ಆ್ಯಪ್ನಗರ

‘ಕನ್ನಡ ನುಡಿ ಹಬ್ಬ’ ಮೆರವಣಿಗೆ

ಕರ್ನಾಟಕ ವೀರ ಕನ್ನಡಿಗರ ಸೇನೆಯ ತಾಲೂಕು ಘಟಕದ ವತಿಯಿಂದ ‘ಕನ್ನಡ ನುಡಿ ಹಬ್ಬ’ದ ಅಂಗವಾಗಿ ಮೆರವಣಿಗೆ ನಡೆಯಿತು.

ವಿಕ ಸುದ್ದಿಲೋಕ 2 Mar 2016, 4:41 am
ಸೋಮವಾರಪೇಟೆ: ಕರ್ನಾಟಕ ವೀರ ಕನ್ನಡಿಗರ ಸೇನೆಯ ತಾಲೂಕು ಘಟಕದ ವತಿಯಿಂದ ‘ಕನ್ನಡ ನುಡಿ ಹಬ್ಬ’ದ ಅಂಗವಾಗಿ ಮೆರವಣಿಗೆ ನಡೆಯಿತು.
Vijaya Karnataka Web latin word festival parade
‘ಕನ್ನಡ ನುಡಿ ಹಬ್ಬ’ ಮೆರವಣಿಗೆ

ಮಂಗಳವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರರ ಪ್ರತಿಮೆಗೆ ವಿರಕ್ತ ಮಠದ ಮಠಾಧೀಶರಾದ ವಿಶ್ವೇಶ್ವರ ಸ್ವಾಮೀಜಿ ಮಾಲಾರ್ಪಣೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ವಾದ್ಯಗೋಷ್ಠಿಯೊಂದಿಗೆ ಕಳಸ ಹೊತ್ತ ಮಹಿಳೆಯರು ಬೃಹತ್ ಕನ್ನಡದ ಧ್ವಜ ಹಿಡಿದ ನೂರಾರು ಶಾಲಾ ಮಕ್ಕಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆ ಜೆಸಿ ವೇದಿಕೆಯಲ್ಲಿ ಮುಕ್ತಾಯಗೊಂಡಿತ್ತು.
ನಂತರ ಜೇಸಿ ವೇದಿಕೆಯಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ವೀರ ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷ ರವೀಂದ್ರಕುಮಾರ್ ವಹಿಸಿದ್ದರು. ವೇದಿಕೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಎಸ್.ವಿ. ದಿವಾಕರ್, ತಾಲ್ಲೂಕು ಘಟಕದ ಅಧ್ಯಕ್ಷ ದಿನೇಶ್ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ