ಆ್ಯಪ್ನಗರ

ಬೇಕರಿ ಬದಲು ಮಾಂಸಾಹಾರ ಮಾರಾಟ: ಪ್ರಕರಣ ದಾಖಲು

ಬೇಕರಿ ತಿನಿಸು ಮಾರಾಟಕ್ಕೆ ಪಟ್ಟಣ ಪಂಚಾಯಿತಿಯಿಂದ ಪರವಾನಗಿ ಪಡೆದು ಶವರ್ಮ (ಕೋಳಿ ಮಾಂಸಾಹಾರ) ಮಾರಾಟಮಾಡುತ್ತಿದ್ದು, ಇದನ್ನು ಪ್ರಶ್ನಿಸಲು ಹೋದ ಪಪಂ ಸಿಬ್ಬಂದಿಗೆ ಬೆದರಿಕೆ ಹಾಕಿದ ಬೇಕರಿ ಮಾಲೀಕನ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijaya Karnataka 18 Dec 2018, 8:54 pm
ವಿರಾಜಪೇಟೆ: ಬೇಕರಿ ತಿನಿಸು ಮಾರಾಟಕ್ಕೆ ಪಟ್ಟಣ ಪಂಚಾಯಿತಿಯಿಂದ ಪರವಾನಗಿ ಪಡೆದು ಶವರ್ಮ (ಕೋಳಿ ಮಾಂಸಾಹಾರ) ಮಾರಾಟಮಾಡುತ್ತಿದ್ದು, ಇದನ್ನು ಪ್ರಶ್ನಿಸಲು ಹೋದ ಪಪಂ ಸಿಬ್ಬಂದಿಗೆ ಬೆದರಿಕೆ ಹಾಕಿದ ಬೇಕರಿ ಮಾಲೀಕನ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web meat sale instead of bakery item complaint registered
ಬೇಕರಿ ಬದಲು ಮಾಂಸಾಹಾರ ಮಾರಾಟ: ಪ್ರಕರಣ ದಾಖಲು


ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿರುವ ಪಟ್ಟಣ ಪಂಚಾಯಿತಿಯ ವಾಣಿಜ್ಯ ಸಂಕೀರ್ಣದ ಮಹಡಿಯಲ್ಲಿನ ಮಳಿಗೆಯಲ್ಲಿ ಬೇಕರಿ ತಿನಿಸುಗಳನ್ನು ಮಾರಾಟ ಮಾಡಲು ಪಟ್ಟಣ ಪಂಚಾಯಿತಿಯಿಂದ ಪರವಾನಗಿ ಪಡೆದು, ಬಳಿಕ ಅಲ್ಲಿ ಕೋಳಿ ಮಾಂಸದ ಶವರ್ಮ ತಿನಿಸುಗಳನ್ನು ಮಾರಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅಲ್ಲದೆ ಶವರ್ಮ ಮಾಡುವ ಯಂತ್ರವನ್ನು ಅಂಗಡಿ ಆವರಣದಲ್ಲಿ ಇರಿಸಿದ ಕಾರಣ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಸಾರ್ವಜನಿಕರು ಪಟ್ಟಣ ಪಂಚಾಯಿತಿಗೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಪಂಚಾಯಿತಿ ಅಧಿಕಾರಿ ಸೋಮಶೇಖರ್‌ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಆದರಿಂದ ಸರಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಬೇಕರಿ ಮಾಲೀಕ ತನ್ಸಿರ್‌ ವಿರುದ್ಧ ನಗರ ಠಾಣೆಯಲ್ಲಿ ಪಪಂ ಮುಖ್ಯಾಧಿಕಾರಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ ಪರವಾನಗಿಯನ್ನು ರದ್ದುಗೊಳಿಸುವುದಾಗಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎ.ಎಂ.ಶ್ರೀಧರ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ