ಆ್ಯಪ್ನಗರ

ಇಂದು ಜಿಲ್ಲೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಗುರುವಾರ ಅಪರಾಹ್ಮ 3 ಗಂಟೆಗೆ ನೀರಾವರಿ ಖಾತೆ ಸಚಿವರೊಂದಿಗೆ ಹಾರಂಗಿ ಜಲಾಶಯದಲ್ಲಿ ಬಾಗಿನ ಅರ್ಪಿಸಲಿದ್ದಾರೆ.

Vijaya Karnataka 19 Jul 2018, 5:00 am
ಮಡಿಕೇರಿ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಗುರುವಾರ ಅಪರಾಹ್ಮ 3 ಗಂಟೆಗೆ ನೀರಾವರಿ ಖಾತೆ ಸಚಿವರೊಂದಿಗೆ ಹಾರಂಗಿ ಜಲಾಶಯದಲ್ಲಿ ಬಾಗಿನ ಅರ್ಪಿಸಲಿದ್ದಾರೆ.
Vijaya Karnataka Web kumaraswamy in district today
ಇಂದು ಜಿಲ್ಲೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ


ಪಿರಿಯಾಪಟ್ಟಣ ತಾಲೂಕಿನ ಕಂಪಲಾಪುರ ಹಾಗೂ ಹಾರಂಗಿ ಜಲಾಶಯ ಬಳಿಯಲ್ಲಿ ಎರಡು ಹೆಲಿಪ್ಯಾಡ್‌ಗೆ ನಿರ್ಮಿಸಲಾಗಿದೆ. ಹವಾಮಾನ ವೈಪರೀತ್ಯವಿದ್ದಲ್ಲಿ ಕಂಪಾಲಪುರದಲ್ಲಿ ಬಂದು ಇಳಿಯಲಿದ್ದಾರೆ. ನಂತರ ಸಂಜೆ 4.30 ಗಂಟೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಜು. 20 ರಂದು ಬೆಳಗ್ಗೆ 6.20 ಗಂಟೆಗೆ ಭಾಗಮಂಡಲ ಭಗಂಡೇಶ್ವರ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಕಾವೇರಿ ಉಗಮ ಸ್ಥಾನ ತಲಕಾವೇರಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಬಸವೇಶ ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿಯೊಂದಿಗೆ ಜಲಸಂಪನ್ಮೂಲ ಮತ್ತು ವೈದ್ಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್‌, ಸಣ್ಣ ನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜ್‌ ಅವರು ಆಗಮಿಮಿಸಲಿದ್ದಾರೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ