ಆ್ಯಪ್ನಗರ

ಪ್ರಕೃತಿ ವಿಕೋಪ: ಸಂತ್ರಸ್ತ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹ

ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದ ವಿದ್ಯಾರ್ಥಿಗಳ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಸಂತ್ರಸ್ತರ ಮಾಹಿತಿ ಕಲೆ ಹಾಕುತ್ತಿದೆ ಎಂದು ವಿವಿ ಪ್ರಭಾರ ಕುಲಪತಿ ಡಾ.ಸಿ.ಕೆ. ಕಿಶೋರ್‌ಕುಮಾರ್‌ ತಿಳಿಸಿದ್ದಾರೆ.

Vijaya Karnataka 9 Sep 2018, 5:00 am
ಕುಶಾಲನಗರ: ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದ ವಿದ್ಯಾರ್ಥಿಗಳ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಸಂತ್ರಸ್ತರ ಮಾಹಿತಿ ಕಲೆ ಹಾಕುತ್ತಿದೆ ಎಂದು ವಿವಿ ಪ್ರಭಾರ ಕುಲಪತಿ ಡಾ.ಸಿ.ಕೆ. ಕಿಶೋರ್‌ಕುಮಾರ್‌ ತಿಳಿಸಿದ್ದಾರೆ.
Vijaya Karnataka Web kodagu students information collection
ಪ್ರಕೃತಿ ವಿಕೋಪ: ಸಂತ್ರಸ್ತ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹ


ಪ್ರಕೃತಿ ವಿಕೋಪ ಸಂದರ್ಭ ಹಲವೆಡೆ ವಿದ್ಯಾರ್ಥಿಗಳು ತಮ್ಮ ಮನೆ, ಸಾಮಗ್ರಿ ಹಾಗೂ ದಾಖಲೆಗಳನ್ನು ಕಳೆದುಕೊಂಡಿದ್ದಾರೆ ಎಂಬ ಮಾಹಿತಿ ಇದೆ. ಜಿಲ್ಲೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರೊಂದಿಗೆ ಮಂಗಳೂರು ವಿಶ್ವವಿದ್ಯಾಲಯ ನಿರಂತರ ಸಂಪರ್ಕದಲ್ಲಿದ್ದು, ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಲಾಗಿದೆ ಎಂದಿದ್ದಾರೆ.

ಮನೆ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಉಚಿತ ವಸತಿ ನಿಲಯದ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದಿನ ದಿನಗಳಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಸಂತ್ರಸ್ತ ವಿದ್ಯಾರ್ಥಿಗಳಿಗೆ ಹಲವು ರೀತಿಯಲ್ಲಿ ನೆರವಿನ ಹಸ್ತ ನೀಡಲಿದೆ. ಈ ಕುರಿತಂತೆ ವಿಶ್ವವಿದ್ಯಾಲಯ ಆ ಭಾಗದ ಪ್ರಾಂಶುಪಾಲರೊಂದಿಗೆ ಚರ್ಚಿಸಲು ಸದ್ಯದಲ್ಲೇ ಸಭೆ ಕರೆಯಲಿದೆ. ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ವಿವಿಧ ಕಾಲೇಜುಗಳಿಂದ ಕೊಡಗು ಜಿಲ್ಲೆಯ ಸಂತ್ರಸ್ತ ವಿದ್ಯಾರ್ಥಿಗಳಿಗೆ ಹಣ ಸಂಗ್ರಹಿಸಿ ನೀಡಲಾಗುವುದು. ನೆರೆಯಿಂದಾಗಿ ತರಗತಿಗೆ ಹಾಜರಾಗಲು ಅಸಾಧ್ಯವಾದ ವಿದ್ಯಾರ್ಥಿಗಳಿಗೆ ಹಾಜರಿ ನೀಡಲು ಕ್ರಮಕೈಗೊಳ್ಳಲಾಗುವುದು. ಪ್ರಕೃತಿ ವಿಕೋಪ ಸಂದರ್ಭ ವಿಶ್ವವಿದ್ಯಾಲಯ ನೀಡಿರುವ ದಾಖಲೆಗಳನ್ನು ಕಳೆದುಕೊಂಡಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗುವುದು. ಕಾಲಮಿತಿಗೆ ಸರಿಯಾಗಿ ಪಠ್ಯಗಳು ಮುಗಿಯದಿದ್ದ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಪರೀಕ್ಷೆ ನಡೆಸಲಾಗುವುದು. ಪರೀಕ್ಷಾ ಶುಲ್ಕ ಹಾಗೂ ಇನ್ನಿತರ ಶುಲ್ಕದಿಂದ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎನ್‌ಎಸ್‌ಎಸ್‌ ಮೂಲಕ ಸಮಾಲೋಚನೆ ನಡೆಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮನೆ ಕಳೆದುಕೊಂಡಿರುವ ವಿದ್ಯಾರ್ಥಿಗಳು ನೆರೆಯ ದಕ್ಷಿಣ ಕನ್ನಡ ಅಥವಾ ಉಡುಪಿ ಜಿಲ್ಲೆಯ ಯಾವುದೇ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ವಸತಿ ವ್ಯವಸ್ಥೆ ಸಹಿತ ಪ್ರವೇಶ ನೀಡಲಾಗುವುದು. ಎಂ.ಎಸ್‌.ಡಬ್ಲ್ಯುಕೋರ್ಸ್‌ನ ವಿದ್ಯಾರ್ಥಿಗಳಿಂದ ಕ್ಷೇತ್ರಕಾರ್ಯ ನಡೆಸಿ ಸಂತ್ರಸ್ತರ ಅಸ್ತವ್ಯಸ್ತ ಜೀವನವನ್ನು ಸುಧಾರಿಸುವ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ