ಆ್ಯಪ್ನಗರ

ಅಕ್ರಮ ದಾಸ್ತಾನು: ಕೋಟಿ ರೂ. ಮೌಲ್ಯದ ಮರ ವಶ

ವಿರಾಜಪೇಟೆ ತಾಲೂಕಿನ ಶ್ರೀಮಂಗಲದ ನಾಲ್ಕೇರಿ ಗ್ರಾಮದ ಮನೆಯೊಂದರ ಆವರಣದಲ್ಲಿ ಸಂಗ್ರಹಿಸಿಡಲಾಗಿದ್ದ ಅಂದಾಜು ಒಂದು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮರಗಳನ್ನು ಕೊಡಗು ಜಿಲ್ಲಾ ಅಪರಾಧ ಪತ್ತೆದಳದ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.

Vijaya Karnataka 17 Jun 2019, 5:00 am
ಮಡಿಕೇರಿ: ವಿರಾಜಪೇಟೆ ತಾಲೂಕಿನ ಶ್ರೀಮಂಗಲದ ನಾಲ್ಕೇರಿ ಗ್ರಾಮದ ಮನೆಯೊಂದರ ಆವರಣದಲ್ಲಿ ಸಂಗ್ರಹಿಸಿಡಲಾಗಿದ್ದ ಅಂದಾಜು ಒಂದು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮರಗಳನ್ನು ಕೊಡಗು ಜಿಲ್ಲಾ ಅಪರಾಧ ಪತ್ತೆದಳದ ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ.
Vijaya Karnataka Web illegal inventory crore rs worth the trees seize
ಅಕ್ರಮ ದಾಸ್ತಾನು: ಕೋಟಿ ರೂ. ಮೌಲ್ಯದ ಮರ ವಶ


''ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೆ. ನೋಬನ್‌ ಹಾಗೂ ಲಾರಿ ಚಾಲಕ ಮತ್ತು ಕ್ಲೀನರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ,'' ಎಂದು ಕೊಡಗು ಜಿಲ್ಲಾ ಎಸ್‌ಪಿ ಡಾ. ಸುಮನ್‌ ಡಿ. ಪನ್ನೇಕರ್‌ ಭಾನುವಾರ ರಾತ್ರಿ ಕುಟ್ಟ ಗ್ರಾಮದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮರ ಮತ್ತು ವಶಕ್ಕೆ ಪಡೆಯಲಾದ ಒಟ್ಟು ಸ್ವತ್ತುಗಳ ಮೌಲ್ಯ ಸುಮಾರು ಎರಡು ಕೋಟಿ ರೂ. ಮೀರಲಿದೆ ಎನ್ನಲಾಗಿದೆ. 172 ಹೆಬ್ಬಲಸು, 39 ಬೀಟೆ, 4 ತೇಗ, 24 ಬೀಟೆ ದಿಮ್ಮಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗೆ ಸೇರಿದ ಫಾರ್ಚೂನರ್‌ ಕಾರು, ಲಾರಿ, ಮರಗಳನ್ನು ಲಾರಿಗಳಿಗೆ ತುಂಬಿಸಲು ಬಳಸುತ್ತಿದ್ದ 1 ಕ್ರೇನ್‌, ಹಲಸಿನ ಮರಗಳು ತುಂಬಿದ್ದ 6 ಚಕ್ರದ ಲಾರಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಇಷ್ಟು ದೊಡ್ಡ ಪ್ರಮಾಣದಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಸಾಗಣೆ ಮಾಡಲು ದಾಸ್ತಾನು ಮಾಡಿದ್ದರೂ ಕೂಡ ಅರಣ್ಯ ಇಲಾಖೆಗೆ ಯಾವುದೇ ಮಾಹಿತಿ ಇಲ್ಲದಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಈ ಬಗ್ಗೆ ಗೋಣಿಕೊಪ್ಪ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ