ಆ್ಯಪ್ನಗರ

ಕಾವೇರಿ ತುಲಾ ಸಂಕ್ರಮಣ ಹಿನ್ನೆಲೆ ತಲಕಾವೇರಿಯಲ್ಲಿ ಪೂರ್ವ ಸಿದ್ಧತಾ ಸಭೆ

ತೀರ್ಥೋದ್ಭವ ಸಂದರ್ಭ ಅಂತರ ಕಾಯ್ದುಕೊಳ್ಳಬೇಕಿದೆ. ತಲಕಾವೇರಿಯಲ್ಲಿ ವಿಪರೀತ ಚಳಿಯಿದ್ದು, ಈ ಸಂದರ್ಭ ಸೋಂಕು ಹರಡುವ ಸಾಧ್ಯತೆ ಹೆಚ್ಚಿದ್ದು, ಎಚ್ಚರ ವಹಿಸುವುದು ಅಗತ್ಯ ಎಂದು ಕೆ.ಜಿ ಬೋಪಯ್ಯ ಸಲಹೆ ನೀಡಿದರು.

Vijaya Karnataka Web 10 Oct 2020, 1:19 pm
ಮಡಿಕೇರಿ: ಅಕ್ಟೋಬರ್ 17ರ ಕಾವೇರಿ ತುಲಾ ಸಂಕ್ರಮಣ ಸಂಬಂಧ ಶಾಸಕ ಕೆಜಿ ಬೋಪಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ಪೂರ್ವ ಸಿದ್ಧತಾ ಸಭೆ ನಡೆಯಿತು.
Vijaya Karnataka Web kodagu


ಭಾಗಮಂಡಲದ ಭಗಂಡೇಶ್ವರ ದೇವಾಲಯದ ಮುಡಿ ಕಟ್ಟಡದಲ್ಲಿ ನಡೆದ ಸಭೆಯಲ್ಲಿ ಕೆ.ಜಿ ಬೋಪಯ್ಯ ಮಾತನಾಡಿ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಅತ್ಯಂತ ಎಚ್ಚರಿಕೆಯಿಂದ ಜಾತ್ರಾ ಮಹೋತ್ಸವ ನಡೆಸಬೇಕಿದೆ. ರಾಜ್ಯದ ಬೇರೆ ಜಿಲ್ಲೆಯಗಳಲ್ಲಿ ಪ್ರಕರಣಗಳು ಕಡಿಮೆಯಾಗುತ್ತಿದೆ. ಆದರೆ ಕೊಡಗು ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ ಎಂದರು. ಅಲ್ಲದೇ ತೀರ್ಥೋದ್ಭವ ಸಂದರ್ಭ ಅಂತರ ಕಾಯ್ದುಕೊಳ್ಳಬೇಕಿದೆ. ತಲಕಾವೇರಿಯಲ್ಲಿ ವಿಪರೀತ ಚಳಿಯಿದ್ದು, ಈ ಸಂದರ್ಭ ಸೋಂಕು ಹರಡುವ ಸಾಧ್ಯತೆ ಹೆಚ್ಚಿದ್ದು, ಎಚ್ಚರ ವಹಿಸುವುದು ಅಗತ್ಯ ಎಂದರು.

ಕೊಡಗು: ಕಾವೇರಿ ತೀರ್ಥೋದ್ಭವಕ್ಕೆ ಬರುವ ಭಕ್ತರು ಕೋವಿಡ್‌ ಸರ್ಟಿಫಿಕೇಟ್‌ ತರಬೇಕು

ಆರ್.ಸಿ.ಎಚ್ ಅಧಿಕಾರಿ ಡಾ.ಗೋಪಿನಾಥ್ ಮಾತನಾಡಿ ತಲಕಾವೇರಿ ಮತ್ತು ಭಾಗಮಂಡಲದ ಎರಡು ಕಡೆ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ 72 ಗಂಟೆಗಳ ಮುಂಚಿತವಾಗಿ ಆರ್.ಟಿ.ಪಿ.ಸಿ.ಆರ್ ಮುಖೇನ ಕೊರೊನಾ ಪರೀಕ್ಷೆ ಮಾಡಬೇಕಿದೆ ಎಂದರು. ಸ್ಥಳೀಯ ನಿವಾಸಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 72 ಗಂಟೆಗಳ ಮುಂಚಿತವಾಗಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದರು.

ಕೊಡಗನ್ನು ಉಗ್ರರ ಮತ್ತೊಂದು ತಾಣವಾಗಲು ಅವಕಾಶ ನೀಡಬೇಡಿ: ಶಾಸಕ ಕೆ.ಜಿ. ಬೋಪಯ್ಯ

ದೇವಾಲಯ ಸಮಿತಿ ಅಧ್ಯಕ್ಷ ತಮ್ಮಯ್ಯ ಮಾತನಾಡಿ ಆರೋಗ್ಯ ಇಲಾಖೆ ಕಾವೇರಿ ತೀರ್ಥೋದ್ಭವ ಸಂಬಂಧ ಹೆಚ್ಚು ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು. ಹೊರಗಿನಿಂದ ಬರುವವರಿಗೆ ಥರ್ಮಲ್ ಸ್ಕ್ರೀನಿಂಗ್, ಪಲ್ಸ್ ಆಕ್ಸಿಮೀಟರ್ ಪರೀಕ್ಷೆಯನ್ನು ನಡೆಸಬೇಕು. ಜಾತ್ರೆಯ ಸಂದರ್ಭ ಯಾವುದೇ ಒಬ್ಬ ವ್ಯಕ್ತಿಗೆ ಸೋಂಕು ಹರಡದಂತೆ ಅತ್ಯಂತ ಎಚ್ಚರಿಕೆಯಿಂದ ಜಾತ್ರಾ ಮಹೋತ್ಸವವನ್ನು ನಡೆಸಬೇಕಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ