ಕುಶಾಲನಗರ
ಪ್ರಕೃತಿಯ ಬದಲಾವಣೆ ಸಹಜವಾಗಿದ್ದು ಅದರೊಂದಿಗೆ ಬದುಕು ಸಾಗಿಸುವುದು ಮಾನವನಿಗೆ ಅನಿವಾರ್ಯ ಎಂದು ಅಖಿಲ ಭಾರತ ಸನ್ಯಾಸಿ ಸಂಘದ ಪ್ರಮುಖರಾದ ರಮಾನಂದ ಸ್ವಾಮೀಜಿ ಹೇಳಿದರು.
ಕಾಲೂರು ಗ್ರಾಮದ ಪ್ರಕೃತಿ ವಿಕೋಪ ಪ್ರದೇಶಗಳನ್ನು ವೀಕ್ಷಿಸಿದ ನಂತರ ಸಂತ್ರಸ್ತ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ದಕ್ಷಿಣ ಭಾರತಕ್ಕೆ ಜೀವಜಲ ನೀಡುವ ಮೂಲ ಕಾವೇರಿ ನಾಡಿನಲ್ಲಿ ಈಚೆಗೆ ಉಂಟಾಗಿರುವ ಪ್ರಕೃತಿ ದುರಂತದಲ್ಲಿ ಜಿಲ್ಲೆಯ ಹಲವೆಡೆ ಜನಜೀವನ ಏರುಪೇರು ಉಂಟಾಗಿರುವುದು ದುಃಖಕರ ವಿಷಯ. ಈ ನಿಟ್ಟಿನಲ್ಲಿ ತಮಿಳುನಾಡಿನ ಜನತೆ ತಮ್ಮೊಂದಿಗಿದ್ದಾರೆ. ತಮ್ಮ ಸಮಿತಿ ಮೂಲಕ ಪರಿಸ್ಥಿತಿಯ ಬಗ್ಗೆ ತಮಿಳುನಾಡು ಮತ್ತು ಕೇಂದ್ರ ಸರಕಾರಗಳಿಗೆ ಮನವಿ ಸಲ್ಲಿಸುವ ಮೂಲಕ ಗಮನ ಸೆಳೆಯುವುದರೊಂದಿಗೆ ಮೂಲ ಕಾವೇರಿ ಭಾಗದಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶಾಶ್ವತ ಯೋಜನೆ ರೂಪಿಸುವ ನಿಟ್ಟಿನಲ್ಲಿ ವಿಶೇಷ ಅನುದಾನ ಕಲ್ಪಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಮಾತನಾಡಿದ ಗ್ರಾಮದ ಹಿರಿಯರಾದ ನಾಗೇಶ್ ಕಾಲೂರು, ಗ್ರಾಮದ ಜನತೆ ಬಹುತೇಕ ಮೂಲ ವ್ಯವಸ್ಥೆಗಳನ್ನು ಕಳೆದುಕೊಳ್ಳುವುದರೊಂದಿಗೆ ಮುಂದಿನ ಭವಿಷ್ಯದ ಬಗ್ಗೆ ಚಿಂತೆಯಲ್ಲಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮದ ಪುನರ್ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸುವ ಅವಶ್ಯಕತೆಯಿದೆ. ಹಾರಂಗಿ ಅಣೆಕಟ್ಟು ಹಿನ್ನೀರಿನಿಂದ ಅವಘಡಗಳು ಉಂಟಾಗಿರುವ ಸಾಧ್ಯತೆ ಇರುವುದಾಗಿ ಸಂಶಯ ವ್ಯಕ್ತಪಡಿಸಿದ ಅವರು, ಮತ್ತೆ ಇಂತಹ ದುರಂತಗಳು ಮರುಕಳಿಸದಂತೆ ಎಚ್ಚರ ವಹಿಸುವ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳಬೇಕು ಎಂದರು.
ಕುಶಾಲನಗರ ಕೊಡವ ಸಮಾಜದ ಉಪಾಧ್ಯಕ್ಷ ರಾದ ಅಯಿಲಪಂಡ ಮಂದಣ್ಣ, ಸ್ಥಳೀಯ ಜನರಿಗೆ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಸಾಧುಸಂತರ ತಂಡದ ಸದಸ್ಯರಿಗೆ ಮಾಹಿತಿ ಒದಗಿಸಿದರು. ಸಾಧುಸಂತರ ತಂಡ ಗ್ರಾಮದ ಹಲವು ಮನೆಗಳಿಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳುವುದರೊಂದಿಗೆ ದಿನಬಳಕೆ ಸಾಮಗ್ರಿಗಳನ್ನು ವಿತರಣೆ ಮಾಡಿತು.
ಕುಶಾಲನಗರ ಕೊಡವ ಸಮಾಜ ಮಾಜಿ ಅಧ್ಯಕ್ಷ ಮಂಡೇಪಂಡ ಬೋಸ್ ಮೊಣ್ಣಪ್ಪ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ.ಎನ್.ಚಂದ್ರಮೋಹನ್, ಅಖಿಲ ಭಾರತ ಸನ್ಯಾಸಿ ಸಂಘದ ಸದಸ್ಯರು, ಕಾರ್ಯಕರ್ತರು ಹಾಜರಿದ್ದರು.
ಕಾವೇರಿ ನದಿ ಜಾಗೃತಿ ತೀರ್ಥಯಾತ್ರಾ ತಂಡ ಜಿಲ್ಲೆಯ ವಿವಿಧೆಡೆ ಸಾಗಿ ರಾಮನಾಥಪುರ ಮೂಲಕ ಶ್ರೀರಂಗಪಟ್ಟಣಕ್ಕೆ ತೆರಳಿದೆ. ಕುಶಾಲನಗರ ಮತ್ತು ಕಣಿವೆಯಲ್ಲಿ ಜೀವನದಿಗೆ ಮಹಾ ಆರತಿ ಬೆಳಗಿದ ತಂಡ ಜಿಲ್ಲೆಯಿಂದ ಹಾಸನದತ್ತ ಸಾಗಿತು.
ಪ್ರಕೃತಿಯ ಬದಲಾವಣೆ ಸಹಜವಾಗಿದ್ದು ಅದರೊಂದಿಗೆ ಬದುಕು ಸಾಗಿಸುವುದು ಮಾನವನಿಗೆ ಅನಿವಾರ್ಯ ಎಂದು ಅಖಿಲ ಭಾರತ ಸನ್ಯಾಸಿ ಸಂಘದ ಪ್ರಮುಖರಾದ ರಮಾನಂದ ಸ್ವಾಮೀಜಿ ಹೇಳಿದರು.
ಕಾಲೂರು ಗ್ರಾಮದ ಪ್ರಕೃತಿ ವಿಕೋಪ ಪ್ರದೇಶಗಳನ್ನು ವೀಕ್ಷಿಸಿದ ನಂತರ ಸಂತ್ರಸ್ತ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ದಕ್ಷಿಣ ಭಾರತಕ್ಕೆ ಜೀವಜಲ ನೀಡುವ ಮೂಲ ಕಾವೇರಿ ನಾಡಿನಲ್ಲಿ ಈಚೆಗೆ ಉಂಟಾಗಿರುವ ಪ್ರಕೃತಿ ದುರಂತದಲ್ಲಿ ಜಿಲ್ಲೆಯ ಹಲವೆಡೆ ಜನಜೀವನ ಏರುಪೇರು ಉಂಟಾಗಿರುವುದು ದುಃಖಕರ ವಿಷಯ. ಈ ನಿಟ್ಟಿನಲ್ಲಿ ತಮಿಳುನಾಡಿನ ಜನತೆ ತಮ್ಮೊಂದಿಗಿದ್ದಾರೆ. ತಮ್ಮ ಸಮಿತಿ ಮೂಲಕ ಪರಿಸ್ಥಿತಿಯ ಬಗ್ಗೆ ತಮಿಳುನಾಡು ಮತ್ತು ಕೇಂದ್ರ ಸರಕಾರಗಳಿಗೆ ಮನವಿ ಸಲ್ಲಿಸುವ ಮೂಲಕ ಗಮನ ಸೆಳೆಯುವುದರೊಂದಿಗೆ ಮೂಲ ಕಾವೇರಿ ಭಾಗದಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶಾಶ್ವತ ಯೋಜನೆ ರೂಪಿಸುವ ನಿಟ್ಟಿನಲ್ಲಿ ವಿಶೇಷ ಅನುದಾನ ಕಲ್ಪಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಮಾತನಾಡಿದ ಗ್ರಾಮದ ಹಿರಿಯರಾದ ನಾಗೇಶ್ ಕಾಲೂರು, ಗ್ರಾಮದ ಜನತೆ ಬಹುತೇಕ ಮೂಲ ವ್ಯವಸ್ಥೆಗಳನ್ನು ಕಳೆದುಕೊಳ್ಳುವುದರೊಂದಿಗೆ ಮುಂದಿನ ಭವಿಷ್ಯದ ಬಗ್ಗೆ ಚಿಂತೆಯಲ್ಲಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮದ ಪುನರ್ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸುವ ಅವಶ್ಯಕತೆಯಿದೆ. ಹಾರಂಗಿ ಅಣೆಕಟ್ಟು ಹಿನ್ನೀರಿನಿಂದ ಅವಘಡಗಳು ಉಂಟಾಗಿರುವ ಸಾಧ್ಯತೆ ಇರುವುದಾಗಿ ಸಂಶಯ ವ್ಯಕ್ತಪಡಿಸಿದ ಅವರು, ಮತ್ತೆ ಇಂತಹ ದುರಂತಗಳು ಮರುಕಳಿಸದಂತೆ ಎಚ್ಚರ ವಹಿಸುವ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳಬೇಕು ಎಂದರು.
ಕುಶಾಲನಗರ ಕೊಡವ ಸಮಾಜದ ಉಪಾಧ್ಯಕ್ಷ ರಾದ ಅಯಿಲಪಂಡ ಮಂದಣ್ಣ, ಸ್ಥಳೀಯ ಜನರಿಗೆ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಸಾಧುಸಂತರ ತಂಡದ ಸದಸ್ಯರಿಗೆ ಮಾಹಿತಿ ಒದಗಿಸಿದರು. ಸಾಧುಸಂತರ ತಂಡ ಗ್ರಾಮದ ಹಲವು ಮನೆಗಳಿಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳುವುದರೊಂದಿಗೆ ದಿನಬಳಕೆ ಸಾಮಗ್ರಿಗಳನ್ನು ವಿತರಣೆ ಮಾಡಿತು.
ಕುಶಾಲನಗರ ಕೊಡವ ಸಮಾಜ ಮಾಜಿ ಅಧ್ಯಕ್ಷ ಮಂಡೇಪಂಡ ಬೋಸ್ ಮೊಣ್ಣಪ್ಪ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಂಚಾಲಕ ಎಂ.ಎನ್.ಚಂದ್ರಮೋಹನ್, ಅಖಿಲ ಭಾರತ ಸನ್ಯಾಸಿ ಸಂಘದ ಸದಸ್ಯರು, ಕಾರ್ಯಕರ್ತರು ಹಾಜರಿದ್ದರು.
ಕಾವೇರಿ ನದಿ ಜಾಗೃತಿ ತೀರ್ಥಯಾತ್ರಾ ತಂಡ ಜಿಲ್ಲೆಯ ವಿವಿಧೆಡೆ ಸಾಗಿ ರಾಮನಾಥಪುರ ಮೂಲಕ ಶ್ರೀರಂಗಪಟ್ಟಣಕ್ಕೆ ತೆರಳಿದೆ. ಕುಶಾಲನಗರ ಮತ್ತು ಕಣಿವೆಯಲ್ಲಿ ಜೀವನದಿಗೆ ಮಹಾ ಆರತಿ ಬೆಳಗಿದ ತಂಡ ಜಿಲ್ಲೆಯಿಂದ ಹಾಸನದತ್ತ ಸಾಗಿತು.