ಆ್ಯಪ್ನಗರ

ಕುಶಾಲನಗರ ಮತ ಎಣಿಕೆ ಕೇಂದ್ರದಲ್ಲಿ ಅವ್ಯವಸ್ಥೆ ಆರೋಪ, ರೊಚ್ಚಿಗೆದ್ದ ಅಭ್ಯರ್ಥಿಗಳು ಮತ್ತು ಏಜೆಂಟರು!

ಕುಶಾಲನಗರ ಮತ ಎಣಿಕೆ ಕೇಂದ್ರದ ಮುಖ್ಯದ್ವಾರದಲ್ಲಿ ಜನಜಂಗುಳಿ, ನೂಕುನುಗ್ಗಲು ಉಂಟಾಗಿದ್ದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ವಿರುದ್ದ ಅಭ್ಯರ್ಥಿಗಳು ಹಾಗೂ ಏಜೆಂಟರು ರೊಚ್ಚಿಗೆದ್ದ ಘಟನೆ ನಡೆದಿದೆ.

Vijaya Karnataka Web 30 Dec 2020, 9:19 am
ಕೊಡಗು:ಗ್ರಾ.ಪಂ.ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಮೂರು ಸ್ಥಳಗಳಲ್ಲಿ ‌ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಡಿಕೇರಿ ತಾಲ್ಲೂಕಿನ ಮತ ಎಣಿಕೆ ಮಡಿಕೇರಿಯಲ್ಲಿ, ವಿರಾಜಪೇಟೆ ತಾಲೂಕಿನ ಮತ ಎಣಿಕೆ ವಿರಾಜಪೇಟೆಯಲ್ಲಿ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಮತ ಎಣಿಕೆ ಕುಶಾಲನಗರದಲ್ಲಿ ನಡೆಯುತ್ತಿದೆ.

ಕುಶಾಲನಗರ ಮತ ಎಣಿಕೆ ಕೇಂದ್ರದ ಮುಖ್ಯದ್ವಾರದಲ್ಲಿ ಜನಜಂಗುಳಿ, ನೂಕುನುಗ್ಗಲು ಉಂಟಾಗಿದ್ದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ವಿರುದ್ದ ಅಭ್ಯರ್ಥಿಗಳು ಹಾಗೂ ಏಜೆಂಟರು ರೊಚ್ಚಿಗೆದ್ದಿದ್ದಾರೆ.

ಮುಖ್ಯದ್ವಾರದಲ್ಲಿ ಜನಜಂಗುಳಿ, ನೂಕುನುಗ್ಗಲು ಉಂಟಾಗಿದ್ದು, ಎಣಿಕೆ ಕೇಂದ್ರಕ್ಕೆ ತೆರಳಲು ಅವಕಾಶ ಕಲ್ಪಿಸಿಲ್ಲ ಎಂದು ಆರೋಪಿಸಲಾಗಿದೆ. ಪೊಲೀಸ್ ದಬ್ಬಾಳಿಕೆ, ಜಿಲ್ಲಾಡಳಿತದ ವೈಫಲ್ಯ ಎಂದು ಅಭ್ಯರ್ಥಿಗಳು ಮತ್ತು ಎಜೆಂ‌ಟರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೀದರ್ ನಲ್ಲಿ ಬೆಳಗ್ಗೆ 8ರಿಂದ ಮತ ಎಣಿಕೆ ಆರಂಭ: 2912 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ!

ಸೋಮವಾರಪೇಟೆ ಗೆ ಹೋಲಿಸಿದಲ್ಲಿ ಕುಶಾಲನಗರದಲ್ಲಿ ಸಂಪೂರ್ಣ ಅವ್ಯವಸ್ಥೆ ಇದೆ ಎನ್ನಲಾಗಿದ್ದು, ಮುಂದಿನ ಚುನಾವಣೆಯಲ್ಲಿ ಸೋಮವಾರಪೇಟೆ, ಕುಶಾಲನಗರಕ್ಕೆ ಪ್ರತ್ಯೇಕ ಕೇಂದ್ರಕ್ಕೆ ಒತ್ತಾಯಿಸಲಾಗಿದೆ.
Live Updates: ಗ್ರಾಮ ಪಂಚಾಯತ್‌ ಚುನಾವಣಾ ಫಲಿತಾಂಶ‌; ಮತ ಎಣಿಕೆಗೆ ಕೌಂಟ್‌ಡೌನ್‌ ಶುರು..!

ಮಡಿಕೇರಿಯಲ್ಲಿ ಭದ್ರತಾ ಕೊಠಡಿಯನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಮತ್ತು ಚುನಾವಣಾ ವೀಕ್ಷಕರಾದ ಎ.ದೇವರಾಜು ಅವರ ಸಮ್ಮುಖದಲ್ಲಿ ತೆರೆಯಲಾಯಿತು. ಚುನಾವಣಾ ಮೇಲುಸ್ತುವಾರಿ ನಿಲೇಶ್ ಸಿಂದೆ, ಹೆಚ್ವುವರಿ ಜಿಲ್ಲಾಧಿಕಾರಿ ರೂಪ, ತಹಶೀಲ್ದಾರ್ ಮಹೇಶ್, ಡಿವೈಎಸ್ ಪಿ ದಿನೇಶ್ ಕುಮಾರ್ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ