ಆ್ಯಪ್ನಗರ

ಕಂದಾಯ ಅಧಿಕಾರಿಗಳಿಂದ ದೌರ್ಜನ್ಯ: ಆರೋಪ

ಪರಿಶಿಷ್ಟ ಜಾತಿ ಆದಿ ಕರ್ನಾಟಕ ಜನಾಂಗಕ್ಕೆ ಸೇರಿದ ಕುಟುಂಬವೊಂದರ ಮೇಲೆ ಕಂದಾಯ ಇಲಾಖೆಯ ಅಧಿಕಾರಿಗಳು ದೌರ್ಜನ್ಯವೆಸಗುತ್ತಿದ್ದು, ಜಿಲ್ಲಾಧಿಕಾರಿಗಳು ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸಂಚಾಲಕ ಕೆ.ಬಿ.ರಾಜು ಒತ್ತಾಯಿಸಿದ್ದಾರೆ.

Vijaya Karnataka 8 Jan 2019, 5:00 am
ಸೋಮವಾರಪೇಟೆ: ಪರಿಶಿಷ್ಟ ಜಾತಿ ಆದಿ ಕರ್ನಾಟಕ ಜನಾಂಗಕ್ಕೆ ಸೇರಿದ ಕುಟುಂಬವೊಂದರ ಮೇಲೆ ಕಂದಾಯ ಇಲಾಖೆಯ ಅಧಿಕಾರಿಗಳು ದೌರ್ಜನ್ಯವೆಸಗುತ್ತಿದ್ದು, ಜಿಲ್ಲಾಧಿಕಾರಿಗಳು ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಸಂಚಾಲಕ ಕೆ.ಬಿ.ರಾಜು ಒತ್ತಾಯಿಸಿದ್ದಾರೆ.
Vijaya Karnataka Web oppression by revenue officer alleged
ಕಂದಾಯ ಅಧಿಕಾರಿಗಳಿಂದ ದೌರ್ಜನ್ಯ: ಆರೋಪ


''ಮುಳ್ಳುಸೋಗೆ ಗ್ರಾಪಂ ವ್ಯಾಪ್ತಿಯ ಗುಮ್ಮನಕೊಲ್ಲಿ ಗ್ರಾಮದ ಸರ್ವೆ ನಂ.5/ಪಿ2ನ 5 ಸೆಂಟ್‌ ಪೈಸಾರಿ ಜಾಗದಲ್ಲಿ ಬಿ.ಆರ್‌.ರಾಜು ಕುಟುಂಬ 40 ವರ್ಷಗಳಿಂದ ಜೀವನ ಸಾಗಿಸುತ್ತಿದೆ. 8 ವರ್ಷಗಳಿಂದಲೂ ಈ ಕುಟುಂಬದವರನ್ನು ಒಕ್ಕಲೆಬ್ಬಿಸಲು ಕಂದಾಯ ಇಲಾಖೆ ಪ್ರಯತ್ನ ಮುಂದುವರಿಸಿದೆ. ಈಗಾಗಲೆ ಫಾರಂ 57 ಸಲ್ಲಿಸಿದ್ದು, ಕಂದಾಯ ಇಲಾಖೆ ನೊಂದ ಕುಟುಂಬಕ್ಕೆ ಹಕ್ಕುಪತ್ರ ನೀಡಬೇಕು. ಇನ್ನು ಮುಂದೆ ಕಂದಾಯ ಇಲಾಖೆ ಕಿರುಕುಳ ಮುಂದುವರಿಸಿದರೆ, ಜಿಲ್ಲಾಧಿಕಾರಿ ಕಚೇರಿ ಎದುರು ಸಂಘಟನೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು,'' ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

''ಕುಶಾಲನಗರ ಸುತ್ತಮುತ್ತ ಶ್ರೀಮಂತರು, ಭೂಮಾಫಿಯಾ ಪೈಸಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಹಕ್ಕುಪತ್ರ ಮಾಡಿಸಿಕೊಂಡು ಮಾರಾಟ ಮಾಡುತ್ತಿದ್ದಾರೆ. ಕಂದಾಯ ಇಲಾಖೆಯ ಕೆಲ ಅಧಿಕಾರಿಗಳು ಅಕ್ರಮದೊಂದಿಗೆ ಶಾಮೀಲಾಗಿದ್ದಾರೆ,'' ಎಂದು ದೂರಿದ ಅವರು, ''ಬಡ ದಲಿತ ಕುಟುಂಬದ ಮನೆಯನ್ನು ಕೆಡವಿ ದೌರ್ಜನ್ಯವೆಸಗಿದ್ದಾರೆ,'' ಎಂದರು.

''ನಮ್ಮ ಕುಟುಂಬದ ಮೇಲಿನ ಕಂದಾಯ ಇಲಾಖೆಯ ದೌರ್ಜನ್ಯದ ಕುರಿತು ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವರು, ಮಾಜಿ ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ, ಮುಖ್ಯಮಂತ್ರಿ ಕುಮಾರಸ್ವಾಮಿ, ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್‌ ಅವರಿಗೂ ಮನವಿ ಸಲ್ಲಿಸಿದ್ದೇವೆ. ಜಿಲ್ಲಾಧಿಕಾರಿಗಳಿಗೆ ಎರಡು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೂ ನ್ಯಾಯ ಸಿಕ್ಕಿಲ್ಲ. ಕಂದಾಯ ಇಲಾಖೆಯ ಕಿರುಕುಳ ನಿಂತಿಲ್ಲ,'' ಎಂದು ಮಂಜುಳಾ ರಾಜು ಹೇಳಿದರು.

ಗೋಷ್ಠಿಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಕೆ.ಟಿ.ಈರಯ್ಯ, ಬಿ.ಆರ್‌.ರಾಜು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ