ಆ್ಯಪ್ನಗರ

ನಿರಾಶ್ರಿತರ ಕೇಂದ್ರಕ್ಕೆ ಲೋಕಾಯುಕ್ತರ ಭೇಟಿ, ಪರಿಶೀಲನೆ

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್‌ ಶೆಟ್ಟಿ ಕುಶಾಲನಗರದಲ್ಲಿರುವ ಸಂತ್ರಸ್ತರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Vijaya Karnataka 31 Aug 2018, 5:00 am
ಕುಶಾಲನಗರ: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್‌ ಶೆಟ್ಟಿ ಕುಶಾಲನಗರದಲ್ಲಿರುವ ಸಂತ್ರಸ್ತರ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Vijaya Karnataka Web lokayukta officers visited kodagu refugee center
ನಿರಾಶ್ರಿತರ ಕೇಂದ್ರಕ್ಕೆ ಲೋಕಾಯುಕ್ತರ ಭೇಟಿ, ಪರಿಶೀಲನೆ


ಕುಶಾಲನಗರದ ಹಾರಂಗಿ ರಸ್ತೆಯಲ್ಲಿರುವ ವಾಲ್ಮೀಕಿ ಭವನ, ಅಂಬೇಡ್ಕರ್‌ ಭವನಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದ ನಂತರ ಸಂತ್ರಸ್ತರಿ ಸಾಂತ್ವನ ಹೇಳಿದರು. ಕೂಡಲೆ ಎಲ್ಲ ರೀತಿಯ ಮೂಲ ಸೌಲಭ್ಯಗಳು ಪೂರೈಕೆಯಾಗಲಿದೆ. ವ್ಯವಸ್ಥೆಗಳು ಸಂಪೂರ್ಣಗೊಳ್ಳುವವರೆಗೆ ಸಣ್ಣಪುಟ್ಟ ಕುಂದುಕೊರತೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸದೆ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಸಂತ್ರಸ್ತರಲ್ಲಿ ಮನವಿ ಮಾಡಿಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಕೇಂದ್ರದ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಕಾರಣ ಮಾಹಿತಿ ಕೊರತೆಯಿಂದ ಸಣ್ಣಪುಟ್ಟ ಲೋಪದೋಷಗಳು ಉಂಟಾಗಿದೆ. ಸಂತ್ರಸ್ತರ ಆಕಾಂಕ್ಷೆ, ನಿರೀಕ್ಷೆಗೆ ತಕ್ಕಂತೆ ಪರಿಹಾರ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಾಧ್ಯಮ ಪ್ರತಿನಿಧಿಗಳು ಸಣ್ಣಪುಟ್ಟ ವಿಚಾರಗಳನ್ನು ದೊಡ್ಡದು ಮಾಡಿ ಬಿಂಬಿಸದಂತೆ,'' ಅವರು ಸಲಹೆ ನೀಡಿದರು.

ಈ ಸಂದರ್ಭ ನ್ಯಾಯಾಧೀಶರಾದ ವಿಜಯಕುಮಾರ್‌ ರೈ, ಲೋಕಾಯುಕ್ತ ಎಸ್ಪಿಗಳಾದ ಮಾದಯ್ಯ, ಶಿವಕುಮಾರ್‌, ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕರಾದ ಸಂಜಯ್‌, ವಿಶೇಷ ಜಿಲ್ಲಾಧಿಕಾರಿ ಡಾ.ರಿಚರ್ಡ್‌ ವಿನ್ಸೆಂಟ್‌ ಡಿ'ಸೋಜ, ಜಿ.ಪಂ. ಸದಸ್ಯೆ ಕೆ.ಪಿ.ಚಂದ್ರಕಲಾ, ಭೂಮಾಪನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶಂಷುದ್ದೀನ್‌, ತಹಸೀಲ್ದಾರ್‌ ಮಹೇಶ್‌ ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ