ಆ್ಯಪ್ನಗರ

ಬೆಂಗಳೂರು ಬಾಂಬ್‌ ಸ್ಫೋಟ ಪ್ರಕರಣ: ವಿಚಾರಣೆಗೆ ಆರೋಪಿಯನ್ನು ಕೇರಳಕ್ಕೆ ಕರೆದೊಯ್ದ ಪೊಲೀಸರು

ಬೆಂಗಳೂರು ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸಲೀಂನನ್ನು ಹೆಚ್ಚಿನ ವಿಚಾರಣೆಗೆ ಭಾನುವಾರ ಮಾಕುಟ್ಟ ಮಾರ್ಗವಾಗಿ ಕೇರಳಕ್ಕೆ ಕರೆದೊಯ್ಯಲಾಯಿತು.

Vijaya Karnataka 22 Oct 2018, 5:00 am
ಮಡಿಕೇರಿ: ಬೆಂಗಳೂರು ಸರಣಿ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸಲೀಂನನ್ನು ಹೆಚ್ಚಿನ ವಿಚಾರಣೆಗೆ ಭಾನುವಾರ ಮಾಕುಟ್ಟ ಮಾರ್ಗವಾಗಿ ಕೇರಳಕ್ಕೆ ಕರೆದೊಯ್ಯಲಾಯಿತು.
Vijaya Karnataka Web police arrested the accused in the bangalore blasts case
ಬೆಂಗಳೂರು ಬಾಂಬ್‌ ಸ್ಫೋಟ ಪ್ರಕರಣ: ವಿಚಾರಣೆಗೆ ಆರೋಪಿಯನ್ನು ಕೇರಳಕ್ಕೆ ಕರೆದೊಯ್ದ ಪೊಲೀಸರು


ಕೇರಳ ಮೂಲದ ಕಣ್ಣೂರು ಜಿಲ್ಲೆಯ ಪಿಣರಾಯಿ ನಿವಾಸಿ ಸಲಿಂ (41) ಎಂಬಾತನನ್ನು ಬೆಂಗಳೂರು ಸಿಸಿಬಿ ಪೊಲೀಸ್‌ ಅಧಿಕಾರಿಗಳಾದ ಸುಬ್ರಮಣಿ, ಮನೋಜ್‌ ಕುಮಾರ್‌, ಮಡಿವಾಳ ಪೊಲೀಸ್‌ ಠಾಣೆಯ ಇನ್ಸ್‌ಸ್ಪೆಕ್ಟರ್‌ ನಾರಾಯಣ ಗೌಡ ನೇತೃತ್ವದಲ್ಲಿ ಶಸ್ತ್ರಸಜ್ಜಿತ ಪೊಲೀಸ್‌ ಪಡೆಯ ಭದ್ರತೆಯಲ್ಲಿ ಹೆಚ್ಚಿನ ವಿಚಾರಣೆಗಾಗಿ ಶನಿವಾರ ಕೇರಳಕ್ಕೆ ಕರೆದೊಯ್ಯಲಾಗುತ್ತಿತ್ತು.

ಈ ವೇಳೆ ಕತ್ತಲಾದ ಕಾರಣ ಭದ್ರತೆ ದೃಷ್ಟಿಯಿಂದ ವಿರಾಜಪೇಟೆ ನಗರ ಠಾಣೆಯಲ್ಲಿ ಆರೋಪಿಯನ್ನು ಉಳಿಸಿಕೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಠಾಣೆಗೆ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು.

ಭಾನುವಾರ ಬೆಳಗ್ಗೆ 9.30ಕ್ಕೆ ಆರೋಪಿಯನ್ನು ಮಾಕುಟ್ಟ ಮಾರ್ಗವಾಗಿ ಕೇರಳ ರಾಜ್ಯಕ್ಕೆ ಹೆಚ್ಚಿನ ತನಿಖೆಗಾಗಿ ಕರೆದೊಯ್ಯಲಾಯಿತು. ಪಟ್ಟಣ ಪೊಲೀಸ್‌ ಠಾಣೆಯ ಠಾಣಾಧಿಕಾರಿ ಸಂತೋಷ್‌ ಕಶ್ಯಪ್‌ ಮತ್ತು ಸಿಬ್ಬಂದಿ ಸಹಕಾರ ನೀಡಿದರು.

2008ರಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸರಣಿ ಬಾಂಬ್‌ ಸ್ಫೋಟ ಪ್ರಕರಣದ 30 ಆರೋಪಿಗಳಲ್ಲಿ ಸಲೀಂ ಒಬ್ಬ. ಬೆಂಗಳೂರು ಸಿಸಿಬಿ ಪೊಲೀಸರು ಈತನನ್ನು ಕೇರಳದಲ್ಲಿ 10 ದಿನಗಳ ಹಿಂದೆ ಬಂಧಿಸಿ, ಬೆಂಗಳೂರು ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿತ್ತು. ಪೊಲೀಸರ ಮನವಿ ಮೇರೆಗೆ ಅ.23ರವರೆಗೆ ಆರೋಪಿಯನ್ನು ಪೊಲೀಸ್‌ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿತ್ತು. ಅದರಂತೆ ಹೆಚ್ಚಿನ ವಿಚಾರಣೆಗಾಗಿ ಕೇರಳಕ್ಕೆ ಕರೆದೊಯ್ಯಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ