ಆ್ಯಪ್ನಗರ

ಪ್ರೇಮ ವೈಫಲ್ಯ: ಯುವತಿ ಆತ್ಮಹತ್ಯೆ

ನಾಕೂರು ಶಿರಂಗಾಲದಲ್ಲಿ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka 28 May 2019, 5:00 am
ಸುಂಟಿಕೊಪ್ಪ: ನಾಕೂರು ಶಿರಂಗಾಲದಲ್ಲಿ ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ವಿದ್ಯಾರ್ಥಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web love failure a young girl commits suicide
ಪ್ರೇಮ ವೈಫಲ್ಯ: ಯುವತಿ ಆತ್ಮಹತ್ಯೆ


ಗ್ರಾಮದ ಮನ್ವಿತಾ(17) ಮೃತರು. ಖಾಸಗಿ ಕಾಲೇಜೊಂದರಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮನ್ವಿತಾ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಪ್ರೇಮ ವೈಫಲ್ಯದಿಂದ ಬೇಸತ್ತಿದ್ದ ಈಕೆ ಸಾವಿಗೆ ಶರಣಾಗಿದ್ದಾರೆ. ಡೆತ್‌ನೋಟ್‌ ಬರೆದಿರುವ ಮನ್ವಿತಾ ನನ್ನ ಸಾವಿಗೆ ಇಬ್ಬರು ಯುವಕರು ಕಾರಣ ಎಂದು ತಿಳಿಸಿದ್ದು, ಆ ಪೈಕಿ ಸಮೀಪದ ಏಳನೇ ಹೊಸಕೋಟೆಯ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ