ಆ್ಯಪ್ನಗರ

ಕೂಡಿಗೆ: ಗದ್ದೆಗಳು ಜಲಾವೃತ

ಕುಶಾಲನಗರ, ಕೂಡಿಗೆ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು , ಕೂಡಿಗೆಯಲ್ಲಿನ ಕಾವೇರಿ-ಹಾರಂಗಿ ನದಿ ಸಂಗಮದ ಸ್ಥಳದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಬುಧವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ಕೂಡಿಗೆ ವ್ಯಾಪ್ತಿಯಲ್ಲಿ ಕೆಲವು ಗದ್ದೆಗಳು ಜಲಾವೃತಗೊಂಡಿದೆ.

Vijaya Karnataka 15 Jun 2018, 5:00 am
ಕುಶಾಲನಗರ: ಕುಶಾಲನಗರ, ಕೂಡಿಗೆ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದ್ದು , ಕೂಡಿಗೆಯಲ್ಲಿನ ಕಾವೇರಿ-ಹಾರಂಗಿ ನದಿ ಸಂಗಮದ ಸ್ಥಳದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಬುಧವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದ ಕೂಡಿಗೆ ವ್ಯಾಪ್ತಿಯಲ್ಲಿ ಕೆಲವು ಗದ್ದೆಗಳು ಜಲಾವೃತಗೊಂಡಿದೆ.
Vijaya Karnataka Web MDK-14 kus 02


ಕಾವೇರಿ ನದಿ ನೀರು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದ್ದು, ಗ್ರಾಮದ ಗಿರೀಶ್‌, ದಿವಾಕರ್‌, ಪ್ರಭಾ, ಕೃಷ್ಣೇಗೌಡ ಅವರಿಗೆ ಸೇರಿದ ಭತ್ತದ ಗದ್ದೆಗಳಿಗೆ ನೀರು ನುಗ್ಗಿ ಬೆಳೆ ನೀರುಪಾಲಾಗಿದೆ.

ಕೂಡಿಗೆಯಿಂದ ಸೀಗೆಹೊಸೂರು ಮಾರ್ಗವಾಗಿ ಸೋಮವಾರಪೇಟೆಗೆ ತೆರಳುವ ಸೇತುವೆಯ ಮೇಲೆ ನೀರು ಹರಿಯುತ್ತಿರುವುದರಿಂದ ರಸ್ತೆ ಮಾರ್ಗ ಸಂಪರ್ಕ ಕಡಿತಗೊಂಡಿದೆ.

ಕಕ್ಕೆಹೊಳೆಯಿಂದ ಅತಿಯಾಗಿ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಈ ಸೇತುವೆಯು ನೀರಿನಿಂದ ಮುಳುಗಡೆಗೊಂಡಿದ್ದು, ರಸ್ತೆ ಸಂಚಾರಕ್ಕೆ ಅಡ್ಡಿಯುಂಟಾಗಿದೆ . ಈ ರಸ್ತೆಯಲ್ಲಿ ಸಂಚರಿಸಲು ಆಗದೆ ವಾಹನಗಳು ಯಲಕನೂರು ನಾಲೆಯ ರಸ್ತೆಯಲ್ಲಿ ಕೂಡಿಗೆ, ಕುಶಾಲನಗರಕ್ಕೆ ಸಂಚರಿಸುತ್ತಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ