ಆ್ಯಪ್ನಗರ

ಮಂಗಳೂರು ಗೋಲಿಬಾರ್‌ಗೆ ಇಬ್ಬರು ಬಲಿ - ಘಟನೆ ಖಂಡಿಸಿ ಕೊಡಗಿನ ಹಲವೆಡೆ ಬಂದ್

ಪೌರತ್ವ ಕಾಯ್ದೆ ಪ್ರತಿಭಟನೆಯಲ್ಲಿ ಮಂಗಳೂರಿನಲ್ಲಿ ನಡೆಯ ಪೊಲೀಸ್ ಫೈರಿಂಗ್ ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆ ಖಂಡಿಸಿ ಕೊಡಗು ಜಿಲ್ಲೆಯ ಹಲವೆಡೆ ಬಂದ್ ಮಾಡುವ ಮೂಲಕ ಪ್ರತಿಭಟನೆ ನಡೆಯುತ್ತಿದೆ.

Vijaya Karnataka Web 20 Dec 2019, 1:06 pm
ಮಡಿಕೇರಿ: ಪೌರತ್ವ ತಿದ್ದುಪಡಿ ಕಾಯ್ದೆ 2019 ವಿರೋಧಿಸಿ ಮಂಗಳೂರಿನಲ್ಲಿ ಗುರುವಾರ ನಡೆದ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಪೊಲೀಸ್ ಗುಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದು ಘಟನೆ ಖಂಡಿಸಿ ಕೊಡಗು ಜಿಲ್ಲೆಯಲ್ಲೂ ಬಂದ್ ನಡೆದಿದೆ. ಜಿಲ್ಲೆಯ ಹಲವೆಡೆ ಜನರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಘಟನೆಯನ್ನು ಖಂಡಿಸಿದ್ದಾರೆ.
Vijaya Karnataka Web mangalore police firing kodagu district shutdown
ಮಂಗಳೂರು ಗೋಲಿಬಾರ್‌ಗೆ ಇಬ್ಬರು ಬಲಿ - ಘಟನೆ ಖಂಡಿಸಿ ಕೊಡಗಿನ ಹಲವೆಡೆ ಬಂದ್


ಗುರುವಾರ ಮಂಗಳೂರಿನ ನೆಲ್ಲಿಕಾಯಿ ರಸ್ತೆಯ ಬಳಿ ನಡೆದ ಪ್ರತಿಭಟನೆಯ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಸಂಘರ್ಷ ನಡೆದಿತ್ತು. ಈ ವೇಳೆ ಪೊಲೀಸರ ಗುಂಡಿನ ದಾಳಿಗೆ ಇಬ್ಬರು ಮೃತಪಟ್ಟಿದ್ದಾರೆ. ಈ ಘಟನೆಯ ಬಳಿಕ ಮಂಗಳೂರಿನಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಗೋಲಿಬಾರ್‌ ಘಟನೆಗೆ ವಿರೋಧ ವ್ಯಕ್ತವಾಗುತ್ತಿದ್ದು ಪ್ರಕರಣ ಖಂಡಿಸಿ ಕೊಡಗು ಜಿಲ್ಲೆಯ ವಿರಾಜಪೇಟೆ, ನಾಪೋಕ್ಲು, ಸಿದ್ದಾಪುರ, ನೆಲ್ಯ ಹುದುಕೇರಿ, ಪಾಲಿಬೆಟ್ಟದಲ್ಲಿ ಬಂದ್ ನಡೆದಿದೆ. ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ವ್ಯಾಪಾರ ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲಿಸಿದ್ದಾರೆ.

ಪೌರತ್ವ ಪ್ರತಿಭಟನೆ: ಮಂಗಳೂರಿಗೆ ವರದಿಗೆ ಬಂದಿದ್ದ ಕೇರಳ ಪತ್ರಕರ್ತರ ಬಂಧನ

ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ಶಾಂತವಾಗಿದೆ. ಮಂಗಳೂರಿನಲ್ಲೂ ವ್ಯಾಪಕ ಭದ್ರತೆಯನ್ನು ಕೈಗೊಳ್ಳಲಾಗಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ