ಆ್ಯಪ್ನಗರ

ಶಾಂತಿ ಸೌಹಾರ್ದದ ರಂಜಾನ್‌ಗೆ ಸಲಹೆ

ರಂಜಾನ್‌ ಹಬ್ಬವನ್ನು ಮುಸ್ಲಿಮರು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಕೊಡದೆ ಶಾಂತಿ ಸೌಹಾರ್ದದಿಂದ ಆಚರಿಸಬೇಕು ಎಂದು ಸುಂಟಿಕೊಪ್ಪ ಠಾಣಾಧಿಕಾರಿ ಜಯರಾಮ್‌ ತಿಳಿಸಿದರು.

Vijaya Karnataka 13 Jun 2018, 5:00 am
ಸುಂಟಿಕೊಪ್ಪ: ರಂಜಾನ್‌ ಹಬ್ಬವನ್ನು ಮುಸ್ಲಿಮರು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಕೊಡದೆ ಶಾಂತಿ ಸೌಹಾರ್ದದಿಂದ ಆಚರಿಸಬೇಕು ಎಂದು ಸುಂಟಿಕೊಪ್ಪ ಠಾಣಾಧಿಕಾರಿ ಜಯರಾಮ್‌ ತಿಳಿಸಿದರು.
Vijaya Karnataka Web peaceful and harmonious ramzan suggested
ಶಾಂತಿ ಸೌಹಾರ್ದದ ರಂಜಾನ್‌ಗೆ ಸಲಹೆ


ಗ್ರಾ.ಪಂ. ಅಧ್ಯಕ್ಷರ ಸಮ್ಮುಖದಲ್ಲಿ ಪೊಲೀಸ್‌ ಠಾಣೆಯಲ್ಲಿ ರಂಜಾನ್‌ ಆಚರಣೆಗೆ ಸಂಬಂಧಿಸಿದಂತೆ ನಡೆದ ವಿವಿಧ ಧರ್ಮಗಳ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಮುಸ್ಲಿಮರು ಹಬ್ಬದ ದಿನ ಮೆರವಣಿಗೆ ನಡೆಸುವಾಗ ಇಲಾಖೆಯಿಂದ ಸೂಕ್ತ ಬಂದೋಬಸ್ತ್‌ ಕಲ್ಪಿಸಲಾಗುವುದು. ಸಂವಿಧಾನದ ಹಕ್ಕು ಮತ್ತು ಕರ್ತವ್ಯವನ್ನು ಎಲ್ಲ ಧರ್ಮದವರು ಪಾಲಿಸಬೇಕು. ಕಾನೂನಿಗೆ ವಿರುದ್ಧವಾಗಿ ಯಾರೇ ನಡೆದರೂ ನಿರ್ದಾಕ್ಷಿಣ್ಯವಾಗಿ ಅಂತಹವರ ವಿರುದ್ಧ ಕ್ರಮ ಕೈ ಗೊಳ್ಳಲಾಗುವುದು ಎಂದರು.

ಎಎಸ್‌ಐ ಪಾರ್ಥ ಮಾತನಾಡಿ, ಸುಂಟಿಕೊಪ್ಪದಲ್ಲಿ ಎಲ್ಲ ಧರ್ಮೀಯರು ನೆಲೆಸಿದ್ದಾರೆ. ಅನ್ಯೋನ್ಯತೆಯಿಂದ ಜೀವನ ಸಾಗಿಸುತ್ತಿದ್ದಾರೆ. ಸಣ್ಣ ಪುಟ್ಟ ವಿಚಾರವನ್ನು ದೊಡ್ಡದು ಮಾಡದೆ ಶಾಂತಿಯನ್ನು ಕಾಪಾಡಬೇಕು ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಸ್‌ಮೇರಿ ರಾಡ್ರಿಗಸ್‌. ಉಪಾಧ್ಯಕ್ಷ ಪಿ.ಆರ್‌.ಸುಕುಮಾರ್‌, ನಗರ ಬಿಜೆಪಿ ಅಧ್ಯಕ್ಷ ಪಿ.ಆರ್‌.ಸುನೀಲ್‌ಕುಮಾರ್‌, ಮಾಜಿ ಅಧ್ಯಕ್ಷ ಬಿ.ಕೆ. ಮೋಹನ ಹಾಜರಿದ್ದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ