ಆ್ಯಪ್ನಗರ

ಕೆರೆಯಲ್ಲಿ ಮುಳುಗಿ ಕಾರ್ಮಿಕ ಸಾವು

ಕಾರ್ಮಿಕರೊಬ್ಬರು ಕೆರೆಯಲ್ಲಿ ಬಟ್ಟೆ ತೊಳೆಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.

Vijaya Karnataka 6 Apr 2019, 5:00 am
ಮಡಿಕೇರಿ: ಕಾರ್ಮಿಕರೊಬ್ಬರು ಕೆರೆಯಲ್ಲಿ ಬಟ್ಟೆ ತೊಳೆಯುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.
Vijaya Karnataka Web labour death in the lake
ಕೆರೆಯಲ್ಲಿ ಮುಳುಗಿ ಕಾರ್ಮಿಕ ಸಾವು


ಸುಂಟಿಕೊಪ್ಪ ಸಮೀಪದ ಮೋದೂರಿನ ಖಾಸಗಿ ಎಸ್ಟೇಟ್‌ನಲ್ಲಿ ಈ ಘಟನೆ ಸಂಭವಿಸಿದ್ದು, ಲೈನ್‌ ಮನೆಯಲ್ಲಿ ವಾಸಿಸುತ್ತಿದ್ದ ಕಾರ್ಮಿಕ ಮುತ್ತಣ್ಣ (48) ಮೃತರು.

ಗುರುವಾರ ಬೆಳಗ್ಗೆ 10 ಗಂಟೆ ಸುಮಾರು ಮುತ್ತಣ್ಣ ತೋಟದ ಕೆರೆಗೆ ಬಟ್ಟೆ ತೊಳೆಯಲು ಹೋಗಿದ್ದು, ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಸಂಜೆಯಾದರೂ ಮನೆಗೆ ಹಿಂತಿರುಗದ ಕಾರಣ ಮನೆಯವರು ಮತ್ತು ಸ್ಥಳೀಯರು ಎಲ್ಲೆಡೆ ಹುಡುಕಾಡಿದರಾದರೂ ಪ್ರಯೋಜನವಾಗಿರಲಿಲ್ಲ. ಏ.5 ರಂದು ಬೆಳಗ್ಗೆ ಕೆರೆಯ ಬದಿಯಲ್ಲಿ ಮುತ್ತಣ್ಣ ಅವರು ತೊಳೆಯಲೆಂದು ತೆಗೆದುಕೊಂಡು ಹೋಗಿದ್ದ ಬಟ್ಟೆ ಪತ್ತೆಯಾಗಿದೆ.

ನಂತರ ಅಗ್ನಿಶಾಮಕ ದಳದ ಲೀಡಿಂಗ್‌ ಫೈರ್‌ ಮ್ಯಾನ್‌ ಸತೀಶ್‌, ಎಂ.ಎಂ. ನಂಜಪ್ಪ, ಎನ್‌.ಸಿ. ಭರತ್‌ ಹಾಗೂ ಚಾಲಕ ಜೆ. ಪ್ರಕಾಶ್‌ ಪಾತಾಳ ಗಾಳ (ಗ್ರಾಫ್‌ ಲೈನ್‌) ಬಧಿಳಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ. ಮುತ್ತಣ್ಣ ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ