ಕ್ಷಯ ರೋಗಿಗಳಿಗೆ ಉತ್ತಮ ಜೀವನಕ್ಕೆ ಅವಕಾಶ ಕಲ್ಪಿಸಿ
ಕ್ಷ ಯ ರೋಗದ ಲಕ್ಷ ಣಗಳ ಬಗ್ಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮಾಹಿತಿ ಸಿಗಬೇಕು ಎಂದು ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ತಿಳಿಸಿದರು...
ಮಡಿಕೇರಿ: ಕ್ಷ ಯ ರೋಗದ ಲಕ್ಷ ಣಗಳ ಬಗ್ಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮಾಹಿತಿ ಸಿಗಬೇಕು ಎಂದು ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ತಿಳಿಸಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಕ್ಷ ಯರೋಗ ನಿಯಂತ್ರಣ ಕೇಂದ್ರದ ಸಹಯೋಗದಲ್ಲಿ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ವಿಶ್ವ ಕ್ಷ ಯ ರೋಗ ದಿನದಲ್ಲಿ ಅವರು ಮಾತನಾಡಿದರು.
ಕ್ಷ ಯ ರೋಗದಿಂದ ಬಳಲುತ್ತಿರುವವರಿಗೆ ಉತ್ತಮ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು, ಸರಕಾರ ಕ್ಷ ಯ ರೋಗಿಗಳಿಗೆ 500 ರೂ. ಸಹಾಯ ಧನ ನೀಡುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಕ್ಷ ಯರೋಗ ನಿಯಂತ್ರಣಾಧಿಕಾರಿ ಡಾ.ಎ.ಸಿ.ಶಿವಕುಮಾರ್ ಮಾತನಾಡಿ, ರಾಷ್ಟ್ರದಲ್ಲಿ 6 ಸಾವಿರ ಮಂದಿ ಕ್ಷ ಯ ರೋಗದಿಂದ ಬಳಲುತ್ತಿದ್ದಾರೆ. ಪ್ರತಿ ದಿನ 600 ಮಂದಿ ಸಾಯುತ್ತಿದ್ದಾರೆ. ಈ ಕಾಯಿಲೆಯು ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ರೋಗವಾಗಿದೆ. ಆದ್ದರಿಂದ ಕ್ಷ ಯರೋಗ ಬರದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಸಲಹೆ ಮಾಡಿದರು.
ಕ್ಷ ಯರೋಗದಲ್ಲಿ ಎರಡು ರೀತಿ ಇದೆ ಶ್ವಾಸಕೋಶದ ಕ್ಷ ಯರೋಗ, ಶ್ವಾಸಕೋಶೇತರ ಕ್ಷ ಯರೋಗ. ಸತತ ಕೆಮ್ಮು, ಸಂಜೆ ವೇಳೆ ಜಠರ ಕಫದಲ್ಲಿ ರಕ್ತ ಮತ್ತು ಎದೆ ನೋವು ಕಾಣಿಸಿಕೊಳ್ಳುವುದು, ಉಸಿರಾಟದ ತೊಂದರೆ, ದೇಹದ ತೂಕ ಕ್ಷೀಣಿಸುವುದು ಕ್ಷ ಯರೋಗದ ಲಕ್ಷ ಣಗಳಾಗಿವೆ ಎಂದು ಮಾಹಿತಿ ನೀಡಿದರು.
ಕ್ಷ ಯ ರೋಗದ ಲಕ್ಷ ಣಗಳು ಕಂಡುಬಂದ ಕೂಡಲೇ ಸಮೀಪದ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಎರಡು ಬಾರಿ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕಫದಲ್ಲಿ ಕ್ರಿಮಿನಾಶಕಗಳು ಕಂಡುಬರುತ್ತದೆ. ಕ್ಷ ಕಿರಣ ಪರೀಕ್ಷೆಯ ಮೂಲಕ ರೋಗವನ್ನು ಕಂಡು ಹಿಡಿಯಬಹುದು. ಪರೀಕ್ಷೆಗೆ ತಡ ಮಾಡಿದರೆ ರೋಗವು ಇನ್ನೊಬ್ಬರಿಗೂ ಹರಡುವ ಸಾಧ್ಯತೆ ಇರುತ್ತದೆ. ಕ್ಷ ಯ ರೋಗವು ಗೊತ್ತಾದ ತಕ್ಷ ಣ ಸೂಕ್ತ ಚಿಕಿತ್ಸೆಯನ್ನು ಪಡೆದರೆ ಗುಣಮುಖರಾಗಬಹುದು ಎಂದರು.
2017ರಲ್ಲಿ 412 ರೋಗಿಗಳನ್ನು ಪತ್ತೆಮಾಡಲಾಗಿದೆ. ಎಚ್ಐವಿ ಸೋಂಕಿತರು ಜಿಲ್ಲೆಯಲ್ಲಿ 32 ಜನರು ಇದ್ದಾರೆ. ಕ್ಷ ಯರೋಗಿಗಳು ಸಂಪೂರ್ಣ ಚಿಕಿತ್ಸೆ ಪಡೆಯಬೇಕು. 2018ರ ಕ್ಷ ಯರೋಗದ ಘೋಷಣೆ ನಾಯಕರು ಬೇಕಾಗಿದ್ದಾರೆ. ಕ್ಷ ಯರೋಗ ಮುಕ್ತ ವಿಶ್ವ ನಿರ್ಮಾಣಕ್ಕೆ ಕ್ಷ ಯರೋಗವನ್ನು ನಿರ್ಮೂಲನೆಗೊಳಿಸಿ, ಇತಿಹಾಸ ನಿರ್ಮಿಸಿ ಎಂಬ ತತ್ವವನ್ನು ತಿಳಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಜಗದೀಶ್ ಮಾತನಾಡಿ, ಕ್ಷ ಯ ರೋಗ ನಿಯಂತ್ರಣಕ್ಕೆ ಉತ್ತಮ ಚಿಕಿತ್ಸೆ ಪಡೆಯುವುದರಿಂದ ಗುಣಮುಖರಾಗಬಹುದು. ಕ್ಷ ಯರೋಗಿಗಳನ್ನು ಗುರುತಿಸಿ ಚಿಕಿತ್ಸೆ ನೀಡಬೇಕು ಎಂದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ ಮಾತನಾಡಿ, ಕ್ಷ ಯರೋಗ ದಿನದ ಆಚರಣೆ ಒಂದು ದಿನಕ್ಕೆ ಸಿಮೀತವಾಗಬಾರದು. ರೋಗವನ್ನು ನಿರ್ಮೂಲನೆ ಮಾಡಲು ಪಣತೊಡಬೇಕು. ರೋಗಿಗಳನ್ನು ತಾರತಮ್ಯ ನೋಡಬೇಡಿ, ಕ್ಷ ಯರೋಗವನ್ನು ಮುಕ್ತವಾಗಿಸಲು ಎಲ್ಲರೂ ಕೈಜೋಡಿಸಬೇಕು.
ಕಾರ್ಯಕ್ರಮದಲ್ಲಿ ವೈದ್ಯ ವಿಜ್ಞಾನಗಳ ಸಂಸ್ಥೆಯ ಡೀನ್ ಕಾರ್ಯಪ್ಪ, ಸಮುದಾಯ ಆರೋಗ್ಯ ವಿಭಾಗದದ ಮುಖ್ಯಸ್ಥ ರಾಮಚಂದ್ರ ಕಾಮತ್ ಹಾಜರಿದ್ದರು.
ಕ್ಷ ಯರೋಗ ದಿನಾಚರಣೆಯ ಪ್ರಯುಕ್ತ ನಗರದ ಬಾಲಮಂದಿರದಿಂದ ಜಾಥಾ ನಡೆಯಿತು. ನಗರದ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ, ಇಂದಿರಾ ಗಾಂಧಿ ವೃತ್ತ, ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ತಿಮ್ಮಯ್ಯ ವೃತ್ತ, ಕಾವೇರಿ ಕಲಾಕ್ಷೇತ್ರದವರೆಗೆ ಜಾಥಾ ನಡೆಯಿತು.
ಜಾಥಾಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಭಾರ ಅಧಿಕಾರಿ ಡಾ.ಆನಂದ ಚಾಲನೆ ನೀಡಿದರು. ಕ್ಷ ಯರೋಗ ನಿಯಂತ್ರಣಾಧಿಕಾರಿ ಡಾ.ಎ.ಸಿ ಶಿವಕುಮಾರ್, ಸಮುದಾಯ ಆರೋಗ್ಯ ವಿಭಾಗದದ ಮುಖ್ಯಸ್ಥ ರಾಮಚಂದ್ರ ಕಾಮತ್, ಕ್ಷ ಯರೋಗ ನಿಯಂತ್ರಣ ವಿಭಾಗದ ಮಹದೇವಪ್ಪ ಜಿಲ್ಲಾ ಆರೋಗ್ಯ ಶಿಕ್ಷ ಣ ಇಲಾಖೆಯ ರಮೇಶ್ ಹಾಜರಿದ್ದರು.