ಆ್ಯಪ್ನಗರ

ಕಲ್ಲು ಕ್ವಾರಿಗೆ ಹಾರಿ ಮಗಳೊಂದಿಗೆ ತಾಯಿ ಆತ್ಮಹತ್ಯೆ

ತಾಯಿ ತನ್ನ ಮಗಳೊಂದಿಗೆ ನೀರು ತುಂಬಿದ ಕಲ್ಲು ಕ್ವಾರಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಸಮೀಪದ ಗೊಂದಿಬಸವನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

Vijaya Karnataka 5 Dec 2018, 5:00 am
ಕುಶಾಲನಗರ (ಕೊಡಗು ಜಿಲ್ಲೆ): ತಾಯಿ ತನ್ನ ಮಗಳೊಂದಿಗೆ ನೀರು ತುಂಬಿದ ಕಲ್ಲು ಕ್ವಾರಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಸಮೀಪದ ಗೊಂದಿಬಸವನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
Vijaya Karnataka Web mother commits suicide with her daughter flew to quarry
ಕಲ್ಲು ಕ್ವಾರಿಗೆ ಹಾರಿ ಮಗಳೊಂದಿಗೆ ತಾಯಿ ಆತ್ಮಹತ್ಯೆ


ಗ್ರಾಮದ ಸ್ವಾಮಿ ನಾಯಕ ಎಂಬುವವರ ಪತ್ನಿ ತಾಯಮ್ಮ (35), ಪುತ್ರಿ ದಿವ್ಯಾ (10) ಮೃತರು. ಮಂಗಳವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಕ್ವಾರಿ ಬಳಿ ಮೃತರ ಚಪ್ಪಲಿಗಳು ಪತ್ತೆಯಾಗಿವೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಗಳೊಂದಿಗೆ ನೀರಿನಲ್ಲಿ ಶೋಧ ಕಾರ್ಯ ನಡೆಸಿದಾಗ ಮೃತದೇಹಗಳು ಪತ್ತೆಯಾಗಿವೆ.

ಮೃತ ಬಾಲಕಿ ದಿವ್ಯಾ ಗೊಂದಿಬಸವನಹಳ್ಳಿ ಸರಕಾರಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದು, ಪತಿ ಸ್ವಾಮಿ ನಾಯಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ