ಆ್ಯಪ್ನಗರ

ಪ್ರವಾಹ ಪೀಡಿತ ಪ್ರದೇಶ ಪರಿಶೀಲನೆ

ಪ್ರವಾಹ ಪೀಡಿತ ಕುಶಾಲನಗರದ ಸಾಯಿ ಬಡಾವಣೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Vijaya Karnataka 16 Aug 2018, 5:00 am
ಕುಶಾಲನಗರ
Vijaya Karnataka Web flooded area inspected
ಪ್ರವಾಹ ಪೀಡಿತ ಪ್ರದೇಶ ಪರಿಶೀಲನೆ


ಪ್ರವಾಹ ಪೀಡಿತ ಕುಶಾಲನಗರದ ಸಾಯಿ ಬಡಾವಣೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೋಟ್‌ ಮೂಲಕ ಜಲಾವೃತಗೊಂಡ ಬಡಾವಣೆಯಲ್ಲಿ ಸುತ್ತು ಹಾಕಿದ ಸಚಿವರು ಮನೆಗಳ ಸ್ಥಿತಿಯನ್ನು ಪರಿಶೀಲಿಸಿದರು. ಇದೇ ಸಂದರ್ಭ ಸಚಿವರೊಂದಿಗೆ ತಮ್ಮ ಅಳಲು ತೋಡಿಕೊಂಡ ಬಡಾವಣೆ ನಿವಾಸಿಗಳಿಗೆ ಸಾಂತ್ವನ ಹೇಳಿದ ಸಚಿವರು, ತಕ್ಷ ಣ ಅವಶ್ಯಕತೆಯಿರುವ ನಿವಾಸಿಗಳನ್ನು ಗಂಜಿ ಕೇಂದ್ರಕ್ಕೆ ಸ್ಥಳಾಂತರಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಪ್ರವಾಹ ಇಳಿಮುಖಗೊಂಡ ಬಳಿಕ ಪರಿಶೀಲಿಸಿ ನಷ್ಟದ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ''ಬಡಾವಣೆಯ ಸಂತ್ರಸ್ತರಿಗೆ ಸರಿಯಾದ ಸೌಲಭ್ಯ ಕಲ್ಪಿಸಿ ಸೂಕ್ತ ರಕ್ಷ ಣೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ನದಿ ತಟದಲ್ಲಿ ನಿವೇಶನ ನಿರ್ಮಾಣ ಮಾಡುವ ಜನರ ಮೇಲೆ ಕ್ರಮಕೈಗೊಳ್ಳಲು ಸ್ಥಳೀಯ ಆಡಳಿತ ಅಧಿಕಾರಿಗಳಿಗೆ ಆದೇಶ ನೀಡಲಾಗುವುದು. ತಗ್ಗು ಪ್ರದೇಶಗಳಲ್ಲಿ ಬಡಾವಣೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸದಿರಲು ಅಧಿಕಾರಿಗಳು ಕ್ರಮಕೈಗೊಳ್ಳಲಿದ್ದಾರೆ ಎಂದರು.

ಈ ಸಂದರ್ಭ ಸಚಿವರೊಂದಿಗೆ ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ತಹಸೀಲ್ದಾರ್‌ ಮಹೇಶ್‌, ಜಿ.ಪಂ.ಸದಸ್ಯೆ ಕೆ.ಪಿ.ಚಂದ್ರಕಲಾ, ಮುಖ್ಯಾಧಿಕಾರಿ ಎ.ಎಂ. ಶ್ರೀಧರ್‌, ಡಿವೈಎಸ್ಪಿ ಮುರಳೀಧರ್‌ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ