ಕೊಡಗು: ಇಲ್ಲಿಯವರೆ ಯಾವ ಪ್ರಧಾನಿಗೂ ಪತ್ರಕರ್ತರನ್ನು ಕಂಡರೆ ಭಯ ಇರಲಿಲ್ಲ. ಆದರೆ, ನರೇಂದ್ರ ಮೋದಿ ಹೆದರುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಹೇಳಿದರು.
ಪತ್ರಕರ್ತ ಅಂಶಿ ಪ್ರಸನ್ನ ಅವರ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಒಂದೇ ಒಂದು ಬಾರಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಅದರಲ್ಲೂ ಏನೇ ಪ್ರಶ್ನೆ ಕೇಳಿದರೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರತ್ತ ತೋರಿಸುತ್ತಿದ್ದರು ಎಂದು ಲೇವಡಿ ಮಾಡಿದ್ದಾರೆ.
ಮಾಧ್ಯಮದವರನ್ನು ಕಂಡರೆ ಎಲ್ಲರಿಗೂ ಹೆದರಿಕೆ. ಆದರೆ, ರಾಜಕಾರಣಿಗಳ ಬಗ್ಗೆ ಬರೆಯುವ ಪತ್ರಕರ್ತರ ಕುರಿತು ಮಾಧ್ಯಮದವರೇ ಬರೆಯಬೇಕು. ಇಂದು ದಿನಕೊಬ್ಬರಂತೆ ಪತ್ರಕರ್ತರು ಜೈಲಿಗೆ ಹೋಗುತ್ತಿದ್ದಾರೆ. ಎಷ್ಟು ಮಂದಿ 420 ಪರ್ತಕರು ಇದ್ದಾರೆ ಎನ್ನುವುದು ಹೊರ ಬರಬೇಕು ಎಂದು ಅಭಿಪ್ರಾಯಪಟ್ಟರು.
ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕೂಡ ಭಾಗಿಯಾಗಿದ್ದರು.
ಪತ್ರಕರ್ತ ಅಂಶಿ ಪ್ರಸನ್ನ ಅವರ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಒಂದೇ ಒಂದು ಬಾರಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಅದರಲ್ಲೂ ಏನೇ ಪ್ರಶ್ನೆ ಕೇಳಿದರೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರತ್ತ ತೋರಿಸುತ್ತಿದ್ದರು ಎಂದು ಲೇವಡಿ ಮಾಡಿದ್ದಾರೆ.
ಮಾಧ್ಯಮದವರನ್ನು ಕಂಡರೆ ಎಲ್ಲರಿಗೂ ಹೆದರಿಕೆ. ಆದರೆ, ರಾಜಕಾರಣಿಗಳ ಬಗ್ಗೆ ಬರೆಯುವ ಪತ್ರಕರ್ತರ ಕುರಿತು ಮಾಧ್ಯಮದವರೇ ಬರೆಯಬೇಕು. ಇಂದು ದಿನಕೊಬ್ಬರಂತೆ ಪತ್ರಕರ್ತರು ಜೈಲಿಗೆ ಹೋಗುತ್ತಿದ್ದಾರೆ. ಎಷ್ಟು ಮಂದಿ 420 ಪರ್ತಕರು ಇದ್ದಾರೆ ಎನ್ನುವುದು ಹೊರ ಬರಬೇಕು ಎಂದು ಅಭಿಪ್ರಾಯಪಟ್ಟರು.
ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕೂಡ ಭಾಗಿಯಾಗಿದ್ದರು.