ಆ್ಯಪ್ನಗರ

ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹ

ಸ್ವಾಮಿ ಆಯೋಗದ ವರದಿಯಂತೆ ಗ್ರಾಮ ಪಂಚಾಯಿತಿಗಳ ಎಲ್ಲ ನೌಕರರನ್ನು ಏಕಕಾಲದಲ್ಲಿ ಅನುಮೋದನೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದ ಕೊಡಗು ಜಿಲ್ಲಾ ಘಟಕದಿಂದ ಶುಕ್ರವಾರ ನಗರದ ಸಿಇಒ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಯಿತು.

Vijaya Karnataka 1 Jun 2019, 5:00 am
ಮಡಿಕೇರಿ: ಸ್ವಾಮಿ ಆಯೋಗದ ವರದಿಯಂತೆ ಗ್ರಾಮ ಪಂಚಾಯಿತಿಗಳ ಎಲ್ಲ ನೌಕರರನ್ನು ಏಕಕಾಲದಲ್ಲಿ ಅನುಮೋದನೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದ ಕೊಡಗು ಜಿಲ್ಲಾ ಘಟಕದಿಂದ ಶುಕ್ರವಾರ ನಗರದ ಸಿಇಒ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಯಿತು.
Vijaya Karnataka Web 31jay11


ಪ್ರತಿಭಟನಾನಿರತರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಘೊಷಣೆ ಕೂಗಿದರು. ಈ ಸಂದರ್ಭ ಮಾತನಾಡಿದ ರಾಜ್ಯ ಗ್ರಾಪಂ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ರಾಮಕೃಷ್ಣ, ರಾಜ್ಯದಾದ್ಯಂತ ಎಲ್ಲ ಜಿಲ್ಲೆಗಳಲ್ಲಿಯೂ ಇಂದು ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ಅದರ ಒಂದು ಭಾಗವಾಗಿ ಕೊಡಗು ಜಿಲ್ಲೆಯಲ್ಲಿಯೂ ಕೂಡ ಪ್ರತಿಭಟನೆ ನಡೆಸುತ್ತಿದ್ದು ಗ್ರಾಪಂ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದರು.

ಇನ್ನು ನೌಕರರಿಗೆ ರಾಜ್ಯ ಸರಕಾರ ಇನ್ನೂ ಕೂಡ ಹಣ ಬಿಡುಗಡೆ ಮಾಡದೆ ಅನ್ಯಾಯ ಮಾಡುತ್ತಿದ್ದು ನೌಕರರು ತಿಂಗಳಾನುಗಟ್ಟಲೆ ವೇತನವಿಲ್ಲದೆ ದುಡಿಯುವಂತಾಗಿದೆ ಎಂದರು. ಎಲ್ಲ ನೌಕರರನ್ನು ಇಎಫ್‌ಎಂಎಸ್‌ ಗೆ ಒಳಪಡಿಸಬೇಕು ಹಾಗೂ ನೌಕರರಿಗೆ ಬಡ್ತಿಯನ್ನು ನೀಡಬೇಕು. ಸೇವಾ ನಿಯಮಾವಳಿ ಜಾರಿಗೊಳಿಸಿ ಹೆಚ್ಚುವರಿ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಗ್ರಾಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್‌.ಭರತ್‌ ಮಾತನಾಡಿ, ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ರಾಜ್ಯ ಸರಕಾರದಿಂದ ವೇತನ ನೀಡುತ್ತಿಲ್ಲ. ಸಾಕಷ್ಟು ನೌಕರರು 8 ತಿಂಗಳಿನಿಂದ ವೇತನವಿಲ್ಲದೇ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಧ್ವನಿ ಎತ್ತಬೇಕಾದ ಜಿಪಂ ಸದ್ಯರು ಮೌನ ವಹಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇಪಿಎಫ್‌, ಸೇವಾ ಪುಸ್ತಕ ನಿಯಮಜಾರಿ ಮಾಡಬೇಕು. ಒಂದು ವರ್ಷದಿಂದ ಬಾಕಿ ಉಳಿದ ವೇತನವನ್ನು ನೀಡಬೇಕು, ಇಎಫ್‌ಎಂಎಸ್‌ಗೆ ಸೇರದಿರುವವರಿಗೆ ತೆರಿಗೆ ಸಂಗ್ರಹದಲ್ಲಿ ನೀಡಬೇಕು ಎಂದು ಆಗ್ರಹಿಸಿದರು. ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಪಂ ಸಿಇಒ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದರು. ಪ್ರತಿಭಟನೆಯಲ್ಲಿ ಗ್ರಾಪಂ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ