ಮಡಿಕೇರಿ: ಅತ್ಯಾಚಾರ ಎಸಗಿ, ಜೀವ ಬೆದರಿಕೆ ಒಡ್ಡಿದ ಅಪರಾಧಿಗೆ ಇಲ್ಲಿನ ಮೂರನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷಗಳ ಕಠಿಣ ಸಜೆ ಮತ್ತು 10,000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಪಂಜರಿಯವರ ಸಿದ್ದಪ್ಪ ಅಪರಾಧಿ. 2016ರಲ್ಲಿ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ತನ್ನ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಅತ್ಯಾಚಾರ ಎಸಗಿದ್ದ. ಮೊದಲು ಮರದ ದೊಣ್ಣೆಯಿಂದ ಆಕೆಯ ತಲೆಯ ಹಿಂಭಾಗಕ್ಕೆ ಹೊಡೆದಿದ್ದ. ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕೊಲೆ ಮಾಡುವುದಾಗಿ ಬೆದರಿಸಿ, ಅತ್ಯಾಚಾರ ಎಸಗಿದ್ದ. ನಂತರ ವಿಷಯ ಬೇರೆಯಾರಿಗಾದರೂ ತಿಳಿದರೆ ಸಮಸ್ಯೆಯಾಗುತ್ತದೆ ಎಂದು ಭಾವಿಸಿ, ಆಕೆಯನ್ನು ಸಾಯಿಸುವ ಉದ್ದೇಶದಿಂದ ಗಂಟಲಿಗೆ ಒದ್ದು, ಆಕೆ ಸತ್ತಿದ್ದಾಳೆ ಎಂದು ಭಾವಿಸಿ ಸ್ಥಳದಿಂದ ಪರಾರಿಯಾಗಿದ್ದ.
ಸಂತ್ರಸ್ತೆ ನಂತರ ನೀಡಿದ ದೂರಿನ ಮೇರೆಗೆ ಗೋಣಿಕೊಪ್ಪಲು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಮೂರನೇ ಅಧಿಕ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಪವನೇಶ್ ಡಿ., ಸಂತ್ರಸ್ತೆಯನ್ನು ಅಡ್ಡಗಟ್ಟಿ ಎಸಗಿದ ಅಪರಾಧಕ್ಕಾಗಿ 1 ತಿಂಗಳ ಸಾದಾ ಸಜೆ ಮತ್ತು 500 ರೂ. ದಂಡ, ಅತ್ಯಾಚಾರ ಎಸಗಿದ ಅಪರಾಧಕ್ಕಾಗಿ 10 ವರ್ಷಗಳ ಕಠಿಣ ಸಜೆ ಹಾಗೂ 10,000 ರೂ ದಂಡ, ಜೀವ ಬೆದರಿಕೆ ಒಡ್ಡಿದ ಅಪರಾಧಕ್ಕಾಗಿ 3 ವರ್ಷಗಳ ಕಠಿಣ ಸಜೆ ಮತ್ತು 2,500 ರೂ. ದಂಡ ಹಾಗೂ ತೀವ್ರವಾಗಿ ಗಾಯಗೊಳಿಸಿ, ಕೊಲೆ ಮಾಡುವ ಉದ್ದೇಶದಿಂದ ಕುತ್ತಿಗೆಗೆ ಒದ್ದು ಹೋದ ಅಪರಾಧಕ್ಕಾಗಿ 8 ವರ್ಷಗಳ ಸಜೆ ಹಾಗೂ 10,000 ರೂ ದಂಡ ವಿಧಿಸಿ, ತೀರ್ಪು ನೀಡಿದ್ದಾರೆ.
ಪಾವತಿಯಾಗುವ ದಂಡದ ಹಣದಲ್ಲಿ 20,000 ರೂ.ವನ್ನು ಸಂತ್ರಸ್ತೆಗೆ ನೀಡಲು ಆದೇಶಿಸಲಾಗಿದೆ. ಸಂತ್ರಸ್ತೆ ಪರವಾಗಿ ಸರಕಾರಿ ಅಭಿಯೋಜಕಿ ಎಂ.ಕೃಷ್ಣವೇಣಿ ವಾದ ಮಂಡಿಸಿದ್ದರು.
ಪಂಜರಿಯವರ ಸಿದ್ದಪ್ಪ ಅಪರಾಧಿ. 2016ರಲ್ಲಿ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದಲ್ಲಿ ತನ್ನ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಅತ್ಯಾಚಾರ ಎಸಗಿದ್ದ. ಮೊದಲು ಮರದ ದೊಣ್ಣೆಯಿಂದ ಆಕೆಯ ತಲೆಯ ಹಿಂಭಾಗಕ್ಕೆ ಹೊಡೆದಿದ್ದ. ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕೊಲೆ ಮಾಡುವುದಾಗಿ ಬೆದರಿಸಿ, ಅತ್ಯಾಚಾರ ಎಸಗಿದ್ದ. ನಂತರ ವಿಷಯ ಬೇರೆಯಾರಿಗಾದರೂ ತಿಳಿದರೆ ಸಮಸ್ಯೆಯಾಗುತ್ತದೆ ಎಂದು ಭಾವಿಸಿ, ಆಕೆಯನ್ನು ಸಾಯಿಸುವ ಉದ್ದೇಶದಿಂದ ಗಂಟಲಿಗೆ ಒದ್ದು, ಆಕೆ ಸತ್ತಿದ್ದಾಳೆ ಎಂದು ಭಾವಿಸಿ ಸ್ಥಳದಿಂದ ಪರಾರಿಯಾಗಿದ್ದ.
ಸಂತ್ರಸ್ತೆ ನಂತರ ನೀಡಿದ ದೂರಿನ ಮೇರೆಗೆ ಗೋಣಿಕೊಪ್ಪಲು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಮೂರನೇ ಅಧಿಕ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಪವನೇಶ್ ಡಿ., ಸಂತ್ರಸ್ತೆಯನ್ನು ಅಡ್ಡಗಟ್ಟಿ ಎಸಗಿದ ಅಪರಾಧಕ್ಕಾಗಿ 1 ತಿಂಗಳ ಸಾದಾ ಸಜೆ ಮತ್ತು 500 ರೂ. ದಂಡ, ಅತ್ಯಾಚಾರ ಎಸಗಿದ ಅಪರಾಧಕ್ಕಾಗಿ 10 ವರ್ಷಗಳ ಕಠಿಣ ಸಜೆ ಹಾಗೂ 10,000 ರೂ ದಂಡ, ಜೀವ ಬೆದರಿಕೆ ಒಡ್ಡಿದ ಅಪರಾಧಕ್ಕಾಗಿ 3 ವರ್ಷಗಳ ಕಠಿಣ ಸಜೆ ಮತ್ತು 2,500 ರೂ. ದಂಡ ಹಾಗೂ ತೀವ್ರವಾಗಿ ಗಾಯಗೊಳಿಸಿ, ಕೊಲೆ ಮಾಡುವ ಉದ್ದೇಶದಿಂದ ಕುತ್ತಿಗೆಗೆ ಒದ್ದು ಹೋದ ಅಪರಾಧಕ್ಕಾಗಿ 8 ವರ್ಷಗಳ ಸಜೆ ಹಾಗೂ 10,000 ರೂ ದಂಡ ವಿಧಿಸಿ, ತೀರ್ಪು ನೀಡಿದ್ದಾರೆ.
ಪಾವತಿಯಾಗುವ ದಂಡದ ಹಣದಲ್ಲಿ 20,000 ರೂ.ವನ್ನು ಸಂತ್ರಸ್ತೆಗೆ ನೀಡಲು ಆದೇಶಿಸಲಾಗಿದೆ. ಸಂತ್ರಸ್ತೆ ಪರವಾಗಿ ಸರಕಾರಿ ಅಭಿಯೋಜಕಿ ಎಂ.ಕೃಷ್ಣವೇಣಿ ವಾದ ಮಂಡಿಸಿದ್ದರು.