ಆ್ಯಪ್ನಗರ

ಅಪಘಾತ: ಬೈಕ್‌ ಬೆಂಕಿಗೆ ಆಹುತಿ

ಸಾರಿಗೆ ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸಂಪೂರ್ಣ ಬೆಂಕಿಗೆ ಅಹುತಿಯಾದ ಘಟನೆ ಸೋಮವಾರಪೇಟೆ ತಾಲೂಕು ಗುಡ್ಡೆಹೊಸೂರು ಬಳಿ ನಡೆದಿದೆ.

Vijaya Karnataka 23 May 2018, 5:00 am
ಕುಶಾಲನಗರ: ಸಾರಿಗೆ ಬಸ್‌ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸಂಪೂರ್ಣ ಬೆಂಕಿಗೆ ಅಹುತಿಯಾದ ಘಟನೆ ಸೋಮವಾರಪೇಟೆ ತಾಲೂಕು ಗುಡ್ಡೆಹೊಸೂರು ಬಳಿ ನಡೆದಿದೆ.
Vijaya Karnataka Web kushalnagara madikery ksrtc bus biky accident bike burn
ಅಪಘಾತ: ಬೈಕ್‌ ಬೆಂಕಿಗೆ ಆಹುತಿ


ಮಡಿಕೇರಿ ರಸ್ತೆಯಲ್ಲಿರುವ ಪರ್ಪಲ್‌ ಪಾಲ್ಮ್‌ ಹೋಟೆಲ್‌ ಬಳಿ ಕೂಡ್ಲಿಗಿಯಿಂದ ಮಡಿಕೇರಿಯತ್ತ ತೆರಳುತ್ತಿದ್ದ ಸಾರಿಗೆ ಬಸ್‌ಗೆ ಎದುರಿನಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿಯಾಗಿದೆ. ಲಾರಿಯೊಂದನ್ನು ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಬೈಕ್‌ ಸವಾರ ನೆಲಕ್ಕುರುಳಿದ್ದು, ಬಸ್‌ನ ಅಡಿಗೆ ಬೈಕ್‌ ಸಿಲುಕಿಕೊಂಡಿದೆ. ಪರಿಣಾಮ ಬೈಕ್‌ನ ಪೆಟ್ರೋಲ್‌ ಟ್ಯಾಂಕ್‌ ಸಿಡಿದು ಬೆಂಕಿ ಹೊತ್ತಿಕೊಂಡಿದ್ದು, ಬಸ್‌ನ ಮುಂಭಾಗಕ್ಕೂ ಬೆಂಕಿ ವ್ಯಾಪಿಸಿ ಉರಿಯತೊಡಗಿತು. ತಕ್ಷಣ ಬಸ್‌ ಚಾಲಕ ವಸಂತ ಅವರು ಪ್ರಯಾಣಿಕರನ್ನು ಕೆಳಕ್ಕಿಳಿಸಿ, ಸ್ಥಳೀಯರ ನೆರವಿನಿಂದ ಬೆಂಕಿಯನ್ನು ಆರಿಸಲು ಪ್ರಯತ್ನಿಸಿದರು. ಸಕಾಲಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ವಾಹನಗಳಿಗೆ ವ್ಯಾಪಿಸಿದ ಬೆಂಕಿಯನ್ನು ನಂದಿಸಿದರು.

ಬೈಕ್‌ ಸವಾರ ಕುಶಾಲನಗರ ನಿವಾಸಿ ಮೆಹ್ತಾಜ್‌ ಎಂದು ತಿಳಿದುಬಂದಿದ್ದು, ಕೈಕಾಲುಗಳಿಗೆ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಘಟನೆಯಿಂದ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ಕಿಲೋಮೀಟರ್‌ವರೆಗೆ ಎರಡೂ ಕಡೆ ವಾಹನಗಳ ಸಾಲು ಇತ್ತು. ಸ್ಥಳಕ್ಕೆ ಭೇಟಿ ನೀಡಿದ ಸಂಚಾರ ಠಾಣೆ ಪೊಲೀಸರು ಅಪಘಾತ ಸ್ಥಳದಿಂದ ವಾಹನ ತೆರವುಗೊಳಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ