬೇಕು. ಕೇಂದ್ರ ಕಚೇರಿಯ ಸಭೆ, ಸಮಾರಂಭಗಳು ಇದ್ದಲ್ಲಿ ಗಮನಕ್ಕೆ ತಂದು ತೆರಳಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ, ಭಾಗಮಂಡಲದಲ್ಲಿ ಹೆಚ್ಚಿನ ಮಳೆಯಾದ ಸಂದರ್ಭದಲ್ಲಿ ಪ್ರವಾಹ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಅನಾಹುತಗಳನ್ನು ತಡೆಯಲು ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ. ಭಾಗಮಂಡಲದ ಜೊತೆಗೆ ಅಯ್ಯಂಗೇರಿ, ನಾಪೋಕ್ಲು, ಕರಡಿಗೋಡು, ದುಬಾರೆ, ಲಕ್ಷ ್ಮಣತೀರ್ಥ, ಗುಹ್ಯ, ಕಣಿವೆ, ನೆಲ್ಯಹುದಿಕೇರಿ ಇನ್ನು ಹಲವು ಕಡೆಗಳಲ್ಲಿ ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್ ಅವರು ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬರೆ ಕುಸಿತ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಇಂತಹ ಪ್ರದೇಶಗಳಲ್ಲಿ ಸ್ಥಳೀಯರಿಗೆ ಮುನ್ನೆಚ್ಚರಿಕೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಹಾಯವಾಣಿ ಆರಂಭ
ಮಳೆಗಾಲದಲ್ಲಿ ದೂರವಾಣಿ ಸಂಪರ್ಕ ಕಡಿತಗೊಂಡಾಗ ಮಾಹಿತಿಯು ತಕ್ಷ ಣ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುವುದು ಕಷ್ಟವಾಗುವುದರಿಂದ ನಗರಸಭೆ ಕಚೇರಿ ಹಾಗೂ ಪ್ರತಿ ತಾಲೂಕು ಕಚೇರಿಗಳಿಗೆ ಒಂದರಂತೆ ಮತ್ತು ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್ ರೂಮ್ಗಳಲ್ಲಿ ವೈರ್ಲೆಸ್ ಬೇಸ್ಸೆಟ್ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದ್ದು, ಯಾವುದೇ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರು ಹಾನಿಯ ಬಗ್ಗೆ ದೂ: 08272-221077ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.
ವಿದ್ಯುತ್ ವ್ಯತ್ಯಯ, ಕಂಬ ಬಿದ್ದಿರುವುದು ಮತ್ತಿತರ ಸಂಬಂಧ ಸೆಸ್ಕ್ ಸಹಾಯವಾಣಿ 1912ಕ್ಕೆ ಕರೆ ಮಾಡುವಂತೆ ಜಿಲ್ಲಾಡಳಿತ ಕೋರಿದೆ.
ಪ್ರಸಕ್ತ ಮುಂಗಾರು ಸಂದರ್ಭದಲ್ಲಿ ಪ್ರವಾಹ ಮುನ್ನೆಚ್ಚರಿಕೆ ಕೈಗೊಳ್ಳುವ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷ ತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆ ನಿಟ್ಟಿನಲ್ಲಿ ಜೂನ್ ಮೊದಲ ವಾರದಲ್ಲಿ ಜಿಲ್ಲೆಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ. ಆದ್ದರಿಂದ ಎಲ್ಲ ಹಂತದ ಅಧಿಕಾರಿಗಳು ಪ್ರವಾಹ ಮುನ್ನೆಚ್ಚರಿಕೆ ಎದುರಿಸಲು ಕಾರ್ಯ ಪ್ರವೃತ್ತರಾಗಬೇಕಿದೆ ಎಂದರು.
ವರ್ಷಧಾರೆ ಹೆಚ್ಚಾದ ಸಂದರ್ಭದಲ್ಲಿ ಪ್ರವಾಹ, ಬರೆ ಕುಸಿತ, ಜನ, ಜಾನುವಾರು ಪ್ರಾಣಹಾನಿ, ವಾಸದ ಮನೆ ಹಾನಿ ಹಾಗೂ ಸಾರ್ವಜನಿಕ ಆಸ್ತಿ ಹಾನಿಯಾಗುವ ಸಾಧ್ಯತೆಗಳಿದ್ದು, ಅಂತಹ ಸಂದರ್ಭದಲ್ಲಿ ತಕ್ಷ ಣವೇ ಸಂಬಂಧಪಟ್ಟ ಎಲ್ಲಾ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ತುರ್ತು ಕ್ರಮ ಕೈಗೊಳ್ಳಬೇಕು. ಮಡಿಕೇರಿ ತಾಲೂಕಿನ ಭಾಗಮಂಡಲ, ಅಯ್ಯಂಗೇರಿ, ನಾಪೋಕ್ಲು, ಬಲಮುರಿ, ವಿರಾಜಪೇಟೆ ತಾಲೂಕಿನ ಕರಡಿಗೋಡು, ದುಬಾರೆ ಮತ್ತು ಲಕ್ಷ ್ಮಣತೀರ್ಥ ಹಾಗೂ ಸೋಮವಾರಪೇಟೆ ತಾಲೂಕಿನ ಗುಹ್ಯ, ಕಣಿವೆ, ನೆಲ್ಯಹುದಿಕೇರಿ ಇನ್ನು ಹಲವು ಕಡೆ ರಸ್ತೆ, ಭೂ ಪ್ರದೇಶ ಪ್ರವಾಹ ಸಂದರ್ಭದಲ್ಲಿ ಜಲಾವೃತವಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಅನಾಹುತಗಳಾಗದಂತೆ ಕ್ರಮಕೈಗೊಳ್ಳಬೇಕು. ಪ್ರವಾಹ ಸಂದರ್ಭದಲ್ಲಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಶಾಲೆ ಹಾಗೂ ಸಮುದಾಯ ಭವನಗಳಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ತೆರೆಯುವ ಬಗ್ಗೆ ತಹಸೀಲ್ದಾರರು ಮತ್ತು ಸ್ಥಳೀಯ ಗ್ರಾ.ಪಂ.ಆಡಳಿತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಭೂ ಕುಸಿತ ಹಾಗೂ ರಸ್ತೆಯ ಮೇಲೆ ಮರ ಬಿದ್ದು, ಸಾರಿಗೆ ಸಂಪರ್ಕ ಕಡಿದು ಹೋಗುವ ಸಂದರ್ಭದಲ್ಲಿ ಲೋಕೋಪಯೋಗಿ, ಅರಣ್ಯ, ಗ್ರಾಮೀಣ ಅಭಿವೃದ್ಧಿ ಎಂಜಿನಿಯರಿಂಗ್ ವಿಭಾಗ, ಸೆಸ್ಕ್ ಇಲಾಖೆಗಳು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಸಾಧಿಸಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಬೇಕು. ವಿದ್ಯುತ್ ಕಂಬಗಳು, ಮರಗಳು ರಸ್ತೆಗೆ ಬಿದ್ದು, ಓಡಾಟಕ್ಕೆ ತೊಂದರೆಯಾಗಲಿದೆ. ಆದ್ದರಿಂದ ಜನ ಸಂಚಾರಕ್ಕೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಗ್ನಿಶಾಮಕ ಇಲಾಖಾ ಅಧಿಕಾರಿಗಳು ಪ್ರವಾಹ ಉಂಟಾಗುವ ಪ್ರದೇಶಗಳಲ್ಲಿ ಯಾವುದೇ ರೀತಿಯ ಹಾನಿಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ. ಹೋಂ ಗಾರ್ಡ್ಗಳನ್ನು ನಿಯೋಜಿಸುವುದು, ನುರಿತ ತಜ್ಞ ಈಜುಗಾರರನ್ನು ಕಾಯ್ದಿರಿಸಿಕೊಳ್ಳುವುದು ಮತ್ತಿತರ ಕಾರ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಅವರು ಸಲಹೆ ನೀಡಿದರು.
ನಗರಸಭೆ ವ್ಯಾಪ್ತಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಬರೆ ಕೆಳಗೆ ವಾಸಮಾಡುತ್ತಿರುವ ಜನರಿಗೆ ಮುನ್ನೆಚ್ಚರಿಕೆ ನೀಡಿ ತಾತ್ಕಾಲಿಕ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವಂತೆ ಪೌರಾಯುಕ್ತರಿಗೆ ಸೂಚಿಸಿದರು. ಮಳೆಗಾಲದಲ್ಲಿ ಉಂಟಾಗುವ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಲು ಹಾಗೂ ಆ ಸಂದರ್ಭದಲ್ಲಿ ಹರಡುವ ಕಾಯಿಲೆಗಳಿಗೆ ಔಷಧಗಳನ್ನು ಮೊದಲೇ ದಾಸ್ತಾನು ಇರಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸಲಹೆ ಮಾಡಿದರು.
ಹಾಗೆಯೇ ನಗರ, ಪಟ್ಟಣ ಹಾಗೂ ಗ್ರಾ.ಪಂ.ಮಟ್ಟದಲ್ಲಿ ಶುಚಿತ್ವ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಅಪಾಯ ಸಂಭವಿಸಬಹುದಾದ ಮೂನ್ಸೂಚನೆಯನ್ನು ಪ್ರತಿ ದಿನ ದೂರವಾಣಿ ಮೂಲಕ ಮಾಹಿತಿ ನೀಡಬೇಕು. ಜಲಾವೃತಗೊಳ್ಳುವ ಭಾಗಮಂಡಲ ಹಾಗೂ ದುಬಾರೆಯಲ್ಲಿ ಯಂತ್ರಚಾಲಿತ ದೋಣಿಗಳನ್ನು ನುರಿತ ಚಾಲಕರ ನೇಮಕದೊಂದಿಗೆ ಬಳಸಲು ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದರು.
ಮಳೆಗಾಲದ ಅವಧಿಯಲ್ಲಿ ಎಲ್ಲ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಬೇಕು. ರಜೆ ಬೇಕಿದ್ದಲ್ಲಿ ತಮ್ಮ ಗಮನಕ್ಕೆ ತರಬೇಕು. ಕೇಂದ್ರ ಕಚೇರಿಯ ಸಭೆ, ಸಮಾರಂಭಗಳು ಇದ್ದಲ್ಲಿ ಗಮನಕ್ಕೆ ತಂದು ತೆರಳಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಮಾತನಾಡಿ, ಭಾಗಮಂಡಲದಲ್ಲಿ ಹೆಚ್ಚಿನ ಮಳೆಯಾದ ಸಂದರ್ಭದಲ್ಲಿ ಪ್ರವಾಹ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಬೇಕು. ಅನಾಹುತಗಳನ್ನು ತಡೆಯಲು ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ. ಭಾಗಮಂಡಲದ ಜೊತೆಗೆ ಅಯ್ಯಂಗೇರಿ, ನಾಪೋಕ್ಲು, ಕರಡಿಗೋಡು, ದುಬಾರೆ, ಲಕ್ಷ ್ಮಣತೀರ್ಥ, ಗುಹ್ಯ, ಕಣಿವೆ, ನೆಲ್ಯಹುದಿಕೇರಿ ಇನ್ನು ಹಲವು ಕಡೆಗಳಲ್ಲಿ ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಎಂ.ಸತೀಶ್ ಕುಮಾರ್ ಅವರು ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬರೆ ಕುಸಿತ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಇಂತಹ ಪ್ರದೇಶಗಳಲ್ಲಿ ಸ್ಥಳೀಯರಿಗೆ ಮುನ್ನೆಚ್ಚರಿಕೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಹಾಯವಾಣಿ ಆರಂಭ
ಮಳೆಗಾಲದಲ್ಲಿ ದೂರವಾಣಿ ಸಂಪರ್ಕ ಕಡಿತಗೊಂಡಾಗ ಮಾಹಿತಿಯು ತಕ್ಷ ಣ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸುವುದು ಕಷ್ಟವಾಗುವುದರಿಂದ ನಗರಸಭೆ ಕಚೇರಿ ಹಾಗೂ ಪ್ರತಿ ತಾಲೂಕು ಕಚೇರಿಗಳಿಗೆ ಒಂದರಂತೆ ಮತ್ತು ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್ ರೂಮ್ಗಳಲ್ಲಿ ವೈರ್ಲೆಸ್ ಬೇಸ್ಸೆಟ್ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದ್ದು, ಯಾವುದೇ ಅಧಿಕಾರಿ, ಸಿಬ್ಬಂದಿ, ಸಾರ್ವಜನಿಕರು ಹಾನಿಯ ಬಗ್ಗೆ ದೂ: 08272-221077ಕ್ಕೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.
ವಿದ್ಯುತ್ ವ್ಯತ್ಯಯ, ಕಂಬ ಬಿದ್ದಿರುವುದು ಮತ್ತಿತರ ಸಂಬಂಧ ಸೆಸ್ಕ್ ಸಹಾಯವಾಣಿ 1912ಕ್ಕೆ ಕರೆ ಮಾಡುವಂತೆ ಜಿಲ್ಲಾಡಳಿತ ಕೋರಿದೆ.