ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ
ವಿದ್ಯಾರ್ಥಿಗಳು ಪೊಲೀಸ್ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಅರಿವು ಹೊಂದುವ ಅಗತ್ಯ ಇದೆ ಎಂದು ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ಮರಿಸ್ವಾಮಿ ಅಭಿಪ್ರಾಯಪಟ್ಟರು.
Vijaya Karnataka Web 1 Jan 2019, 8:40 pm
ಶನಿವಾರಸಂತೆ
ವಿದ್ಯಾರ್ಥಿಗಳು ಪೊಲೀಸ್ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಅರಿವು ಹೊಂದುವ ಅಗತ್ಯ ಇದೆ ಎಂದು ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ಮರಿಸ್ವಾಮಿ ಅಭಿಪ್ರಾಯಪಟ್ಟರು.
ಭಾರತಿ ಪ.ಪೂ.ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ಮತ್ತು ಶನಿವಾರಸಂತೆ ಪೊಲೀಸ್ ಠಾಣೆಯಿಂದ ಹಮ್ಮಿಕೊಂಡಿದ್ದ 2018ನೇ ಸಾಲಿನ ಅಪರಾಧ ತಡೆ ಮಾಸಾಚರಣೆಯಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಪೊಲೀಸ್ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು ಎಂದರು.
ಈಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬರು ಪೊಲೀಸ್ ಕಾನೂನು, ನಿಯಮಗಳ ಬಗ್ಗೆ ತಿಳಿದುಕೊಳ್ಳುವ ಅಗತ್ಯ ಇದೆ, ರಸ್ತೆ ಸುರಕ್ಷ ತೆಯ ಕಾನೂನು ನಿಯಮಗಳು, ಮೋಟಾರು ಕಾಯಿದೆ ನಿಯಮಗಳ ಬಗ್ಗೆ ಅರಿತುಕೊಂಡರೆ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದರು.
ವಿದ್ಯಾರ್ಥಿಗಳು ಸೇರಿದಂತೆ 18 ವರ್ಷದೊಳಗಿನ ಮಕ್ಕಳು ಯಾವುದೇ ವಾಹನವನ್ನು ಓಡಿಸುವುದು ಕಾನೂನಿನ ಪ್ರಕಾರ ಅಪರಾಧವಾಗುತ್ತದೆ, ಪ್ರತಿ ವಾಹನ ಸವಾರರು ಕಡ್ಡಾಯವಾಗಿ ಡಿಎಲ್ ಮಾಡಿಸಿಕೊಂಡು ಓಡಿಸಬೇಕು, ದ್ವಿಚಕ್ರ ವಾಹನ ಸೇರಿದಂತೆ ಪ್ರತಿ ವಾಹನಗಳಿಗೆ ಕಡ್ಡಾಯವಾಗಿ ವಾಹನ ವಿಮೆ ಮಾಡಿಸಿಕೊಳ್ಳಬೇಕು. ಅಪಘಾತ ಸಂದರ್ಭದಲ್ಲಿ ಮೃತಪಟ್ಟರೆ ಹಾಗೂ ಗಾಯಗೊಂಡಲ್ಲಿ ವಿಮೆಯ ಮೂಲಕ ಪರಿಹಾರ ದೊರೆಯುತ್ತದೆ. ಈ ನಿಟ್ಟಿನಲ್ಲಿ ವಾಹನಗಳಿಗೆ ಡಿಎಲ್ ಮತ್ತು ವಾಹನ ವಿಮೆ ನೋಂದಣಿ ಮಾಡಿಸಿಕೊಳ್ಳುತ್ತಿರಬೇಕು. ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರರಿಬ್ಬರೂ ಕಡ್ಡಾಯವಾಗಿ ಹೆಲ್ಮೆಂಟ್ ಧರಿಸಬೇಕು ಎಂದರು.
ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಪೊಕ್ಸೊ ಕಾಯಿದೆ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷ ಣೆ, ಮತ್ತು ಪೋಷಣೆ ಮಾಡುವ ನಿಟ್ಟಿನಲ್ಲಿ ಪೋಷಕರು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.
ಪೊಲೀಸ್ ಸಿಬ್ಬಂದಿ ಬೋಪಣ್ಣ ಮಾಹಿತಿ ನೀಡಿ, ರಸ್ತೆ ಸುರಕ್ಷ ತೆ, ಸಂಚಾರ ನಿಯಮಗಳನ್ನು ಉಲ್ಲಂಘಿಸುವುದು ಅಪರಾಧವಾಗುತ್ತದೆ. ರಸ್ತೆ ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ಉದ್ದೇಶದಿಂದ ಪೊಲೀಸ್ ಇಲಾಖೆ ಇಂತಹ ಕಾನೂನು, ನಿಯಮಗಳನ್ನು ರೂಪಿಸಿದೆ ಎಂದರು.
ವಿದ್ಯಾರ್ಥಿ ದಿಸೆಯಲ್ಲಿರುವಾಗಲೇ ರಸ್ತೆ ಸುರಕ್ಷ ತೆ, ಸಂಚಾರ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕು, ಕಾನೂನು ನಿಯಮಗಳನ್ನು ಪಾಲನೆ ಮಾಡಿದರೆ ಅಪರಾಧ ಪ್ರಕರಣಗಳಾಗುವುದಿಲ್ಲ. ಈ ಉದ್ದೇಶದಿಂದ ಪೊಲೀಸ್ ಇಲಾಖೆ ಶಾಲಾ-ಕಾಲೇಜುಗಳಲ್ಲೂ ಅಪರಾಧ ಮಾಸಾಚರಣೆ ಕಾರ್ಯಕ್ರಮದ ಮೂಲಕ ಮಾಹಿತಿ ನೀಡುತ್ತಿದೆ ಎಂದರು.
ಪ್ರೌಢಶಾಲಾ ಮುಖ್ಯ ಶಿಕ್ಷ ಕ ನರಸಿಂಹಮೂರ್ತಿ ಹಾಜರಿದ್ದರು.
ವಿದ್ಯಾರ್ಥಿಗಳು ಪೊಲೀಸ್ ಕಾನೂನು, ರಸ್ತೆ ಸುರಕ್ಷ ತೆ ಮುಂತಾದ ನಿಯಮಗಳ ಅರಿವು ಹೊಂದುವ ಅಗತ್ಯ ಇದೆ ಎಂದು ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ಮರಿಸ್ವಾಮಿ ಅಭಿಪ್ರಾಯಪಟ್ಟರು.
ಭಾರತಿ ಪ.ಪೂ.ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ಮತ್ತು ಶನಿವಾರಸಂತೆ ಪೊಲೀಸ್ ಠಾಣೆಯಿಂದ ಹಮ್ಮಿಕೊಂಡಿದ್ದ 2018ನೇ ಸಾಲಿನ ಅಪರಾಧ ತಡೆ ಮಾಸಾಚರಣೆಯಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಪೊಲೀಸ್ ಇಲಾಖೆಯ ಕಾನೂನು, ನಿಯಮಗಳ ಬಗ್ಗೆ ಅರಿವು ಹೊಂದಿ ಪೋಷಕರು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವಷ್ಟು ಪ್ರಬುದ್ಧರಾಗಬೇಕು ಎಂದರು.
ಈಚಿನ ದಿನಗಳಲ್ಲಿ ರಸ್ತೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬರು ಪೊಲೀಸ್ ಕಾನೂನು, ನಿಯಮಗಳ ಬಗ್ಗೆ ತಿಳಿದುಕೊಳ್ಳುವ ಅಗತ್ಯ ಇದೆ, ರಸ್ತೆ ಸುರಕ್ಷ ತೆಯ ಕಾನೂನು ನಿಯಮಗಳು, ಮೋಟಾರು ಕಾಯಿದೆ ನಿಯಮಗಳ ಬಗ್ಗೆ ಅರಿತುಕೊಂಡರೆ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದರು.
ವಿದ್ಯಾರ್ಥಿಗಳು ಸೇರಿದಂತೆ 18 ವರ್ಷದೊಳಗಿನ ಮಕ್ಕಳು ಯಾವುದೇ ವಾಹನವನ್ನು ಓಡಿಸುವುದು ಕಾನೂನಿನ ಪ್ರಕಾರ ಅಪರಾಧವಾಗುತ್ತದೆ, ಪ್ರತಿ ವಾಹನ ಸವಾರರು ಕಡ್ಡಾಯವಾಗಿ ಡಿಎಲ್ ಮಾಡಿಸಿಕೊಂಡು ಓಡಿಸಬೇಕು, ದ್ವಿಚಕ್ರ ವಾಹನ ಸೇರಿದಂತೆ ಪ್ರತಿ ವಾಹನಗಳಿಗೆ ಕಡ್ಡಾಯವಾಗಿ ವಾಹನ ವಿಮೆ ಮಾಡಿಸಿಕೊಳ್ಳಬೇಕು. ಅಪಘಾತ ಸಂದರ್ಭದಲ್ಲಿ ಮೃತಪಟ್ಟರೆ ಹಾಗೂ ಗಾಯಗೊಂಡಲ್ಲಿ ವಿಮೆಯ ಮೂಲಕ ಪರಿಹಾರ ದೊರೆಯುತ್ತದೆ. ಈ ನಿಟ್ಟಿನಲ್ಲಿ ವಾಹನಗಳಿಗೆ ಡಿಎಲ್ ಮತ್ತು ವಾಹನ ವಿಮೆ ನೋಂದಣಿ ಮಾಡಿಸಿಕೊಳ್ಳುತ್ತಿರಬೇಕು. ದ್ವಿಚಕ್ರ ವಾಹನ ಸವಾರ ಮತ್ತು ಹಿಂಬದಿ ಸವಾರರಿಬ್ಬರೂ ಕಡ್ಡಾಯವಾಗಿ ಹೆಲ್ಮೆಂಟ್ ಧರಿಸಬೇಕು ಎಂದರು.
ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಪೊಕ್ಸೊ ಕಾಯಿದೆ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷ ಣೆ, ಮತ್ತು ಪೋಷಣೆ ಮಾಡುವ ನಿಟ್ಟಿನಲ್ಲಿ ಪೋಷಕರು, ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.
ಪೊಲೀಸ್ ಸಿಬ್ಬಂದಿ ಬೋಪಣ್ಣ ಮಾಹಿತಿ ನೀಡಿ, ರಸ್ತೆ ಸುರಕ್ಷ ತೆ, ಸಂಚಾರ ನಿಯಮಗಳನ್ನು ಉಲ್ಲಂಘಿಸುವುದು ಅಪರಾಧವಾಗುತ್ತದೆ. ರಸ್ತೆ ಅಪಘಾತ ಪ್ರಕರಣಗಳನ್ನು ತಡೆಗಟ್ಟುವ ಉದ್ದೇಶದಿಂದ ಪೊಲೀಸ್ ಇಲಾಖೆ ಇಂತಹ ಕಾನೂನು, ನಿಯಮಗಳನ್ನು ರೂಪಿಸಿದೆ ಎಂದರು.
ವಿದ್ಯಾರ್ಥಿ ದಿಸೆಯಲ್ಲಿರುವಾಗಲೇ ರಸ್ತೆ ಸುರಕ್ಷ ತೆ, ಸಂಚಾರ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕು, ಕಾನೂನು ನಿಯಮಗಳನ್ನು ಪಾಲನೆ ಮಾಡಿದರೆ ಅಪರಾಧ ಪ್ರಕರಣಗಳಾಗುವುದಿಲ್ಲ. ಈ ಉದ್ದೇಶದಿಂದ ಪೊಲೀಸ್ ಇಲಾಖೆ ಶಾಲಾ-ಕಾಲೇಜುಗಳಲ್ಲೂ ಅಪರಾಧ ಮಾಸಾಚರಣೆ ಕಾರ್ಯಕ್ರಮದ ಮೂಲಕ ಮಾಹಿತಿ ನೀಡುತ್ತಿದೆ ಎಂದರು.
ಪ್ರೌಢಶಾಲಾ ಮುಖ್ಯ ಶಿಕ್ಷ ಕ ನರಸಿಂಹಮೂರ್ತಿ ಹಾಜರಿದ್ದರು.