ಆ್ಯಪ್ನಗರ

ಮೈತ್ರಿ ಅಸ್ತಿರಕ್ಕೆ ಬಿಜೆಪಿ ಹುನ್ನಾರ: ಪ್ರತಿಭಟನೆ

ಬಿಜೆಪಿ ಸರಕಾರ ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಸರಕಾರವನ್ನು ಅಸ್ತಿರಗೊಳಿಸಲು ಹೊರಟಿದೆ ಎಂದು ಆರೋಪಿಸಿ ಜಿಲ್ಲಾ ಜೆಡಿಎಸ್‌ ವತಿಯಿಂದ ನಗರದ ಜನರಲ್‌ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

Vijaya Karnataka 13 Jul 2019, 5:00 am
ಮಡಿಕೇರಿ: ಬಿಜೆಪಿ ಸರಕಾರ ರಾಜ್ಯದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿ ಸರಕಾರವನ್ನು ಅಸ್ತಿರಗೊಳಿಸಲು ಹೊರಟಿದೆ ಎಂದು ಆರೋಪಿಸಿ ಜಿಲ್ಲಾ ಜೆಡಿಎಸ್‌ ವತಿಯಿಂದ ನಗರದ ಜನರಲ್‌ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
Vijaya Karnataka Web MDK-mdk12jay5


ಪ್ರತಿಭಟನಾಕಾರರು ಕೇಂದ್ರ ಸರಕಾರ ಹಾಗೂ ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭ ಮಾತನಾಡಿದ ಜೆಡಿಎಸ್‌ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್‌, ರಾಜ್ಯದಲ್ಲಿ ಶಾಸಕರುಗಳು ರೆಸಾರ್ಟ್‌ ರಾಜಕಾರಣ ನಡೆಸುತ್ತಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಇದನ್ನು ಜಿಲ್ಲಾ ಜೆಡಿಎಸ್‌ ತೀವ್ರವಾಗಿ ಖಂಡಿಸುತ್ತದೆ. ಇಷ್ಟೊಂದು ಕೀಳುಮಟ್ಟದ ರಾಜಕಾರಣವನ್ನು ಶಾಸಕರು ಮಾಡಿರುವುದು ನಂಬಲು ಅಸಾಧ್ಯವಾದ ಸಂಗತಿ. ಜೆಡಿಎಸ್‌ನ ಮೂವರು ಶಾಸಕರು ಕೂಡ ರಾಜಕಾರಣದ ಅನುಭವವಿದ್ದರೂ ಕೀಳುಮಟ್ಟದ ರಾಜಕಾರಣ ಮಾಡಿ ಪಕ್ಷ ಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂಬುದು ಬೇಸರದ ಸಂಗತಿ. ಪಕ್ಷ ದ ರಾಜ್ಯಾಧ್ಯಕ್ಷ ರಾಗಿದ್ದ ಅಡಗೂರು ಎಚ್‌.ವಿಶ್ವನಾಥ್‌ ಅವರೂ ಈ ರೀತಿ ಪಕ್ಷ ದ್ರೋಹ ಮಾಡುತ್ತಿರುವುದು ಸರಿಯಲ್ಲ ಎಂದರು.

ಪ್ರತಿಭಟನೆಯಲ್ಲಿ ಯುವ ಜೆಡಿಎಸ್‌ ಜಿಲ್ಲಾಧ್ಯಕ್ಷ ವಿಶ್ವ, ಮಡಿಕೇರಿ ಯುವ ಘಟಕ ಅಧ್ಯಕ್ಷ ರವಿಕಿರಣ್‌ ರೈ, ಜಿಲ್ಲಾ ಜೆಡಿಎಸ್‌ ಉಪಾಧ್ಯಕ್ಷೆ ಲೀಲಾ ಶೇಷಮ್ಮ, ಖಜಾಂಜಿ ಡೆನ್ನಿ ಬರೋಸ್‌, ಜಿಲ್ಲಾ ಜೆಡಿಎಸ್‌ ಮಹಿಳಾ ಘಟಕದ ಅಧ್ಯಕ್ಷೆ ಶಾಂತಿ ಅಪ್ಪಚ್ಚು, ವಿರಾಜಪೇಟೆ ನಗರ ಘಕದ ಅಧ್ಯಕ್ಷ ಮಂಜು ಸೇರಿದಂತೆ ಜೆಡಿಎಸ್‌ನ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ