ಆ್ಯಪ್ನಗರ

ಮುಂಗಾರು ಅಬ್ಬರ: ಕೊಡುಗು ಜಿಲ್ಲೆಯಲ್ಲಿ ನಾಲ್ಕನೇ ದಿನವೂ ಧಾರಾಕಾರ ಮಳೆ

ಕಳೆದ ಎರಡು ತಿಂಗಳಿನಿಂದ ಕೈಕೊಟ್ಟಿದ್ದ ಮುಂಗಾರು ಮಳೆ, ಈಗ ಕೊಡಗು ಜಿಲ್ಲೆಯಲ್ಲಿ ಅಬ್ಬರಿಸಿದೆ. ಸತತ ನಾಲ್ಕು ದಿನದಿಂದ ಮಡಿಕೇರಿ ಸೇರಿದಂತೆ ಹಲವಡೆ ಧಾರಾಕಾರ ಮಳೆ ಸುರಿದಿದೆ.

Vijaya Karnataka Web 7 Jul 2019, 6:50 pm
ಮಡಿಕೇರಿ: ನೈರುತ್ಯ ಮುಂಗಾರು ಚುರುಕಾಗಿರುವ ಕಾರಣ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ 4 ದಿನಗಳಿಂದಲೂ ಮಳೆ ಮುಂದುವರಿದಿದೆ.
Vijaya Karnataka Web ಮಳೆ ಮೋಡ
ಮಳೆ ಮೋಡ


ಇದರ ಪರಿಣಾಮ ಭಾಗಮಂಡಲ ಮತ್ತು ತ್ರಿವೇಣಿ ಸಂಗಮದಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.

ಕೊಡಗು ಜಿಲ್ಲೆಯಲ್ಲಿ ಜೂನ್ 1ರಿಂದ ಜುಲೈ 5ರವರೆಗೆ 300 ಮೀಲಿ ಮೀಟರ್‌ಗಿಂತಲೂ ಹೆಚ್ಚು ಮಳೆಯಾಗಿದೆ. ಇದು ವಾಡಿಕೆಗಿಂತ ಶೇಕಡಾ 54ರಷ್ಟು ಕೊರತೆಯಾಗಿದೆ.

ಒಟ್ಟಾರೆ ಈ ಅವಧಿಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ