ಆ್ಯಪ್ನಗರ

ಆರೋಗ್ಯಕರ ಸಮಾಜಕ್ಕಾಗಿ ದುಶ್ಚಟ ತ್ಯಜಿಸಿ

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕವಾಗಿ ಪ್ರತಿಯೊಬ್ಬರು ಕೂಡ ದುಶ್ಚಟಗಳಿಂದ ದೂರವಾಗಿ ಎಂದು ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

Vijaya Karnataka 15 May 2019, 5:00 am
ಕುಶಾಲನಗರ: ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕವಾಗಿ ಪ್ರತಿಯೊಬ್ಬರು ಕೂಡ ದುಶ್ಚಟಗಳಿಂದ ದೂರವಾಗಿ ಎಂದು ವಿರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
Vijaya Karnataka Web MDK-14 kus 04


ಕೊಡಗು ಜಿಲ್ಲಾ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ಹಾಗೂ ರೋಟರಿ ಸಂಸ್ಥೆ ಹಾಗೂ ಮೈಸೂರು ಜೆಎಸ್‌ಎಸ್‌ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರದಲ್ಲಿ ಬಸವಣ್ಣ,ಬುದ್ಧ, ಮಹಾವೀರ, ಅಕ್ಕಮಹಾದೇವಿ, ವಾಲ್ಮೀಕಿ, ಅಂಬೇಡ್ಕರ್‌, ಶಂಕರಚಾರ್ಯ, ಶಿವಕುಮಾರಸ್ವಾಮಿ ಜಯಂತಿ ಹಾಗೂ ಕಾಯಕ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಿಡ್ಡಳ್ಳಿ ನಿರಾಶ್ರಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಆರೋಗ್ಯವಂತ ಮನುಷ್ಯನ ಶರೀರದಲ್ಲಿ ಆರೋಗ್ಯವಂತ ಮನಸ್ಸು ಇರುತ್ತದೆ. ಶರೀರ ಮತ್ತು ಮನಸ್ಸುಗಳ ಸಂಬಂಧ ಮಾಡುವ ಅಲೋಚನೆಗಳು ಹಾಗೂ ವಿಕೃತ ಚಿಂತನೆಗಳು ಶರೀರದಲ್ಲಿ ನೋವಿನ ಅನುಭವಗಳನ್ನು ಉಂಟು ಮಾಡುತ್ತದೆ ಎಂದರು.

ಶರೀರ ಮತ್ತು ಮನಸ್ಸುಗಳ ನಡುವೆ ಸದೃಢತೆಯನ್ನು ಸಾಧಿಸುವ ಮೂಲಕ ಅದ್ಭುತ ಜ್ಞಾನ ಸಂಪಾದಿಸಿದ ಶರಣರ ಜನ್ಮದಿನಾಚರಣೆಯಂದು ಆರೋಗ್ಯ ಶಿಬಿರ ಹಮ್ಮಿಕೊಂಡಿರುವುದು ಅರ್ಥಪೂರ್ಣ ಕಾರ್ಯಕ್ರಮ. ಈ ಶಿಬಿರದ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆಯುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು ಎಂದು ಸಲಹೆ ನೀಡಿದರು.

ಮಾದ್ರೆ ಮುದ್ದಿನಕಟ್ಟೆ ಮಠದ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಇಂದಿನ ಸಮಾಜದಲ್ಲಿ ವಾಸ್ತವಿಕವಾಗಿ ಪ್ರತಿಯೊಬ್ಬರು ನಿರಾಶ್ರಿತರೇ. ಆದ್ದರಿಂದ ನಾವು ಎಲ್ಲವನ್ನೂ ಕಳೆದುಕೊಂಡಿದ್ದೇವೆ ಎಂಬ ಮನೋಭಾವ ಹಾಗೂ ನೋವು ಬೇಡ ಎಂದು ಹೇಳಿದರು.

ಕಾರ್ಯಕ್ರಮವನ್ನು ಪತ್ರಕರ್ತ ಜಿ.ರಾಜೇಂದ್ರ ಉದ್ಘಾಟಿಸಿದರು. ಕುಶಾಲನಗರ ಸರಕಾರಿ ಪಾಲಿಟೆಕ್ನಿಕ್‌ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಚ್‌.ವಿ.ಶಿವಪ್ಪ ಮಾತನಾಡಿದರು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಮಹೇಶ್‌ ಅಧ್ಯಕ್ಷ ತೆ ವಹಿಸಿದ್ದರು.

ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ, ಕಲ್ಲುಮಠದ ಮಹಾಂತ ಸ್ವಾಮೀಜಿ , ಸೋಮವಾರಪೇಟೆ ರೋಟರಿ ಸಂಸ್ಥೆ ಅಧ್ಯಕ್ಷ ಪಿ.ಕೆ.ರವಿ, ತಾಲೂಕು ವೀರಶೈವ ಸಮಾಜದ ಅಧ್ಯಕ್ಷ ಹಾಲಪ್ಪ, ಪ್ರಧಾನ ಕಾರ್ಯದರ್ಶಿ ಕಾಂತರಾಜ್‌, ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪಿ.ಮಹಾದೇವಪ್ಪ, ಮೈಸೂರು ಜೆಎಸ್‌ಎಸ್‌ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಪೂರ್ಣಿಮಾ, ಕದಳಿ ಮಹಿಳಾ ವೇದಿಕೆ ಅಧ್ಯಕ್ಷೆ ಲೇಖನಾ ಧರ್ಮಪ್ಪ, ಕುಶಾಲನಗರ ಪ.ಪಂ.ಸದಸ್ಯೆ ರೂಪಾ ಉಮಾಶಂಕರ್‌, ಹುದುಗೂರು ಉಪ ವಲಯ ಅರಣ್ಯಾಧಿಕಾರಿ ಸತೀಶ್‌ ಕುಮಾರ್‌, ಅಕ್ಕನ ಬಗಳದ ಕಮಲಮ್ಮ , ಶಿಕ್ಷ ಕರಾದ ಎಸ್‌.ಕೆ.ಸೌಭಾಗ್ಯಾ, ಬಸವರಾಜು, ಶಿವಲಿಂಗ ಹಾಜರಿದ್ದರು.

ಇದೇ ಸಂದರ್ಭ ಶೌರ್ಯಚಕ್ರ ಪ್ರಶಸ್ತಿ ಪುರಸ್ಕೃತ ಎಚ್‌.ಎನ್‌.ಮಹೇಶ್‌, ದಿಡ್ಡಳ್ಳಿ ನಿರಾಶ್ರಿತ ಪರ ಹೋರಾಟಗಾರರಾದ ಮುತ್ತಮ್ಮ, ಮಲ್ಲಪ್ಪ, ಸ್ವಾಮೀಯಪ್ಪ, ಅಪ್ಪುಕುಟ್ಟಿ ಅವರನ್ನು ಸನ್ಮಾನಿಸಲಾಯಿತು. ನಂತರ ಪುನರ್ವಸತಿ ಕೇಂದ್ರದಲ್ಲಿ ಅತಿಥಿಗಳು ಗಿಡಗಳನ್ನು ನೆಟ್ಟು ನೀರು ಹಾಕಿದರು.

ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣಾ ಶಿಬಿರಲ್ಲಿ ಪುನರ್ವಸತಿ ಕೇಂದ್ರದ ನಿರಾಶ್ರಿತರು ಸೇರಿದಂತೆ ಸುತ್ತಮುಲಿನ ಗ್ರಾಮಗಳ ನೂರಾರು ಮಂದಿ ತಪಾಸಣೆಗೊಳಗಾದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ