ಆ್ಯಪ್ನಗರ

ಅಪಘಾತದಲ್ಲಿ ಗಾಯಗೊಂಡ ಜಿಂಕೆ ರಕ್ಷಣೆಗೆ ಧಾವಿಸಿದ ಸಚಿವ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿರ್ಬಂಧ ತೆರವುಗೊಳಿಸುವಂತೆ ಕೇರಳ ಸರಕಾರ ಒತ್ತಡ ತರುತ್ತಿದೆ. ಆದರೆ, ಬೆಳಗಿನ ಹೊತ್ತಿನಲ್ಲೇ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡು ಬಿದ್ದಿದ್ದ ಜಿಂಕೆಯನ್ನು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ರಕ್ಷಣೆ ಮಾಡಿದ್ದಾರೆ.

Vijaya Karnataka 4 Aug 2018, 5:00 am
ಕುಶಾಲನಗರ (ಕೊಡಗು ಜಿಲ್ಲೆ): ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿರ್ಬಂಧ ತೆರವುಗೊಳಿಸುವಂತೆ ಕೇರಳ ಸರಕಾರ ಒತ್ತಡ ತರುತ್ತಿದೆ. ಆದರೆ, ಬೆಳಗಿನ ಹೊತ್ತಿನಲ್ಲೇ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡು ಬಿದ್ದಿದ್ದ ಜಿಂಕೆಯನ್ನು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ರಕ್ಷಣೆ ಮಾಡಿದ್ದಾರೆ.
Vijaya Karnataka Web MSR-0308-2-1-IMG_1871


ಮಡಿಕೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ತಮ್ಮ ಕಚೇರಿ ಉದ್ಘಾಟನಾ ಕಾರ‍್ಯಕ್ರಮಕ್ಕೆ ಕೊಡಗು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುವ ವೇಳೆ ಕುಶಾಲನಗರ ತಾಲೂಕಿನ ಆನೆಕಾಡು ಸಮೀಪ ಅಪರಿಚಿತ ವಾಹನ ಜಿಂಕೆಯೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಇದರಿಂದ ಜಿಂಕೆ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ಬಿದ್ದಿತ್ತು. ಗಾಯಗೊಂಡ ಜಿಂಕೆಯನ್ನು ನೋಡಿದ ಸಚಿವ ಸಾ.ರಾ.ಮಹೇಶ್‌ ತಮ್ಮ ಕಾರು ಚಾಲಕನಿಗೆ ವಾಹನ ನಿಲ್ಲಿಸುವಂತೆ ಹೇಳಿ, ಕಾರಿನಲ್ಲಿದ್ದ ನೀರಿನ ಬಾಟಲಿಯ ನೀರು ಕುಡಿಸಿ ಆರೈಕೆ ಮಾಡಿದ್ದಾರೆ.

ಇವರೊಂದಿಗೆ ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸುಮನ್‌ ಡಿ.ಪನ್ನೇಕರ್‌ ಅವರು ಜಿಂಕೆಯ ಆರೈಕೆಯಲ್ಲಿ ಕೈಜೋಡಿಸಿದರು. ಬಳಿಕ ಸಚಿವ ಸಾ.ರಾ.ಮಹೇಶ್‌ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡು ಗಾಯಗೊಂಡ ಜಿಂಕೆಗೆ ಹೆಚ್ಚಿನ ಚಿಕಿತ್ಸೆ ಕೊಡಿಸುವಂತೆ ಸೂಚನೆ ನೀಡಿ ಹೊರಟರು.

ವಲಯ ಅರಣ್ಯಾಧಿಕಾರಿ ಕಿರಣ್‌ ಮಾತನಾಡಿ, ''ಆನೆಕಾಡು ಬಳಿ ಸುಮಾರು 2ರಿಂದ 3 ವರ್ಷದ ಹೆಣ್ಣು ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಹೋಗಿದೆ. ಘಟನೆಯಿಂದ ಜಿಂಕೆ ಗಾಯಗೊಂಡಿದ್ದು, ಗಾಬರಿಗೊಂಡಿದೆ. ಈಗಾಗಲೇ ಗಂಧದ ಕೋಟಿ ಬಳಿ ಅದಕ್ಕೆ ಚಿಕಿತ್ಸೆ ಕೊಡಿಸಲಾಗಿದ್ದು, ಕಾವೇರಿ ನಿಸರ್ಗಧಾಮದಲ್ಲಿ ಜಿಂಕೆಯನ್ನು ಬಿಡಲಾಗಿದೆ. ಎರಡು ದಿನಗಳ ಕಾಲ ಅದರ ಚಲನವಲನ ನೋಡಿಕೊಂಡು ಆರೋಗ್ಯದಲ್ಲಿ ಚೇತರಿಕೆ ಕಂಡ ಬಳಿಕ ಕಾಡಿಗೆ ಬಿಡಲಾಗುವುದು,'' ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ